AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಮಹಾಸಾಗರಕ್ಕೆ ಬಂದ ಚೀನಾ ಹಡಗು, ಬಲ ಹೆಚ್ಚಿಸಿಕೊಳ್ಳಲು ಸರ್ಕಾರದ ಬಳಿ ಕೆಲವು ಬೇಡಿಕೆ ಇಟ್ಟ ಭಾರತೀಯ ನೌಕಾಪಡೆ

ಚೀನಾ ಹಡಗು ಹಿಂದೂಮಹಾಸಾಗರಕ್ಕೆ ಕಾಲಿಟ್ಟಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನೌಕಾಪಡೆ ಕೂಡ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು  ಮುಂದಾಗಿದೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮುಂದೆ ಕೆಲವು ಬೇಡಿಕೆಗಳನ್ನಿಟ್ಟಿದೆ. ನೌಕಾಪಡೆಯು ಇನ್ನೂ ಒಂದು ವಿಮಾನವಾಹಕ ನೌಕೆ, ಮೂರು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳು ಮತ್ತು ಆರು ಡೀಸೆಲ್-ವಿದ್ಯುತ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಸರ್ಕಾರವನ್ನು ಕೇಳಿದೆ.

ಹಿಂದೂಮಹಾಸಾಗರಕ್ಕೆ ಬಂದ ಚೀನಾ ಹಡಗು, ಬಲ ಹೆಚ್ಚಿಸಿಕೊಳ್ಳಲು ಸರ್ಕಾರದ ಬಳಿ ಕೆಲವು ಬೇಡಿಕೆ ಇಟ್ಟ ಭಾರತೀಯ ನೌಕಾಪಡೆ
ಐಎನ್​ಎಸ್ ವಿಕ್ರಾಂತ್
ನಯನಾ ರಾಜೀವ್
|

Updated on: Sep 28, 2023 | 12:25 PM

Share

ಚೀನಾ ಹಡಗು ಹಿಂದೂಮಹಾಸಾಗರಕ್ಕೆ ಕಾಲಿಟ್ಟಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನೌಕಾಪಡೆ ಕೂಡ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು  ಮುಂದಾಗಿದೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮುಂದೆ ಕೆಲವು ಬೇಡಿಕೆಗಳನ್ನಿಟ್ಟಿದೆ. ನೌಕಾಪಡೆಯು ಇನ್ನೂ ಒಂದು ವಿಮಾನವಾಹಕ ನೌಕೆ, ಮೂರು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳು ಮತ್ತು ಆರು ಡೀಸೆಲ್-ವಿದ್ಯುತ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಸರ್ಕಾರವನ್ನು ಕೇಳಿದೆ.

ನೌಕಾಪಡೆಯು ಈ ಎಲ್ಲದರ ಮೂಲಕ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಬಯಸುತ್ತಿದೆ, ಇದರಿಂದ ಅದು ಚೀನಾದ ನೌಕಾಪಡೆಯೊಂದಿಗೆ ಸ್ಪರ್ಧಿಸಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಭಾರತ್ ಅಡಿಯಲ್ಲಿ ಜಲಾಂತರ್ಗಾಮಿಗಳಿಗೆ ವಿಮಾನವಾಹಕ ನೌಕೆಗಳನ್ನು ದೇಶದಲ್ಲೇ ತಯಾರಿಸಲಾಗುವುದು .

ಚೀನಾವು ಮಲಕ್ಕಾ ಜಲಸಂಧಿ ಬಳಿಯ ಕಾಂಬೋಡಿಯಾದಲ್ಲಿ ರೀಮ್‌ನಲ್ಲಿ ಲಾಜಿಸ್ಟಿಕ್ಸ್ ನೆಲೆಯನ್ನು ಸ್ಥಾಪಿಸಿದೆ, ಬಂಗಾಳ ಕೊಲ್ಲಿಯ ಕೊಕೊ ದ್ವೀಪದಲ್ಲಿ ಲಿಸನಿಂಗ್ ಪೋಸ್ಟ್, ಶ್ರೀಲಂಕಾದ ಹಂಬನ್‌ಟೋಟ್ ಬೇಸ್, ಬಲೂಚಿಸ್ತಾನ್‌ನ ಗ್ವಾದರ್, ಇರಾನ್​ನ ಜಸ್ಕ್ ಮತ್ತು ರೆಡ್​ ಸೀನಲ್ಲಿ ನೌಕಾ ನೆಲೆ ನಿರ್ಮಿಸಲಾಗಿದೆ.

2025-2026ರ ವೇಳೆಗೆ ಚೀನಾದ ವಿಮಾನವಾಹಕ ನೌಕೆಗಳು ಹಿಂದೂ ಮಹಾಸಾಗರದಲ್ಲಿ ಗಸ್ತು ತಿರುಗಲಿವೆ ಎಂದು ಹೇಳಲಾಗುತ್ತಿದೆ. ಭಾರತದ ಮೊದಲ ವಿಮಾನವಾಹಕ ನೌಕೆ INS ವಿಕ್ರಮಾದಿತ್ಯ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಮುಂಬೈನ ಮಜಗಾನ್ ಡಾಕ್‌ಯಾರ್ಡ್‌ನಲ್ಲಿ ಮೂರು ಕ್ಯಾಲ್ವರಿ ದರ್ಜೆಯ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಭಾರತವು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. 5000 ಟನ್ ತೂಕದ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳನ್ನು ವಿನ್ಯಾಸಗೊಳಿಸಲು ಮತ್ತು ನಿರ್ಮಿಸಲು ಫ್ರಾನ್ಸ್ ಸಿದ್ಧವಾಗಿದೆ.

ಮತ್ತಷ್ಟು ಓದಿ: ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು

ಇದರ ಹೊರತಾಗಿ, ಪ್ರಾಜೆಕ್ಟ್ 75 ರ ಮಾತುಕತೆಗಳು ಕಾರ್ಯರೂಪಕ್ಕೆ ಬರದಿದ್ದರೆ, ಪ್ರಾಜೆಕ್ಟ್ 76 ರ ಅಡಿಯಲ್ಲಿ ಜಲಾಂತರ್ಗಾಮಿ ನೌಕೆಗಳನ್ನು ವಿನ್ಯಾಸಗೊಳಿಸಲು ಮತ್ತು ನಿರ್ಮಿಸಲು ಫ್ರಾನ್ಸ್ ಸಿದ್ಧವಾಗಿದೆ. ಪ್ರಾಜೆಕ್ಟ್ 75ರ ಅಡಿಯಲ್ಲಿ ಆರು ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?