Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ […]

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ
Follow us
ಸಾಧು ಶ್ರೀನಾಥ್​
|

Updated on:Sep 25, 2020 | 2:34 PM

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಬಾಲಸುಬ್ರಮಣ್ಯಂ ಸಾವಿನ ಸುದ್ದಿಯನ್ನು ಪ್ರಕಟಿಸಿದರು. SPB ಅವರು ಪತ್ನಿ ಸಾವಿತ್ರಿ, ಪುತ್ರ ಚರಣ್ ಮತ್ತು ಪುತ್ರಿ ಪಲ್ಲವಿ ಅವರನ್ನು ಅಗಲಿದ್ದಾರೆ. ಜೊತೆಗೆ ಅಪಾರ ಬಂಧುಬಳಗ, ಅಸಂಖ್ಯಾತ ಅಭಿಮಾನಿಗಳನ್ನು ಬಿಟ್ಟು ಇಹಲೋಕದಿಂದ ತೆರಳಿದ್ದಾರೆ.

ಅರ್ಧ ಶತಮಾನದ ಗಾನ ಲೋಕದ ಅದ್ಭುತ ಪ್ರತಿಭೆ: ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಮಣ್ಯಂ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊನೇಟಮ್ಮಪೇಟಾದಲ್ಲಿ 1946ರ ಜೂನ್ 4ರಂದು ಎಸ್. ಪಿ. ಸಾಂಬಮೂರ್ತಿ, ಶಕುಂತಲಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕನ್ನಡಿಗರೊಂದಿಗೆ ಅನನ್ಯ ಬಾಂಧವ್ಯ ಹೊಂದಿದ್ದ ಎಸ್​ಪಿಬಿ ಅವರನ್ನು ಅಭಿಮಾನಿಗಳು ಎಸ್​ ಪಿ ಬಾಲು, ಬಾಲಸುಬ್ರಮಣ್ಯಂ ಎಂದು ತಮ್ಮ ಮನೆಯ ಸದಸ್ಯರಂತೇ ಪ್ರೀತಿಪೂರ್ವಕವಾಗಿ ಕರೆಯುತ್ತಿದ್ದರು.

ಅಪಾರ ವಿದ್ವತ್ತಿನ ಸಂಗೀತಗಾರ, ಹಿನ್ನೆಲೆ ಗಾಯಕ, ನಟ, ಡಬ್ಬಿಂಗ್ ಕಲಾವಿದ, ಸಿನಿ ನಿರ್ಮಾಪಕ ಎಸ್​ ಪಿ ಬಾಲಸುಬ್ರಮಣ್ಯಂ ತೆಲುಗು, ಕನ್ನಡ, ತಮಿಳು, ಮಲೆಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು.

ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಎಸ್​ಪಿಬಿ 51 ದಿನಗಳ ಜೀವನದ ಹೋರಾಟವನ್ನು ಕೊನೆಗೊಳಿಸಿದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ 1966ರ ಡಿ. 15ರಂದು ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ತೆಲುಗಿನ ಮರ್ಯಾದ ರಾಮನ್ನ ಚಿತ್ರಕ್ಕೆ ಹಿನ್ನೆಲೆ ಗಾಯನ ನೀಡಿದರು. ಸುಮಾರು 40 ಸಾವಿರ ಹಾಡುಗಳಿಗೆ ಧ್ವನಿಯಾಗಿರುವ SPB, 6 ರಾಷ್ಟ್ರೀಯ ಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು.

Published On - 1:23 pm, Fri, 25 September 20

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ