AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway: ಭಾರತೀಯ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರ ರದ್ದು

ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವೆ ಕಾರ್ಯನಿರ್ವಹಿಸುವ 740 ರೈಲುಗಳು ರದ್ದಾಗಿವೆ.

Indian Railway: ಭಾರತೀಯ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರ ರದ್ದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2022 | 12:38 PM

Share

ನವದೆಹಲಿ: ಚಳಿಗಾಲದ ಅವಧಿಯಲ್ಲಿ ಮಂಜು ಮುಸುಕಿರುವುದರಿಂದ ಹಾಗೂ ಕಾರ್ಯಾಚರಣೆಯ ಕಾರಣಗಳಿಂದಾಗಿ ಭಾರತೀಯ ರೈಲ್ವೆ ಇಲಾಖೆ 740 ರೈಲುಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ರದ್ದಾಗಲಿರುವ ರೈಲುಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಚಲಿಸುವ ರೈಲುಗಳಾಗಿವೆ. 2021ರ ಡಿಸೆಂಬರ್​ನಲ್ಲಿ ಪಶ್ಚಿಮ ರೈಲ್ವೆ ವಿಭಾಗ ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್​ ರಾಜ್ಯಗಳಲ್ಲಿ 6 ಜೋಡಿ ವಿಶೇಷ ರೈಲುಗಳನ್ನು 3 ತಿಂಗಳ ಅವಧಿಗೆ ಅಂದರೆ 2022ರ ಫೆಬ್ರವರಿ ಅಂತ್ಯದವರೆಗೆ ರದ್ದುಗೊಳಿಸುವುದಾಗಿ ಘೋಷಿಸಿತ್ತು. ಅದರ ಬೆನ್ನಲ್ಲೇ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರದ್ದಾಗುವ ಮತ್ತು ರದ್ದಾಗಿರುವ ರೈಲುಗಳ ಬಗ್ಗೆ ಮಾಹಿತಿಗಾಗಿ ಪ್ರಯಾಣಿಕರು ಈ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಅಥವಾ NTES ಆ್ಯಪ್ ಮೂಲಕವೂ ಮಾಹಿತಿಗಳನ್ನು ಪಡೆಯಬಹುದು ಎಂದು ರೈಲ್ವೆ ಅಧಿಕಾರಿಗಳು ಸೂಚಿಸಿದ್ದಾರೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವೆ ಕಾರ್ಯನಿರ್ವಹಿಸುವ ರೈಲುಗಳು ರದ್ದಾಗಿವೆ. ಒಂದುವೇಳೆ ನೀವು IRCTC ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೆ, ಆ ರೈಲುಗಳು ರದ್ದಾಗಿದ್ದರೆ ನೀವು ನಿಮ್ಮ ಇ-ಟಿಕೆಟ್ ಅನ್ನು ರದ್ದುಮಾಡಬೇಕಾದ ಅಗತ್ಯವಿಲ್ಲ. ರದ್ದಾಗಿರುವ ರಲ್ಲ ರೈಲುಗಳ ಪ್ರಯಾಣಿಕರ ಟಿಕೆಟ್ ಆಟೋಮ್ಯಾಟಿಕ್ ಆಗಿ ರದ್ದಾಗಲಿದ್ದು, ನಿಮ್ಮ ಖಾತೆಗೆ ಟಿಕೆಟ್​ನ ಮೊತ್ತ ಜಮಾ ಆಗುತ್ತದೆ ಎಂದು ನ್ಯೂಸ್​ 18 ವರದಿ ಮಾಡಿದೆ.

ನೀವು PRS ಕೌಂಟರ್ ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೆ, ನೀವು PRS ಕೌಂಟರ್‌ಗೆ ಭೇಟಿ ನೀಡುವ ಮೂಲಕ ಮತ್ತು ಸಂಬಂಧಿತ ಫಾರ್ಮ್ ಭರ್ತಿ ಮಾಡುವ ಮೂಲಕ ಟಿಕೆಟ್​ನ ಹಣ ವಾಪಾಸ್ ಪಡೆಯಬಹುದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮರು ಅಭಿವೃದ್ಧಿಪಡಿಸಿದ ನಿಲ್ದಾಣಗಳಲ್ಲಿ ಹತ್ತಲು, ಇಳಿಯಲು ವಿಧಿಸಲಿದೆ ರೈಲ್ವೆ ಶುಲ್ಕ

ಹೊಸ ವರ್ಷಕ್ಕೆ ಗುಡ್ ನ್ಯೂಸ್; ಚಿಕ್ಕಮಗಳೂರು-ಬೆಂಗಳೂರು ರೈಲು ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ

Follow Us
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ