AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ […]

ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ
ಸಾಧು ಶ್ರೀನಾಥ್​
|

Updated on:Sep 25, 2020 | 2:34 PM

Share

ಅಸಂಖ್ಯಾತ ಸಂಗೀತ ಪ್ರೇಮಿಗಳ ಮನದಲ್ಲಿ ಚಿರಸ್ಥಾಯಿಯಾಗಿರುವ ಸುಮಧುರ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ವಿಧಿವಶರಾಗಿದ್ದಾರೆ. ಸುಮಾರು 2 ತಿಂಗಳಿಂದ ಕೊರೊನಾ ಮಹಾಮಾರಿಯಿಂದ ಅನಾರೋಗ್ಯಪೀಡಿತರಾಗಿದ್ದ ದೈವದತ್ತ ಗಾಯಕ ಎಸ್​ಪಿ ಬಾಲು ಅವರ ಆರೋಗ್ಯ ನಿನ್ನೆಯಿಂದ ವಿಪರೀತ ಹದಗೆಟ್ಟಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬಾಲು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಎಸ್‌ಪಿಬಿ ನಿಧನ ಎಸ್ಪಿಬಿ ಪುತ್ರ ಚರಣ್ ಜೊತೆ ಚರ್ಚೆ ನಡೆಸಿದ ಎಂಜಿಎಂ ಆಸ್ಪತ್ರೆಯ ವೈದ್ಯರು ಇಂದು ಮಧ್ಯಾಹ್ನ 1.10 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಬಾಲಸುಬ್ರಮಣ್ಯಂ ಸಾವಿನ ಸುದ್ದಿಯನ್ನು ಪ್ರಕಟಿಸಿದರು. SPB ಅವರು ಪತ್ನಿ ಸಾವಿತ್ರಿ, ಪುತ್ರ ಚರಣ್ ಮತ್ತು ಪುತ್ರಿ ಪಲ್ಲವಿ ಅವರನ್ನು ಅಗಲಿದ್ದಾರೆ. ಜೊತೆಗೆ ಅಪಾರ ಬಂಧುಬಳಗ, ಅಸಂಖ್ಯಾತ ಅಭಿಮಾನಿಗಳನ್ನು ಬಿಟ್ಟು ಇಹಲೋಕದಿಂದ ತೆರಳಿದ್ದಾರೆ.

ಅರ್ಧ ಶತಮಾನದ ಗಾನ ಲೋಕದ ಅದ್ಭುತ ಪ್ರತಿಭೆ: ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಮಣ್ಯಂ ಅವರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊನೇಟಮ್ಮಪೇಟಾದಲ್ಲಿ 1946ರ ಜೂನ್ 4ರಂದು ಎಸ್. ಪಿ. ಸಾಂಬಮೂರ್ತಿ, ಶಕುಂತಲಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕನ್ನಡಿಗರೊಂದಿಗೆ ಅನನ್ಯ ಬಾಂಧವ್ಯ ಹೊಂದಿದ್ದ ಎಸ್​ಪಿಬಿ ಅವರನ್ನು ಅಭಿಮಾನಿಗಳು ಎಸ್​ ಪಿ ಬಾಲು, ಬಾಲಸುಬ್ರಮಣ್ಯಂ ಎಂದು ತಮ್ಮ ಮನೆಯ ಸದಸ್ಯರಂತೇ ಪ್ರೀತಿಪೂರ್ವಕವಾಗಿ ಕರೆಯುತ್ತಿದ್ದರು.

ಅಪಾರ ವಿದ್ವತ್ತಿನ ಸಂಗೀತಗಾರ, ಹಿನ್ನೆಲೆ ಗಾಯಕ, ನಟ, ಡಬ್ಬಿಂಗ್ ಕಲಾವಿದ, ಸಿನಿ ನಿರ್ಮಾಪಕ ಎಸ್​ ಪಿ ಬಾಲಸುಬ್ರಮಣ್ಯಂ ತೆಲುಗು, ಕನ್ನಡ, ತಮಿಳು, ಮಲೆಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು.

ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಎಸ್​ಪಿಬಿ 51 ದಿನಗಳ ಜೀವನದ ಹೋರಾಟವನ್ನು ಕೊನೆಗೊಳಿಸಿದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ 1966ರ ಡಿ. 15ರಂದು ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ತೆಲುಗಿನ ಮರ್ಯಾದ ರಾಮನ್ನ ಚಿತ್ರಕ್ಕೆ ಹಿನ್ನೆಲೆ ಗಾಯನ ನೀಡಿದರು. ಸುಮಾರು 40 ಸಾವಿರ ಹಾಡುಗಳಿಗೆ ಧ್ವನಿಯಾಗಿರುವ SPB, 6 ರಾಷ್ಟ್ರೀಯ ಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು.

Published On - 1:23 pm, Fri, 25 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ