AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್​ ಘರ್ಷಣೆ ಬಳಿಕ.. ಚೀನಾ ಬುಡಕ್ಕೆ ಬೆಂಕಿ ಇಡಲು ಮುಂದಾಗಿತ್ತು ಭಾರತೀಯ ನೌಕಾಪಡೆ

ದೆಹಲಿ: ಗಲ್ವಾನ್​ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ದೇಶಕ್ಕಾಗಿ ಹೋರಾಡಿ ಮಣಿದ ವೀರ ಯೋಧರ ಬಲಿದಾನವನ್ನು ಇಡೀ ದೇಶ ಎಂದೆಂದಿಗೂ ಮರೆಯೋದಿಲ್ಲ. ಗಡಿಯಲ್ಲಿ ತನ್ನ ವಿಸ್ತಾರವಾದದ ನೀತಿಯನ್ನ ಪ್ರದರ್ಶಿಸಲು ಮುಂದಾದ ಚೀನಾಕ್ಕೆ ಸೆಡ್ಡು ಹೊಡೆದ ಭಾರತೀಯ ಸೇನೆಯ ಶೌರ್ಯಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ, ಭಾರತೀಯ ನೌಕಾಪಡೆ ನಡೆಸಿರುವ ರೋಚಕ ಸಂಗತಿ ಸಹ ಬೆಳಕಿಗೆ ಬಂದಿದೆ. ಹೌದು, ಜೂನ್​ 15ರಂದು ಲಡಾಖ್​ನ ಭೂಭಾಗದಲ್ಲಿರುವ ಗಲ್ವಾನ್​ ಕಣಿವೆಯಲ್ಲಿ ಘರ್ಷಣೆ ನಡೆದ ಕೆಲವೇ ಗಂಟೆಗಳಲ್ಲಿ ಭಾರತೀಯ ನೌಕಾಪಡೆ ತನ್ನ ಅತ್ಯಾಧುನಿಕ ಯುದ್ಧನೌಕೆಯೊಂದನ್ನು […]

ಗಲ್ವಾನ್​ ಘರ್ಷಣೆ ಬಳಿಕ.. ಚೀನಾ ಬುಡಕ್ಕೆ ಬೆಂಕಿ ಇಡಲು ಮುಂದಾಗಿತ್ತು ಭಾರತೀಯ ನೌಕಾಪಡೆ
Indian Navy Recruitment 2021
KUSHAL V
|

Updated on: Aug 30, 2020 | 6:52 PM

Share

ದೆಹಲಿ: ಗಲ್ವಾನ್​ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ದೇಶಕ್ಕಾಗಿ ಹೋರಾಡಿ ಮಣಿದ ವೀರ ಯೋಧರ ಬಲಿದಾನವನ್ನು ಇಡೀ ದೇಶ ಎಂದೆಂದಿಗೂ ಮರೆಯೋದಿಲ್ಲ. ಗಡಿಯಲ್ಲಿ ತನ್ನ ವಿಸ್ತಾರವಾದದ ನೀತಿಯನ್ನ ಪ್ರದರ್ಶಿಸಲು ಮುಂದಾದ ಚೀನಾಕ್ಕೆ ಸೆಡ್ಡು ಹೊಡೆದ ಭಾರತೀಯ ಸೇನೆಯ ಶೌರ್ಯಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ, ಭಾರತೀಯ ನೌಕಾಪಡೆ ನಡೆಸಿರುವ ರೋಚಕ ಸಂಗತಿ ಸಹ ಬೆಳಕಿಗೆ ಬಂದಿದೆ.

ಹೌದು, ಜೂನ್​ 15ರಂದು ಲಡಾಖ್​ನ ಭೂಭಾಗದಲ್ಲಿರುವ ಗಲ್ವಾನ್​ ಕಣಿವೆಯಲ್ಲಿ ಘರ್ಷಣೆ ನಡೆದ ಕೆಲವೇ ಗಂಟೆಗಳಲ್ಲಿ ಭಾರತೀಯ ನೌಕಾಪಡೆ ತನ್ನ ಅತ್ಯಾಧುನಿಕ ಯುದ್ಧನೌಕೆಯೊಂದನ್ನು ಚೀನಾದ ದಕ್ಷಿಣ ಭಾಗಕ್ಕೆ ಅಂಟಿಕೊಂಡಿರುವ ದಕ್ಷಿಣ ಚೀನಾ ಸಮುದ್ರಕ್ಕೆ(ಸೌತ್ ಚೈನಾ ಸೀ) ರವಾನಿಸಿತ್ತು ಎಂದು ಈಗ ಬೆಳಕಿಗೆ ಬಂದಿದೆ. ನಿಯೋಜನೆಗೊಂಡ ಯುದ್ಧನೌಕೆ ಸಮುದ್ರದಲ್ಲಿದ್ದ ಅಮೆರಿಕದ ನೌಕಾಪಡೆಯ ಹಡಗುಗಳೊಂದಿಗೆ ಸಂಪರ್ಕದಲ್ಲಿದ್ದು ಅವುಗಳೊಂದಿಗೆ ಸಮುದ್ರದಲ್ಲಿ ಗಸ್ತು ಸಹ ಹೊಡೆದಿತ್ತು ಎಂದು ತಿಳಿದುಬಂದಿದೆ.

ದಕ್ಷಿಣ ಚೀನಾ ಸಮುದ್ರ ತನ್ನ ದೇಶದ ಅವಿಭಾಜ್ಯ ಅಂಗ ಎಂದು ಅದರ ಮೇಲೆ ಹಕ್ಕು ಸ್ಥಾಪಿಸಲು ಮುಂದಾಗಿರುವ ಚೀನಾಕ್ಕೆ ನೌಕಾಪಡೆಯ ಈ ನಡೆ ತೀರಾ ಕಸಿವಿಸಿ ತಂದೊಡ್ಡಿತ್ತಂತೆ. ಈ ವಿಚಾರವನ್ನ ಉಭಯ ರಾಷ್ಟ್ರಗಳು ನಡೆಸಿದ ಮಾತುಕತೆಯ ವೇಳೆ ಸಹ ಪ್ರಸ್ತಾಪ ಮಾಡಿತ್ತಂತೆ.

ಅಷ್ಟೇ ಅಲ್ಲದೆ, ಭಾರತೀಯ ನೌಕಾಪಡೆಯ ಮತ್ತಷ್ಟು ಹಡಗುಗಳನ್ನು ಅಂಡಮಾನ್​ ಮತ್ತು ನಿಕೋಬಾರ್ ದ್ವೀಪದ ಬಳಿಯಿರುವ ಮಲಕ್ಕಾ ಜಲಸಂಧಿಯಲ್ಲೂ ಸಹ ನಿಯೋಜಿಸಿಲಾಗಿತ್ತು ಎಂದು ತಿಳಿದುಬಂದಿದೆ. ಈ ಮುಖಾಂತರ ನೌಕಾಪಡೆಯು ಹಿಂದೂ ಮಹಾಸಾಗರದಲ್ಲಿ ನಿಯೋಜಿಸಲಾಗಿರುವ ಚೀನಾದ ಯುದ್ಧನೌಕೆಗಳ ಮೇಲೆ ನಿಗಾ ವಹಿಸಲು ಮುಂದಾಗಿತ್ತಂತೆ. ಒಟ್ನಲ್ಲಿ, ಗಲ್ವಾನ್​ ಬಳಿಕ ಚೀನಾ ಮತ್ತೊಂದು ದುಸ್ಸಾಹಸಕ್ಕೆ ಕೈಹಾಕಿದ್ದರೆ ನಮ್ಮ ನೌಕಾಪಡೆ ಸರಿಯಾಗಿ ಮುಟ್ಟಿನೋಡಿಕೊಳ್ಳುವಂಥ ಉತ್ತರ ನೀಡಲು ಸಜ್ಜಾಗಿತ್ತು ಎಂಬುದು ಬೆಳಕಿಗೆ ಬಂದಿದೆ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ