AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಆಕ್ಸಿಜನ್ ಕೊರತೆ ನೀಗಿಸಲು ಸಮುದ್ರ ಸೇತು ಕಾರ್ಯಾಚರಣೆ ಶುರು ಮಾಡಿದ ಭಾರತೀಯ ನೌಕಾಪಡೆ..

ಭಾರತೀಯ ನೌಕಾಪಡೆಯ ವಕ್ತಾರ ಟ್ವೀಟ್ ಮಾಡಿದ್ದು, ಸಮುದ್ರ ಸೇತು-II ಮಿಷನ್​ನಡಿ ಭಾರತೀಯ ನೌಕಾಪಡೆಯ ಹಡಗುಗಳು ಬೇರೆ ರಾಷ್ಟ್ರಗಳಿಂದ ದ್ರವರೂಪದ ಆಮ್ಲಜನಕ ಸಾಂದ್ರಕಗಳನ್ನು ಹೊತ್ತು ತರುತ್ತವೆ ಎಂದು ತಿಳಿಸಿದ್ದಾರೆ.

Oxygen Shortage: ಆಕ್ಸಿಜನ್ ಕೊರತೆ ನೀಗಿಸಲು ಸಮುದ್ರ ಸೇತು ಕಾರ್ಯಾಚರಣೆ ಶುರು ಮಾಡಿದ ಭಾರತೀಯ ನೌಕಾಪಡೆ..
ಸಮುದ್ರ ಸೇತು ಕಾರ್ಯಾಚರಣೆ ಶುರು ಮಾಡಿದ ಇಂಡಿಯನ್ ನೇವಿ
Lakshmi Hegde
|

Updated on:May 02, 2021 | 4:15 PM

Share

ದೆಹಲಿ: ದೇಶದಲ್ಲಿ ಸದ್ಯ ಆಕ್ಸಿಜನ್ ಅಭಾವದ ಸಮಸ್ಯೆ ತಲೆದೋರಿದ್ದು, ವಿದೇಶಗಳೂ ಸಹ ಭಾರತಕ್ಕೆ ನೆರವಿನಹಸ್ತ ಚಾಚಿವೆ. ಆಮ್ಲಜನಕ ಸಾಂದ್ರಕಗಳನ್ನು ಕಳಿಸುತ್ತಿವೆ. ಇದೀಗ ಬೇರೆ ರಾಷ್ಟ್ರಗಳಿಂದ ಆಮ್ಲಜನಕವನ್ನು ಭಾರತಕ್ಕೆ ತರಲು ಇಂಡಿಯನ್ ನೇವಿ (ಭಾರತೀಯ ನೌಕಾಪಡೆ) ಸಮುದ್ರ ಸೇತು-II ಎಂಬ ಹೆಸರಿನಡಿ ಕಾರ್ಯಾಚರಣೆ ಶುರು ಮಾಡಿದೆ.

ಈ ಬಗ್ಗೆ ಭಾರತೀಯ ನೌಕಾಪಡೆಯ ವಕ್ತಾರ ಟ್ವೀಟ್ ಮಾಡಿದ್ದು, ಸಮುದ್ರ ಸೇತು-II ಮಿಷನ್​ನಡಿ ಭಾರತೀಯ ನೌಕಾಪಡೆಯ ಹಡಗುಗಳು ಬೇರೆ ರಾಷ್ಟ್ರಗಳಿಂದ ದ್ರವರೂಪದ ಆಮ್ಲಜನಕ ಸಾಂದ್ರಕಗಳು ಮತ್ತು ಸಂಬಂಧಿತ ವೈದ್ಯಕೀಯ ಉಪಕರಣಗಳನ್ನು ಹೊತ್ತು ತರಲಿವೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಕೊವಿಡ್ 19 ಎರಡನೇ ಅಲೆ ಗಂಭೀರವಾಗುತ್ತಿದೆ. ಈ ಹೊತ್ತಲ್ಲಿ ಆಮ್ಲಜನಕದ ಕೊರತೆಯೂ ಹೆಚ್ಚಾಗಿದೆ. ಆಮ್ಲಜನಕವಿಲ್ಲದೆ ಅದೆಷ್ಟೋ ರೋಗಿಗಳು ಜೀವ ಕಳೆದುಕೊಂಡಿದ್ದಾರೆ. ಆಸ್ಪತ್ರೆಗಳ ಮುಖ್ಯಸ್ಥರೇ ಕಣ್ಣೀರಿಡುತ್ತಿದ್ದಾರೆ. ಈಗಾಗಲೇ ಅಮೆರಿಕ, ಯುಕೆ, ಫ್ರಾನ್ಸ್​ ಮತ್ತಿತರ ದೇಶಗಳಿಂದ ವಿಮಾನದ ಮೂಲಕ ಆಕ್ಸಿಜನ್​​ನ್ನು ಭಾರತಕ್ಕೆ ಸಾಗಣೆ ಮಾಡಲಾಗಿದೆ. ಇದೀಗ ನೌಕಾಪಡೆ ಸಮುದ್ರ ಮಾರ್ಗದ ಮೂಲಕ ಸಾಗಣೆಗೆ ಮುಂದಾಗಿದೆ. ಹೀಗೆ ಆಕ್ಸಿಜನ್​ ಸಾಗಣೆಯ ಮೊದಲ ಬ್ಯಾಚ್​​ನಲ್ಲಿ ಐಎನ್​ಎಸ್ ಕೋಲ್ಕತ್ತ ಮತ್ತು ಐಎನ್​ಎಸ್​ ತಲ್ವಾರ್​​ಗಳು ಕಾರ್ಯಾಚರಣೆ ಆರಂಭಿಸಿವೆ. ಇದರಲ್ಲಿ ಐಎನ್​ಎಸ್ ತಲ್ವಾರ್ ಏಪ್ರಿಲ್ 30ರಂದು ಬಹರೇನ್ ದೇಶದ ಮನಮಾ ಬಂದರನ್ನು ತಲುಪಿದ್ದು ಸುಮಾರು 40 ಮೆಟ್ರಿಕ್ ಟನ್​ಗಳಷ್ಟು ದ್ರವರೂಪದ ವೈದ್ಯಕೀಯ ಆಕ್ಸಿಜನ್ ಹೊತ್ತು ತರಲಿದೆ. ಹಾಗೇ ಐಎನ್​ಎಸ್ ಕೋಲ್ಕತ್ತ ದೋಹಾ, ಕ್ವತಾರ್​, ಕುವೈತ್​​ಗಳಿಂದ ಆಕ್ಸಿಜನ್​ ತರಲಿದೆ ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಇಷ್ಟೇ ಅಲ್ಲದೆ ಮುಂದೆ ಇನ್ನಷ್ಟು ನೌಕಾಹಡಗುಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳಲಿವೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಮಹಿಳೆಯ ಶವದ ಮೇಲಿದ್ದ ಚಿನ್ನಾಭರಣ ಕಳ್ಳತನ; ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

ಚಕ್ರವರ್ತಿ ತೆಗೆದುಕೊಂಡ ಆ ಒಂದು ನಿರ್ಧಾರ ಅವರ ಬಿಗ್​ ಬಾಸ್​ ಜರ್ನಿಯನ್ನೇ ಬದಲಾಯಿಸಿತು

Indian Navy start Samudra Setu for bring the oxygen from other Countries

Published On - 4:13 pm, Sun, 2 May 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?