AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway: ಭಾರತೀಯ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರ ರದ್ದು

ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವೆ ಕಾರ್ಯನಿರ್ವಹಿಸುವ 740 ರೈಲುಗಳು ರದ್ದಾಗಿವೆ.

Indian Railway: ಭಾರತೀಯ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರ ರದ್ದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2022 | 12:38 PM

Share

ನವದೆಹಲಿ: ಚಳಿಗಾಲದ ಅವಧಿಯಲ್ಲಿ ಮಂಜು ಮುಸುಕಿರುವುದರಿಂದ ಹಾಗೂ ಕಾರ್ಯಾಚರಣೆಯ ಕಾರಣಗಳಿಂದಾಗಿ ಭಾರತೀಯ ರೈಲ್ವೆ ಇಲಾಖೆ 740 ರೈಲುಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ರದ್ದಾಗಲಿರುವ ರೈಲುಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಚಲಿಸುವ ರೈಲುಗಳಾಗಿವೆ. 2021ರ ಡಿಸೆಂಬರ್​ನಲ್ಲಿ ಪಶ್ಚಿಮ ರೈಲ್ವೆ ವಿಭಾಗ ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್​ ರಾಜ್ಯಗಳಲ್ಲಿ 6 ಜೋಡಿ ವಿಶೇಷ ರೈಲುಗಳನ್ನು 3 ತಿಂಗಳ ಅವಧಿಗೆ ಅಂದರೆ 2022ರ ಫೆಬ್ರವರಿ ಅಂತ್ಯದವರೆಗೆ ರದ್ದುಗೊಳಿಸುವುದಾಗಿ ಘೋಷಿಸಿತ್ತು. ಅದರ ಬೆನ್ನಲ್ಲೇ ರೈಲ್ವೆ ಇಲಾಖೆಯಿಂದ 740 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರದ್ದಾಗುವ ಮತ್ತು ರದ್ದಾಗಿರುವ ರೈಲುಗಳ ಬಗ್ಗೆ ಮಾಹಿತಿಗಾಗಿ ಪ್ರಯಾಣಿಕರು ಈ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಅಥವಾ NTES ಆ್ಯಪ್ ಮೂಲಕವೂ ಮಾಹಿತಿಗಳನ್ನು ಪಡೆಯಬಹುದು ಎಂದು ರೈಲ್ವೆ ಅಧಿಕಾರಿಗಳು ಸೂಚಿಸಿದ್ದಾರೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವೆ ಕಾರ್ಯನಿರ್ವಹಿಸುವ ರೈಲುಗಳು ರದ್ದಾಗಿವೆ. ಒಂದುವೇಳೆ ನೀವು IRCTC ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೆ, ಆ ರೈಲುಗಳು ರದ್ದಾಗಿದ್ದರೆ ನೀವು ನಿಮ್ಮ ಇ-ಟಿಕೆಟ್ ಅನ್ನು ರದ್ದುಮಾಡಬೇಕಾದ ಅಗತ್ಯವಿಲ್ಲ. ರದ್ದಾಗಿರುವ ರಲ್ಲ ರೈಲುಗಳ ಪ್ರಯಾಣಿಕರ ಟಿಕೆಟ್ ಆಟೋಮ್ಯಾಟಿಕ್ ಆಗಿ ರದ್ದಾಗಲಿದ್ದು, ನಿಮ್ಮ ಖಾತೆಗೆ ಟಿಕೆಟ್​ನ ಮೊತ್ತ ಜಮಾ ಆಗುತ್ತದೆ ಎಂದು ನ್ಯೂಸ್​ 18 ವರದಿ ಮಾಡಿದೆ.

ನೀವು PRS ಕೌಂಟರ್ ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೆ, ನೀವು PRS ಕೌಂಟರ್‌ಗೆ ಭೇಟಿ ನೀಡುವ ಮೂಲಕ ಮತ್ತು ಸಂಬಂಧಿತ ಫಾರ್ಮ್ ಭರ್ತಿ ಮಾಡುವ ಮೂಲಕ ಟಿಕೆಟ್​ನ ಹಣ ವಾಪಾಸ್ ಪಡೆಯಬಹುದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮರು ಅಭಿವೃದ್ಧಿಪಡಿಸಿದ ನಿಲ್ದಾಣಗಳಲ್ಲಿ ಹತ್ತಲು, ಇಳಿಯಲು ವಿಧಿಸಲಿದೆ ರೈಲ್ವೆ ಶುಲ್ಕ

ಹೊಸ ವರ್ಷಕ್ಕೆ ಗುಡ್ ನ್ಯೂಸ್; ಚಿಕ್ಕಮಗಳೂರು-ಬೆಂಗಳೂರು ರೈಲು ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ

Follow Us
ರಾಬರಿ ಪ್ರಕರಣದ ಆರೋಪಿ ಹೈಡ್ರಾಮ: ಪೊಲೀಸರ ಮೇಲೆ ಹಲ್ಲೆ ಯತ್ನ!
ರಾಬರಿ ಪ್ರಕರಣದ ಆರೋಪಿ ಹೈಡ್ರಾಮ: ಪೊಲೀಸರ ಮೇಲೆ ಹಲ್ಲೆ ಯತ್ನ!
ಕನ್ನಡ- ಮರಾಠಿ ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು!
ಕನ್ನಡ- ಮರಾಠಿ ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು!
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ