AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ […]

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 25, 2020 | 2:34 PM

Share

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಬಾಲಸುಬ್ರಮಣ್ಯಂ ಸಾವಿನ ಸುದ್ದಿಯನ್ನು ಪ್ರಕಟಿಸಿದರು. SPB ಅವರು ಪತ್ನಿ ಸಾವಿತ್ರಿ, ಪುತ್ರ ಚರಣ್ ಮತ್ತು ಪುತ್ರಿ ಪಲ್ಲವಿ ಅವರನ್ನು ಅಗಲಿದ್ದಾರೆ. ಜೊತೆಗೆ ಅಪಾರ ಬಂಧುಬಳಗ, ಅಸಂಖ್ಯಾತ ಅಭಿಮಾನಿಗಳನ್ನು ಬಿಟ್ಟು ಇಹಲೋಕದಿಂದ ತೆರಳಿದ್ದಾರೆ.

ಅರ್ಧ ಶತಮಾನದ ಗಾನ ಲೋಕದ ಅದ್ಭುತ ಪ್ರತಿಭೆ: ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಮಣ್ಯಂ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊನೇಟಮ್ಮಪೇಟಾದಲ್ಲಿ 1946ರ ಜೂನ್ 4ರಂದು ಎಸ್. ಪಿ. ಸಾಂಬಮೂರ್ತಿ, ಶಕುಂತಲಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕನ್ನಡಿಗರೊಂದಿಗೆ ಅನನ್ಯ ಬಾಂಧವ್ಯ ಹೊಂದಿದ್ದ ಎಸ್​ಪಿಬಿ ಅವರನ್ನು ಅಭಿಮಾನಿಗಳು ಎಸ್​ ಪಿ ಬಾಲು, ಬಾಲಸುಬ್ರಮಣ್ಯಂ ಎಂದು ತಮ್ಮ ಮನೆಯ ಸದಸ್ಯರಂತೇ ಪ್ರೀತಿಪೂರ್ವಕವಾಗಿ ಕರೆಯುತ್ತಿದ್ದರು.

ಅಪಾರ ವಿದ್ವತ್ತಿನ ಸಂಗೀತಗಾರ, ಹಿನ್ನೆಲೆ ಗಾಯಕ, ನಟ, ಡಬ್ಬಿಂಗ್ ಕಲಾವಿದ, ಸಿನಿ ನಿರ್ಮಾಪಕ ಎಸ್​ ಪಿ ಬಾಲಸುಬ್ರಮಣ್ಯಂ ತೆಲುಗು, ಕನ್ನಡ, ತಮಿಳು, ಮಲೆಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು.

ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಎಸ್​ಪಿಬಿ 51 ದಿನಗಳ ಜೀವನದ ಹೋರಾಟವನ್ನು ಕೊನೆಗೊಳಿಸಿದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ 1966ರ ಡಿ. 15ರಂದು ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ತೆಲುಗಿನ ಮರ್ಯಾದ ರಾಮನ್ನ ಚಿತ್ರಕ್ಕೆ ಹಿನ್ನೆಲೆ ಗಾಯನ ನೀಡಿದರು. ಸುಮಾರು 40 ಸಾವಿರ ಹಾಡುಗಳಿಗೆ ಧ್ವನಿಯಾಗಿರುವ SPB, 6 ರಾಷ್ಟ್ರೀಯ ಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು.

Published On - 1:23 pm, Fri, 25 September 20

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ