AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ
ಒಡಿಶಾ ರೈಲು ಅಪಘಾತ
ರಶ್ಮಿ ಕಲ್ಲಕಟ್ಟ
|

Updated on: Jun 06, 2023 | 2:08 PM

Share

ಒಡಿಶಾದ (Odisha) ಬಹನಾಗಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (Train Accident) ಸಂಬಂಧಿಕರು ಎಲ್ಲಿದ್ದಾರೆ ಎಂದು ಪತ್ತೆ ಹಚ್ಚಲು ಕುಟುಂಬಗಳಿಗೆ ಅನುಕೂಲವಾಗುವಂತೆ, ಒಡಿಶಾ ಸರ್ಕಾರದ ಬೆಂಬಲದೊಂದಿಗೆ ಭಾರತೀಯ ರೈಲ್ವೆ (Indian Railways) ಪತ್ತೆಹಚ್ಚಲು  ಬೇಕಾಗಿರುವ ಕ್ರಮ ಕೈಗೊಂಡಿದೆ. ಈ ರೈಲು ಅಪಘಾತದಲ್ಲಿ ಪ್ರಯಾಣಿಕರ ಕುಟುಂಬ ಸದಸ್ಯರು/ಸಂಬಂಧಿಗಳು/ಸ್ನೇಹಿತರು ಮತ್ತು ಹಿತೈಷಿಗಳು ಈ ಕೆಳಗಿನ ವಿವರಗಳನ್ನು ಬಳಸಿಕೊಂಡು ಮೃತರ ಫೋಟೋಗಳು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪ್ರಯಾಣಿಕರ ಪಟ್ಟಿಗಳು ಮತ್ತು ಗುರುತಿಸಲಾಗದ ವ್ಯಕ್ತಿಗಳ ಮಾಹಿತಿ  ಬಳಸಿಕೊಂಡು ಪತ್ತೆ ಮಾಡಬಹುದು ಎಂದು ಪಿಐಬಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಒಡಿಶಾದ ದುರಂತ ಬಹನಾಗಾ ರೈಲು ಅಪಘಾತದಲ್ಲಿ ಮೃತರ ಫೋಟೋಗಳ ಲಿಂಕ್: https://srcodisha.nic.in/Photos%20Of%20Deceased%20with%20Disclaimer.pdf

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರ ಪಟ್ಟಿಗಳ ಲಿಂಕ್: https://www.bmc.gov.in/train-accident/download/Lists-of-Passengers-Undergoing-Treatment-in-Different-Hospitals_040620230830.pdf

SCB ಕಟಕ್‌ನಲ್ಲಿ ಚಿಕಿತ್ಸೆಯಲ್ಲಿರುವ ಅಪರಿಚಿತ ವ್ಯಕ್ತಿಗಳ ಲಿಂಕ್: https://www.bmc.gov.in/train-accident/download/Un-identified-person-under-treatment-at-SCB-Cuttack.pdf

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲದೆ, ಬಿಎಂಸಿ ಸಹಾಯವಾಣಿ ಸಂಖ್ಯೆ 18003450061/1929 ಸಹ 24×7 ಕಾರ್ಯನಿರ್ವಹಿಸುತ್ತಿದೆ. ಮುನ್ಸಿಪಲ್ ಕಮಿಷನರ್ ಕಚೇರಿ, ಭುವನೇಶ್ವರ್, ಕಂಟ್ರೋಲ್ ರೂಂ ಅನ್ನು ಸ್ಥಾಪಿಸಿದ್ದು, ಅಲ್ಲಿಂದ ವಾಹನಗಳೊಂದಿಗೆ ಜನರನ್ನು ಆಸ್ಪತ್ರೆ ಅಥವಾ ಶವಾಗಾರಕ್ಕೆ ಕರೆದೊಯ್ದು ಶವ ಪತ್ತೆ ಮಾಡಲು ಸಹಾಯ ಮಾಡಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!