AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಶೂಲ್​ ಪರ್ವತದ ಬಳಿ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾದ ಐವರು ನೌಕಾಪಡೆ ಸಿಬ್ಬಂದಿ; ರಕ್ಷಣಾ ಕಾರ್ಯಾಚರಣೆ

ಈ ಬಗ್ಗೆ ಭಾರತೀಯ ನೌಕಾಪಡೆ ಪ್ರಕಟಣೆ ಹೊರಡಿಸಿದೆ. 20 ನೌಕಾಪಡೆ ಸಿಬ್ಬಂದಿಯನ್ನೊಳಗೊಂಡ ಪರ್ವತಾರೋಹಿಗಳ ತಂಡ, ಸೆಪ್ಟೆಂಬರ್​ 3ರಂದು ಮುಂಬೈನಿಂದ ದಂಡಯಾತ್ರೆ ಶುರು ಮಾಡಿತ್ತು ಎಂದಿದೆ.

ತ್ರಿಶೂಲ್​ ಪರ್ವತದ ಬಳಿ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾದ ಐವರು ನೌಕಾಪಡೆ ಸಿಬ್ಬಂದಿ; ರಕ್ಷಣಾ ಕಾರ್ಯಾಚರಣೆ
ಹಿಮಪಾತದ ಚಿತ್ರ (ಪಿಟಿಐ)
TV9 Web
| Edited By: |

Updated on: Oct 01, 2021 | 3:49 PM

Share

ಡೆಹ್ರಾಡೂನ್​:  ಭಾರತ ನೌಕಾಪಡೆಯ ಪರ್ವತಾರೋಹಿಗಳ ತಂಡವೊಂದು ಉತ್ತರಾಖಂಡ್​​ನ ತ್ರಿಶೂಲ್​ ಪರ್ವತದ ತುತ್ತತುದಿಯಲ್ಲಿ, ಹಿಮಪಾತ (Avalanche)ದಲ್ಲಿ ಸಿಲುಕಿದೆ.  ಒಟ್ಟು 10 ಮಂದಿ ನೌಕಾಪಡೆ ಸಿಬ್ಬಂದಿ ಹಿಮಪಾತದಲ್ಲಿ ಸಿಲುಕಿ ಅಪಾಯಕ್ಕೀಡಾಗಿದ್ದರು. ಅವರಲ್ಲಿ ಈಗ ಐವರನ್ನು ರಕ್ಷಿಸಲಾಗಿದೆ. ಉಳಿದ ಐವರಿಗಾಗಿ ಹುಡುಕಾಟ ಮುಂದುವರಿದಿದೆ. ಕಾಣೆಯಾಗಿರುವ ಐವರು ನೌಕಾದಳದ ಸಿಬ್ಬಂದಿಯನ್ನು ಹುಡುಕಿ, ರಕ್ಷಣೆ ಮಾಡಲು ಎಸ್​ಡಿಆರ್​ಎಫ್​ ಮತ್ತು ಮೂರೂ ಸಶಸ್ತ್ರಪಡೆಗಳ ಸೈನಿಕರನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಭಾರತೀಯ ನೌಕಾಪಡೆ ಪ್ರಕಟಣೆ ಹೊರಡಿಸಿದೆ. 20 ನೌಕಾಪಡೆ ಸಿಬ್ಬಂದಿಯನ್ನೊಳಗೊಂಡ ಪರ್ವತಾರೋಹಿಗಳ ತಂಡ, ಸೆಪ್ಟೆಂಬರ್​ 3ರಂದು ಮುಂಬೈನಿಂದ ದಂಡಯಾತ್ರೆ ಶುರು ಮಾಡಿತ್ತು. ಇಂದು 10 ಜನರ ತಂಡ ಬೆಳಗ್ಗೆಯಿಂದಲೇ ತ್ರಿಶೂಲ್​ ಪರ್ವತ ಹತ್ತಲು ಪ್ರಾರಂಭಿಸಿತ್ತು. ಆದರೆ ಪರ್ವತ ಏರಲು ಶುರುಮಾಡಿದ ಕೆಲವೇ ಕ್ಷಣದಲ್ಲಿ ಹಿಮಪಾತ ಆಗಿದೆ. ಆ ಪ್ರವಾಹದಲ್ಲಿ ನೌಕಾಪಡೆ ಸಿಬ್ಬಂದಿ ಸಿಲುಕಿದ್ದಾರೆ ಎಂದು ತಿಳಿಸಿದೆ. ಹಾಗೇ, 10 ಮಂದಿಯಲ್ಲಿ ಐವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಉಳಿದ ಐವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ನೇವಿ ದೃಢಪಡಿಸಿದೆ.

ಸ್ಥಳಕ್ಕೆ ಈಗ ಭಾರತೀಯ ವಾಯುಸೇನೆಯ ಹೆಲಿಕ್ಯಾಪ್ಟರ್​ ತೆರಳಿದೆ. ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ಯೋಧರು ಹೋಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರ ಜತೆಗೆ ಉತ್ತರಾಖಂಡ್​ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಕೂಡ ಕೈಜೋಡಿಸಿದೆ ಎಂದು ನೇವಿ ಹೇಳಿದೆ.

ಇದನ್ನೂ ಓದಿ: ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು