AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್​ಗೆ ಹೊಸ ರೂಲ್ಸ್: ಜುಲೈ​ 1ರಿಂದ ಜಾರಿ

ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ, ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್ ನಿಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಗೆ ಆಧಾರ್​ ಜೋಡಣೆಯನ್ನು ಕಡ್ಡಾಯ ಮಾಡಿ ರೈಲ್ವೆ ಸಚಿವಾಲಯ ಆದೇಶಿಸಿದೆ. ಇನ್ನು ತತ್ಕಾಲ್​ ಟಿಕೆಟ್​ ಬುಕಿಂಗ್​ ನಲ್ಲಿ ಏನೆಲ್ಲಾ ಬದಲಾವಣೆ ಮಾಡಲಾಗಿದೆ? ಹೇಗೆ ಬುಕ್ ಮಾಡಬೇಕೆನ್ನುವ ವಿವರ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್​ಗೆ ಹೊಸ ರೂಲ್ಸ್: ಜುಲೈ​ 1ರಿಂದ ಜಾರಿ
Tatkal Train Ticket
ರಮೇಶ್ ಬಿ. ಜವಳಗೇರಾ
|

Updated on: Jun 11, 2025 | 11:02 PM

Share

ನವದೆಹಲಿ, (ಜೂನ್ 11): ಭಾರತೀಯ ರೈಲ್ವೆ ಸಚಿವಾಲಯವು (Indian Railways) ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ (Tatkal Train Ticket Booking) ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್​ ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಈ​ ಜಾರಿಗೆ ಬರಲಿದೆ ಎಂದು ರೈಲ್ವೆ ಸಚಿವಾಲ ತಿಳಿಸಿದೆ.

01-07-2025 ರಿಂದ ಜಾರಿಗೆ ಬರುವಂತೆ ತತ್ಕಾಲ್ ಟಿಕೆಟ್‌ಗಳನ್ನು ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ಐಆರ್​ ಟಿಸಿ ವೆಬ್‌ಸೈಟ್ ಅಥವಾ ಅದರ ಆ್ಯಪ್​ ಮೂಲಕ ಬುಕ್ ಮಾಡಬಹುದು. ಜುಲೈ 15 ರಿಂದ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

ಕಂಪ್ಯೂಟರ್​ ಆಧಾರಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆ ಅಥವಾ ಅಧಿಕೃತ ಏಜೆಂಟ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಏಜೆಂಟ್​​ಗಳಿಗೆ ತತ್ಕಾಲ್​ ಬುಕಿಂಗ್​ ನಿರ್ಬಂಧ

ಇನ್ನು ತತ್ಕಾಲ್​ ಟಿಕೆಟ್​ ಸಾಮಾನ್ಯ ಜನರಿಗೆ ಸಿಗಲಿ ಎನ್ನುವ ಉದ್ದೇಶದಿಂದ ರೈಲ್ವೆ ಸಚಿವಾಲಯವು ಮಹತ್ತರ ಬದಲಾವಣೆಯೊಂದನ್ನು ತಂದಿದೆ. ಅದೇನೆಂದರೆ, ಭಾರತೀಯ ರೈಲ್ವೆಯ ಅಧಿಕೃತ ಏಜೆಂಟ್​ಗಳಿಗೆ ತತ್ಕಾಲ್ ಟಿಕೆಟ್​ ಆರಂಭವಾಗುವ ಮೊದಲ 30 ನಿಮಿಷದಲ್ಲಿ ಬುಕಿಂಗ್​ ಮಾಡುವ ಅವಕಾಶವನ್ನು ನಿರ್ಬಂಧಿಸಿದೆ. ಅಂದರೆ ಬೆಳಗ್ಗೆ 10 ರಿಂದ 10.30 ರವರೆಗೆ ಎಸಿ, ಬೆಳಗ್ಗೆ 11 ರಿಂದ 11.30 ರವರೆಗೆ ಆರಂಭವಾಗುವ ನಾನ್ ಎಸಿ ಟಿಕೆಟ್​ ಗಳನ್ನು ಬುಕ್​ ಮಾಡುವುದಕ್ಕೆ ಏಜೆಂಟ್​​ಗಳಿಗೆ ಅವಕಾಶ ನೀಡಿಲ್ಲ.

ಈ ಅವಧಿಯಲ್ಲಿ ಆಧಾರ್ ದೃಢೀಕರಿಸಿದವರಿಗೆ ಆದ್ಯತೆ ನೀಡಲಾಗಿದೆ. ಅದೇ ರೀತಿ ಜುಲೈ 15ರಿಂದ ತತ್ಕಾಲ್​​ ನಲ್ಲಿ ಟಿಕೆಟ್​ ಬುಕ್ ಮಾಡಲು ಆಧಾರ್ ಕಾರ್ಡ್ ಒಟಿಪಿ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಒಟಿಪಿ ದೃಢೀಕರಣದ ನಂತರವೇ ಪಿಆರ್ ಎಸ್ ಕೌಂಟರ್​​ ಗಳ ಮೂಲಕ ಬುಕ್ಕಿಂಗ್​ ಮಾಡಲು ತತ್ಕಾಲ್ ಟಿಕೆಟ್ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತತ್ಕಾಲ್​ ಯೋಜನೆಯ ಪ್ರಯೋಜನೆಗಳನ್ನು ಸಾಮಾನ್ಯ ಬಳಕೆದಾರರೂ ಪಡೆಯಲು ಈ ಕ್ರಮ ಜರುಗಿಸಲಾಗಿದೆ. ಜುಲೈ 1ರಿಂದ ಭಾರತೀಯ ರೈಲ್ವೆಯ ಅಧಿಕೃತ ವೆಬ್ ಸೈಟ್​​ ನಲ್ಲಿ ಟಿಕೆಟ್​ ಬುಕ್ಕಿಂಗ್ ಮಾಡುವವರು ಆಧಾರ್ ದೃಢೀಕರಣ ಮಾಡಿಕೊಳ್ಳಬೇಕು ಎಂದು ಸಚಿವಾಲು ಹೇಳಿದೆ.

ವ್ಯವಸ್ಥೆಯಲ್ಲಿ ಆದ ಮಾರ್ಪಾಡು ಮತ್ತು ಬದಲಾವಣೆಗಳನ್ನು ಎಲ್ಲಾ ವಲಯ ರೈಲ್ವೆಗಳಿಗೆ ತಿಳಿಸಲು ಸಚಿವಾಲಯವು ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಮತ್ತು IRCTC ಗೆ ನಿರ್ದೇಶಿಸಿದೆ. ಜೊತೆಗೆ, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದೆ. ಇನ್ನು ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯವು ರೈಲ್ವೆಯ ಎಲ್ಲ ವಲಯಗಳಿಗೆ ಮಾಹಿತಿ ನೀಡಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ