AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಶೂಲ್​ ಪರ್ವತದ ಬಳಿ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾದ ಐವರು ನೌಕಾಪಡೆ ಸಿಬ್ಬಂದಿ; ರಕ್ಷಣಾ ಕಾರ್ಯಾಚರಣೆ

ಈ ಬಗ್ಗೆ ಭಾರತೀಯ ನೌಕಾಪಡೆ ಪ್ರಕಟಣೆ ಹೊರಡಿಸಿದೆ. 20 ನೌಕಾಪಡೆ ಸಿಬ್ಬಂದಿಯನ್ನೊಳಗೊಂಡ ಪರ್ವತಾರೋಹಿಗಳ ತಂಡ, ಸೆಪ್ಟೆಂಬರ್​ 3ರಂದು ಮುಂಬೈನಿಂದ ದಂಡಯಾತ್ರೆ ಶುರು ಮಾಡಿತ್ತು ಎಂದಿದೆ.

ತ್ರಿಶೂಲ್​ ಪರ್ವತದ ಬಳಿ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾದ ಐವರು ನೌಕಾಪಡೆ ಸಿಬ್ಬಂದಿ; ರಕ್ಷಣಾ ಕಾರ್ಯಾಚರಣೆ
ಹಿಮಪಾತದ ಚಿತ್ರ (ಪಿಟಿಐ)
TV9 Web
| Edited By: |

Updated on: Oct 01, 2021 | 3:49 PM

Share

ಡೆಹ್ರಾಡೂನ್​:  ಭಾರತ ನೌಕಾಪಡೆಯ ಪರ್ವತಾರೋಹಿಗಳ ತಂಡವೊಂದು ಉತ್ತರಾಖಂಡ್​​ನ ತ್ರಿಶೂಲ್​ ಪರ್ವತದ ತುತ್ತತುದಿಯಲ್ಲಿ, ಹಿಮಪಾತ (Avalanche)ದಲ್ಲಿ ಸಿಲುಕಿದೆ.  ಒಟ್ಟು 10 ಮಂದಿ ನೌಕಾಪಡೆ ಸಿಬ್ಬಂದಿ ಹಿಮಪಾತದಲ್ಲಿ ಸಿಲುಕಿ ಅಪಾಯಕ್ಕೀಡಾಗಿದ್ದರು. ಅವರಲ್ಲಿ ಈಗ ಐವರನ್ನು ರಕ್ಷಿಸಲಾಗಿದೆ. ಉಳಿದ ಐವರಿಗಾಗಿ ಹುಡುಕಾಟ ಮುಂದುವರಿದಿದೆ. ಕಾಣೆಯಾಗಿರುವ ಐವರು ನೌಕಾದಳದ ಸಿಬ್ಬಂದಿಯನ್ನು ಹುಡುಕಿ, ರಕ್ಷಣೆ ಮಾಡಲು ಎಸ್​ಡಿಆರ್​ಎಫ್​ ಮತ್ತು ಮೂರೂ ಸಶಸ್ತ್ರಪಡೆಗಳ ಸೈನಿಕರನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಭಾರತೀಯ ನೌಕಾಪಡೆ ಪ್ರಕಟಣೆ ಹೊರಡಿಸಿದೆ. 20 ನೌಕಾಪಡೆ ಸಿಬ್ಬಂದಿಯನ್ನೊಳಗೊಂಡ ಪರ್ವತಾರೋಹಿಗಳ ತಂಡ, ಸೆಪ್ಟೆಂಬರ್​ 3ರಂದು ಮುಂಬೈನಿಂದ ದಂಡಯಾತ್ರೆ ಶುರು ಮಾಡಿತ್ತು. ಇಂದು 10 ಜನರ ತಂಡ ಬೆಳಗ್ಗೆಯಿಂದಲೇ ತ್ರಿಶೂಲ್​ ಪರ್ವತ ಹತ್ತಲು ಪ್ರಾರಂಭಿಸಿತ್ತು. ಆದರೆ ಪರ್ವತ ಏರಲು ಶುರುಮಾಡಿದ ಕೆಲವೇ ಕ್ಷಣದಲ್ಲಿ ಹಿಮಪಾತ ಆಗಿದೆ. ಆ ಪ್ರವಾಹದಲ್ಲಿ ನೌಕಾಪಡೆ ಸಿಬ್ಬಂದಿ ಸಿಲುಕಿದ್ದಾರೆ ಎಂದು ತಿಳಿಸಿದೆ. ಹಾಗೇ, 10 ಮಂದಿಯಲ್ಲಿ ಐವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಉಳಿದ ಐವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ನೇವಿ ದೃಢಪಡಿಸಿದೆ.

ಸ್ಥಳಕ್ಕೆ ಈಗ ಭಾರತೀಯ ವಾಯುಸೇನೆಯ ಹೆಲಿಕ್ಯಾಪ್ಟರ್​ ತೆರಳಿದೆ. ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ಯೋಧರು ಹೋಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವರ ಜತೆಗೆ ಉತ್ತರಾಖಂಡ್​ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಕೂಡ ಕೈಜೋಡಿಸಿದೆ ಎಂದು ನೇವಿ ಹೇಳಿದೆ.

ಇದನ್ನೂ ಓದಿ: ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ