AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಚಳುವಳಿ ಸಂಘಟಿಸಲು ಹರ್ಯಾಣದಲ್ಲಿ ಮಹಾಪಂಚಾಯತ್: ರಾಕೇಶ್ ಟಿಕಾಯತ್ ಭಾಗಿ

ಇಂದು (ಫೆ.3) ನಡೆಯುವ ಮಹಾಪಂಚಾಯತ್, ರೈತರ ಚಳುವಳಿಯನ್ನು ಯಾವ ರೀತಿ ಮುಂದುವರಿಸಬೇಕು ಎಂಬ ಬಗ್ಗೆ ಚರ್ಚಿಸಲಿದೆ. ಕೇಂದ್ರ ಸರ್ಕಾರಕ್ಕೆ ರೈತ ಚಳುವಳಿ ಮತ್ತಷ್ಟು ಸಂಘಟಿತವಾಗಿ ಮುಂದುವರಿಯಲಿದೆ ಎಂಬ ಸೂಚನೆಯನ್ನು ಕೂಡ ಇಂದಿನ ಸಭೆ ನೀಡಲಿದೆ.

ರೈತ ಚಳುವಳಿ ಸಂಘಟಿಸಲು ಹರ್ಯಾಣದಲ್ಲಿ ಮಹಾಪಂಚಾಯತ್: ರಾಕೇಶ್ ಟಿಕಾಯತ್ ಭಾಗಿ
ರಾಕೇಶ್ ಟಿಕಾಯತ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 8:22 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಎರಡು ತಿಂಗಳ ಗಡಿ ದಾಟಿ ಮುಂದುವರಿಯುತ್ತಿದೆ. ರೈತರ ಹೋರಾಟದಲ್ಲಿ ಭಾಗಿಯಾಗಿರುವ ಚಳುವಳಿಗಾರರು, ಹರ್ಯಾಣ ಜಿಂದ್​ ಜಿಲ್ಲೆಯ ಖಂಡೇಲಾ ಗ್ರಾಮದಲ್ಲಿ ಖಾಪ್ ಪಂಚಾಯತ್ ಸಭೆ ನಡೆಸಲಿದ್ದಾರೆ. ಹರ್ಯಾಣದ ಎಲ್ಲಾ ಖಾಪ್ ಪಂಚಾಯತ್​​ಗಳಿಗೂ ಮಹಾಪಂಚಾಯತ್​ನಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ.

ಇಂದು (ಫೆ.3) ನಡೆಯುವ ಮಹಾಪಂಚಾಯತ್, ರೈತರ ಚಳುವಳಿಯನ್ನು ಯಾವ ರೀತಿ ಮುಂದುವರಿಸಬೇಕು ಎಂಬ ಬಗ್ಗೆ ಚರ್ಚಿಸಲಿದೆ. ಕೇಂದ್ರ ಸರ್ಕಾರಕ್ಕೆ ರೈತ ಚಳುವಳಿ ಮತ್ತಷ್ಟು ಸಂಘಟಿತವಾಗಿ ಮುಂದುವರಿಯಲಿದೆ ಎಂಬ ಸೂಚನೆಯನ್ನು ಕೂಡ ಇಂದಿನ ಸಭೆ ನೀಡಲಿದೆ. ಜಿಂದ್​ನಲ್ಲಿ ನಡೆಯುವ ಮಹಾಪಂಚಾಯತ್​​ನಲ್ಲಿ ನಾನೂ ಭಾಗವಹಿಸಲಿದ್ದೇನೆ ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದರು.

ಮಹಾಪಂಚಾಯತ್​ಗೆ ರಾಕೇಶ್ ಟಿಕಾಯತ್ ಆಗಮಿಸಿದರು

ಜಿಂದ್​ನಲ್ಲಿ ನಡೆಯುತ್ತಿದ್ದ ರೈತ ಮುಖಂಡರ ಭಾಷಣದ ವೇಳೆ ಮಹಾಪಂಚಾಯತ್ ವೇದಿಕೆ ಕುಸಿದುಬಿದ್ದಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ರೈತರ ಜೊತೆ ಮಾತುಕತೆಗೆ ಸರ್ಕಾರ ಈಗಲೂ ಸಿದ್ಧವಿದೆ ಲೋಕಸಭೆಯಲ್ಲಿ ವಿರೋಧಪಕ್ಷಗಳು ರೈತರ ಪರ ಮಾತನಾಡಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿರುವ ಬಗ್ಗೆ ನರೇಂದ್ರ ಸಿಂಗ್ ತೋಮರ್ ಪ್ರತಿಕ್ರಿಯೆ ನೀಡಿದ್ದಾರೆ. ಕೃಷಿ ತಿದ್ದುಪಡಿ ಕಾನೂನುಗಳ ಬಗ್ಗೆ ಲೋಕಸಭಾ ಸದಸ್ಯರು ಚರ್ಚಿಸಲು ಸಿದ್ಧರಿದ್ದರೆ, ಸರ್ಕಾರವೂ ಮಾತನಾಡಲು ತಯಾರಿದೆ. ಸಂಸತ್ತಿನ ಹೊರಗೆ ಅಥವಾ ಒಳಗೆ ರೈತರಿಗೆ ಸಂಬಂಧಪಟ್ಟ ಯಾವುದೇ ವಿಚಾರವನ್ನು ಚರ್ಚಿಸಲು ಕೇಂದ್ರ ಸಿದ್ಧವಿದೆ ಎಂದು ಹೇಳಿದ್ದಾರೆ. ಸಂಸತ್ ಕಲಾಪವನ್ನು ಬಡವರ, ರೈತರ ಒಳಿತಿಗಾಗಿ ನಡೆಸಲು ಅನುವು ಮಾಡಿಕೊಡಿ ಎಂದು ವಿಪಕ್ಷ ಸದಸ್ಯರನ್ನು ಕೇಳಿಕೊಂಡಿದ್ದಾರೆ. ಸರ್ಕಾರವು ರೈತರ ಜೊತೆಗೆ ಮಾತುಕತೆ ನಡೆಸಲು ಈಗಲೂ ಸಿದ್ಧವಿದೆ ಎಂದು ಪುನರುಚ್ಚರಿಸಿದ್ದಾರೆ.

ಗಣತಂತ್ರ ನಡೆದ ಹಿಂಸಾಚಾರದ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಇಂದು ವಿಚಾರಣೆ ಟ್ರಾಕ್ಟರ್ ಚಳುವಳಿ ದಿನದ ಹಿಂಸಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಘಟನಾವಳಿಗಳ ವಿರುದ್ಧ ದಾಖಲಾಗಿದ್ದ ಹಲವು ಅರ್ಜಿಗಳನ್ನು, ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಮಾಡಲಿದೆ. ಗಣತಂತ್ರ ದಿನ ನಡೆದ ಘಟನೆಯ ಬಗ್ಗೆ ತನಿಖೆ ನಡೆಸಲು ನಿವೃತ್ತ ಜಡ್ಜ್ ಒಬ್ಬರ ನೇತೃತ್ವದಲ್ಲಿ ಸಮಿತಿ ರಚಿಸುವ ಬಗ್ಗೆಯೂ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಆ ಬಗ್ಗೆಯೂ ಇಂದು ವಿಚಾರಣೆ ನಡೆಯಲಿದೆ.

ಹರ್ಯಾಣದ ಹಲವು ಜಿಲ್ಲೆಗಳಲ್ಲಿ ಇಂಟರ್​ನೆಟ್ ಸೇವೆ ಕಡಿತ ಮುಂದುವರಿಕೆ ಹರ್ಯಾಣದ ಕೈತಾಲ್, ಪಾಣಿಪತ್, ಜಿಂದ್, ರೊಹ್ಟಕ್, ಚರ್ಕಿ ದಾದ್ರಿ, ಸೋನಿಪತ್ ಮತ್ತು ಝಾಜ್ಜರ್​ನಲ್ಲಿ ಮೊಬೈಲ್ ಇಂಟರ್​ನೆಟ್ ಸೇವೆಯನ್ನು ಇಂದು (ಫೆ.3) ಸಂಜೆ 5 ಗಂಟೆಯವರೆಗೆ ಕಡಿತಗೊಳಿಸಲಾಗಿದೆ. 2G/3G/4G/CDMA/GPRS, SMS ಸೇವೆಗಳನ್ನು ಕಡಿತ ಮಾಡಲಾಗಿದೆ. ವಾಯ್ಸ್ ಕಾಲ್ ಸೌಲಭ್ಯ ಮಾತ್ರ ಸದ್ಯ ಬಳಕೆದಾರರಿಗೆ ಲಭ್ಯವಿದೆ.

Published On - 2:42 pm, Wed, 3 February 21

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು