AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ರೈಲು ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳ್ಳತನವಾದರೇ ಅದು ರೈಲ್ವೆ ಸೇವೆಯಲ್ಲಿನ ಕೊರತೆಯಲ್ಲ ಮತ್ತು ಭಾರತೀಯ ರೈಲ್ವೆ ಇಲಾಖೆ ಹೊಣೆಯಾಗುವುದಿಲ್ಲ ಸುಪ್ರಿಂಕೋರ್ಟ್​​​ನ ಈ ತೀರ್ಪಿನ ಹಿಂದಿನ ಕಾರಣ ಇಲ್ಲಿದೆ ಓದಿ.

ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​
ಸುಪ್ರಿಂ ಕೋರ್ಟ್​
ವಿವೇಕ ಬಿರಾದಾರ
|

Updated on: Jun 16, 2023 | 10:09 PM

Share

ನವದೆಹಲಿ: ರೈಲು (Train) ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳ್ಳತನವಾದರೇ ಅದು ರೈಲ್ವೆ ಸೇವೆಯಲ್ಲಿನ ಕೊರತೆಯಲ್ಲ ಮತ್ತು ಭಾರತೀಯ ರೈಲ್ವೆ ಇಲಾಖೆ (Indian Railway) ಹೊಣೆಯಾಗುವುದಿಲ್ಲ ಎಂದು ಸುಪ್ರಿಂ ಕೋರ್ಟ್ (Supreme Court)​​ ತೀರ್ಪು ನೀಡಿದೆ. ಪ್ರಯಾಣಿಕರು ತಮ್ಮ ಸ್ವಂತ ವಸ್ತುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದಿದ್ದರೆ ರೈಲ್ವೆ ಇಲಾಖೆಯನ್ನು ಹೊಣೆ ಮಾಡಲಾಗುವುದಿಲ್ಲ ಎಂದು ಹೇಳಿದೆ.

ರೇಲ್ವೆ ಇಲಾಖೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಕಳ್ಳತನವು ರೈಲ್ವೆಯ ಸೇವೆಯಲ್ಲಿನ ಕೊರತೆ ಎಂದು ಹೇಗೆ ಹೇಳಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ. ಪ್ರಯಾಣಿಕರು ತಮ್ಮ ಸ್ವಂತ ವಸ್ತುಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ರೈಲ್ವೆ ಇಲಾಖೆಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಪೀಠ ಹೇಳಿದೆ.

ಭೋಲಾ ಎಂಬುವರು 2005ರ ಏಪ್ರಿಲ್ 27 ರಂದು ರಾತ್ರಿ ಕಾಶಿ ವಿಶ್ವನಾಥ್ ಎಕ್ಸ್‌ಪ್ರೆಸ್ ಮೂಲಕ ನವದೆಹಲಿಗೆ ಪ್ರಯಾಣಿಸುತ್ತಿದ್ದರು. ಭೋಲಾ ಅವರು ಹೇಳುವ ಪ್ರಕಾರ “ವ್ಯಾಪಾರಸ್ಥರಿಗೆ ನೀಡಲೆಂದು ಬಟ್ಟೆಯಲ್ಲಿ 1 ಲಕ್ಷ ರೂ. ಹಣವನ್ನು ಸುತ್ತಿಕೊಂಡು ಬೆಲ್ಟ್​​ಗೆ ಕಟ್ಟಿಕೊಂಡಿದ್ದೆ. ಹಾಗೆ ನಿದ್ದೆಗೆ ಜಾರಿದೆ. ಮುಂಜಾನೆ 3:30ರ ಸುಮಾರಿಗೆ ಎಚ್ಚರಗೊಂಡು ನೋಡಿದಾಗ ಸೊಂಟದಲ್ಲಿ ಬೆಲ್ಟ್ ಇಲ್ಲ ಮತ್ತು ಪ್ಯಾಂಟ್​ನ ಬಲಭಾಗದ ಭಾಗವು ಹರಿದಿತ್ತು” ಎಂದು ಹೇಳಿದ್ದಾರೆ.

ನಂತರ ಭೋಲಾ ದೆಹಲಿಯ ಸರ್ಕಾರಿ ರೈಲ್ವೇ ಪೊಲೀಸರಿಗೆ (GRP) ದೂರು ನೀಡಿದರು. ಮತ್ತು ಹಣ ಕಳ್ಳತನಾವಾಗಿದ್ದು, ರೈಲ್ವೆ ಇಲಾಖೆ ಹಣವನ್ನು ಮರುಪಾವತಿ ಮಾಡಬೇಕೆಂದು ಗ್ರಾಹಕ ನ್ಯಾಯಾಲಯ ಮೆಟ್ಟಿಲೇರಿದರು. ಪ್ರಕರಣದ ವಿಚಾರಣೆ ನಡೆಸಿದ್ದ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ (ಎನ್‌ಸಿಡಿಆರ್‌ಸಿ) ಭೋಲಾ ಅವರಿಗೆ 1 ಲಕ್ಷ ರೂ. ನೀಡುವಂತೆ ರೈಲ್ವೆ ಇಲಾಖೆಗೆ ಸೂಚಿಸಿತ್ತು.

ಹೀಗಾಗಿ ರೈಲ್ವೆ ಇಲಾಖೆ ಸುಪ್ರಿಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿದ್ದು, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ (NCDRC) ಆದೇಶವನ್ನು ತಳ್ಳಿಹಾಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ