AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy: ಮಹಿಳೆಯರಿಗೆ ಕಮಾಂಡೋಗಳಾಗಲು ಅವಕಾಶ; ನೌಕಾಪಡೆಯಲ್ಲಿ ಐತಿಹಾಸಿಕ ನಿರ್ಧಾರ

ನೌಕಾಪಡೆಯಲ್ಲಿರುವ ಮಹಿಳೆಯರು ಈಗ ಕಮಾಂಡೋ (ಮಾರ್ಕೋಸ್) ಆಗಬಹುದು. ಇದು ನಿಜವಾಗಿಯೂ ಭಾರತದ ಮಿಲಿಟರಿ ಇತಿಹಾಸದಲ್ಲಿ ಒಂದು ಮೈಲುಗಲ್ಲಾಗಿದೆ

Indian Navy: ಮಹಿಳೆಯರಿಗೆ ಕಮಾಂಡೋಗಳಾಗಲು ಅವಕಾಶ; ನೌಕಾಪಡೆಯಲ್ಲಿ ಐತಿಹಾಸಿಕ ನಿರ್ಧಾರ
ನೌಕಾಪಡೆಯಲ್ಲಿ ಮಹಿಳೆ
TV9 Web
| Edited By: |

Updated on: Dec 12, 2022 | 8:36 AM

Share

ನವದೆಹಲಿ: ಭಾರತೀಯ ನೌಕಾಪಡೆಯು (Indian Navy) ಒಂದು ಹೊಸ ನಿರ್ಧಾರ ತೆಗೆದುಕೊಂಡಿದ್ದು, ಮಹಿಳೆಯರಿಗೆ 3 ರಕ್ಷಣಾ ಸೇವೆಗಳಲ್ಲಿ ಮೊದಲ ಬಾರಿಗೆ ಕಮಾಂಡೋಗಳಾಗಿ ಸೇವೆ ಸಲ್ಲಿಸಲು ಅನುವು ಮಾಡಿಕೊಡಲಿದೆ ಎಂದು ಮೂಲಗಳು ತಿಳಿಸಿವೆ. ಸೈನ್ಯ, ನೌಕಾಪಡೆ ಮತ್ತು ವಾಯುಪಡೆಯ ವಿಶೇಷ ಪಡೆಗಳಲ್ಲಿ ಇದುವರೆಗೂ ಪುರುಷರೇ ಪ್ರಮುಖ ಹುದ್ದೆಗಳಲ್ಲಿದ್ದರು. ಆದರೆ, ಮೊದಲ ಬಾರಿಗೆ ಮಹಿಳೆಯರಿಗೂ ಅವಕಾಶ ನೀಡಲು ನಿರ್ಧರಿಸಲಾಗಿದೆ. ಕಳೆದ ವಾರವಷ್ಟೇ ಅಗ್ನಿವೀರ್ ಯೋಜನೆಯಡಿ (Agniveer Scheme) 341 ಮಹಿಳಾ ನಾವಿಕರು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿದ್ದರು. ಸುಮಾರು 3,000 ಅಗ್ನಿವೀರ್‌ಗಳನ್ನು ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿದ್ದು, ಅವರಲ್ಲಿ 341 ಮಹಿಳೆಯರು ಇದ್ದಾರೆ. ಭಾರತೀಯ ನೌಕಾಪಡೆಯಲ್ಲಿ (Indian Navy) ಲಭ್ಯವಿರುವ ಹುದ್ದೆಗಳನ್ನು ಕೋರಿ 10 ಲಕ್ಷ ಜನ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿದಾರರ ಪೈಕಿ 82,000 ಮಹಿಳೆಯರಿದ್ದರು ಎಂದು ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ಹೇಳಿದ್ದರು.

ನೌಕಾಪಡೆಯಲ್ಲಿರುವ ಮಹಿಳೆಯರು ಈಗ ಕಮಾಂಡೋ (ಮಾರ್ಕೋಸ್) ಆಗಬಹುದು. ಇದು ನಿಜವಾಗಿಯೂ ಭಾರತದ ಮಿಲಿಟರಿ ಇತಿಹಾಸದಲ್ಲಿ ಒಂದು ಮೈಲುಗಲ್ಲಾಗಿದೆ. ಆದರೆ ವಿಶೇಷ ಪಡೆಗಳ ಘಟಕಗಳಿಗೆ ಯಾರನ್ನೂ ನೇರವಾಗಿ ನಿಯೋಜಿಸಲಾಗಿಲ್ಲ. ಜನರು ಅದಕ್ಕೆ ಸ್ವಯಂಸೇವಕರಾಗಬೇಕು ಎನ್ನಲಾಗಿದೆ. ಮುಂದಿನ ವರ್ಷ ಅಗ್ನಿವೀರ್ ಆಗಿ ಸೇವೆಗೆ ಸೇರುವ ಮಹಿಳಾ ಅಧಿಕಾರಿಗಳು ಮತ್ತು ನಾವಿಕರು ಮಾರ್ಕೋಸ್ ಆಗಲು ಸ್ವಯಂಸೇವಕರಾಗುವ ಆಯ್ಕೆಯು ಮುಕ್ತವಾಗಿರುತ್ತದೆ.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ಈ ಕಮಾಂಡೋಗಳು ಶತ್ರುಗಳ ಯುದ್ಧನೌಕೆಗಳು, ಕಡಲಾಚೆಯ ಸ್ಥಾಪನೆಗಳು ಮತ್ತು ಇತರ ಪ್ರಮುಖ ಸ್ವತ್ತುಗಳು, ವಿಶೇಷ ಡೈವಿಂಗ್ ಕಾರ್ಯಾಚರಣೆಗಳು ಮತ್ತು ನೌಕಾ ಕಾರ್ಯಾಚರಣೆಗಳನ್ನು ಬೆಂಬಲಿಸಲು ಕಣ್ಗಾವಲು ಮತ್ತು ವಿಚಕ್ಷಣ ಕಾರ್ಯಾಚರಣೆಗಳ ವಿರುದ್ಧ ರಹಸ್ಯ ದಾಳಿಗಳನ್ನು ನಡೆಸಬಹುದು. ಅವರು ಕಡಲ ಪರಿಸರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಬಹುದು.

ಇದನ್ನೂ ಓದಿ: Agniveer Scheme: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಮೊದಲ ಬಾರಿಗೆ 341 ಮಹಿಳೆಯರ ನೇಮಕ

ಅಗ್ನಿವೀರ್ ಯೋಜನೆಯಡಿ ಮಹಿಳೆಯರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅರ್ಹತೆ ಪಡೆಯಲು ಪುರುಷರು ಮತ್ತು ಮಹಿಳೆಯರು ಇಬ್ಬರೂ ಒಂದೇ ರೀತಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಎಂದು ನೌಕಾಪಡೆಯ ಮುಖ್ಯಸ್ಥರು ದೃಢಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ