ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸುವಂತೆ ಭಾರತೀಯ ರೈಲ್ವೆ ಮನವಿ
ಒಡಿಶಾ ರೈಲು ಅಪಘಾತ
ರಶ್ಮಿ ಕಲ್ಲಕಟ್ಟ

Updated on: Jun 06, 2023 | 2:08 PM

ಒಡಿಶಾದ (Odisha) ಬಹನಾಗಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (Train Accident) ಸಂಬಂಧಿಕರು ಎಲ್ಲಿದ್ದಾರೆ ಎಂದು ಪತ್ತೆ ಹಚ್ಚಲು ಕುಟುಂಬಗಳಿಗೆ ಅನುಕೂಲವಾಗುವಂತೆ, ಒಡಿಶಾ ಸರ್ಕಾರದ ಬೆಂಬಲದೊಂದಿಗೆ ಭಾರತೀಯ ರೈಲ್ವೆ (Indian Railways) ಪತ್ತೆಹಚ್ಚಲು  ಬೇಕಾಗಿರುವ ಕ್ರಮ ಕೈಗೊಂಡಿದೆ. ಈ ರೈಲು ಅಪಘಾತದಲ್ಲಿ ಪ್ರಯಾಣಿಕರ ಕುಟುಂಬ ಸದಸ್ಯರು/ಸಂಬಂಧಿಗಳು/ಸ್ನೇಹಿತರು ಮತ್ತು ಹಿತೈಷಿಗಳು ಈ ಕೆಳಗಿನ ವಿವರಗಳನ್ನು ಬಳಸಿಕೊಂಡು ಮೃತರ ಫೋಟೋಗಳು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪ್ರಯಾಣಿಕರ ಪಟ್ಟಿಗಳು ಮತ್ತು ಗುರುತಿಸಲಾಗದ ವ್ಯಕ್ತಿಗಳ ಮಾಹಿತಿ  ಬಳಸಿಕೊಂಡು ಪತ್ತೆ ಮಾಡಬಹುದು ಎಂದು ಪಿಐಬಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಒಡಿಶಾದ ದುರಂತ ಬಹನಾಗಾ ರೈಲು ಅಪಘಾತದಲ್ಲಿ ಮೃತರ ಫೋಟೋಗಳ ಲಿಂಕ್:
https://srcodisha.nic.in/Photos%20Of%20Deceased%20with%20Disclaimer.pdf

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರ ಪಟ್ಟಿಗಳ ಲಿಂಕ್:
https://www.bmc.gov.in/train-accident/download/Lists-of-Passengers-Undergoing-Treatment-in-Different-Hospitals_040620230830.pdf

SCB ಕಟಕ್‌ನಲ್ಲಿ ಚಿಕಿತ್ಸೆಯಲ್ಲಿರುವ ಅಪರಿಚಿತ ವ್ಯಕ್ತಿಗಳ ಲಿಂಕ್:
https://www.bmc.gov.in/train-accident/download/Un-identified-person-under-treatment-at-SCB-Cuttack.pdf

ರೈಲು ಅಪಘಾತಕ್ಕೊಳಗಾದ ಪ್ರಯಾಣಿಕರ ಕುಟುಂಬಗಳು / ಸಂಬಂಧಿಕರನ್ನು ಸಂಪರ್ಕಿಸಲು ರೈಲ್ವೆ ಸಹಾಯವಾಣಿ ಸಂಖ್ಯೆ 139 ಹಗಲಿರುಳು ಕೆಲಸ ಮಾಡುತ್ತಿದೆ. ಸಹಾಯವಾಣಿ 139 ಅನ್ನು ರೈಲ್ವೆಯ ಹಿರಿಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲದೆ, ಬಿಎಂಸಿ ಸಹಾಯವಾಣಿ ಸಂಖ್ಯೆ 18003450061/1929 ಸಹ 24×7 ಕಾರ್ಯನಿರ್ವಹಿಸುತ್ತಿದೆ. ಮುನ್ಸಿಪಲ್ ಕಮಿಷನರ್ ಕಚೇರಿ, ಭುವನೇಶ್ವರ್, ಕಂಟ್ರೋಲ್ ರೂಂ ಅನ್ನು ಸ್ಥಾಪಿಸಿದ್ದು, ಅಲ್ಲಿಂದ ವಾಹನಗಳೊಂದಿಗೆ ಜನರನ್ನು ಆಸ್ಪತ್ರೆ ಅಥವಾ ಶವಾಗಾರಕ್ಕೆ ಕರೆದೊಯ್ದು ಶವ ಪತ್ತೆ ಮಾಡಲು ಸಹಾಯ ಮಾಡಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us