AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!

ಗುಜರಿ ಮಾರಾಟದಿಂದ ಭಾರತೀಯ ರೈಲ್ವೆ ಇಲಾಖೆಗೆ ಬಂದಿರುವ ಆದಾಯ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು

Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!
ಭಾರತೀಯ ರೈಲ್ವೆ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 18, 2022 | 1:29 PM

Share

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ (Indian Railway Department) ಈ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ಗುಜರಿ (Scrap) ಮಾರಾಟದಿಂದ 2,582 ಕೋಟಿ ರೂ. ಆದಾಯ ಗಳಿಸಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

2022-23ಕ್ಕೆ ರೈಲ್ವೆ ಗುಜರಿಗಳ ಮಾರಾಟದ ಮೂಲಕ ಗಳಿಸುವ ಹಣದ ಗುರಿಯನ್ನು 4,400 ಕೋಟಿಗೆ ನಿಗದಿಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಕ್ರ್ಯಾಪ್ ವಸ್ತುಗಳ ಇ-ಹರಾಜಿನಲ್ಲಿ ಮಾರಾಟ ಮಾಡುವ ಮೂಲಕ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಲು ರೈಲ್ವೇ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಸಚಿವಾಲಯದ ಪ್ರಕಾರ, 2021-22ರಲ್ಲಿ 3,60,732 ಮೆಟ್ರಿಕ್ ಟನ್​ಗೆ ಹೋಲಿಸಿದರೆ 2022-23ರಲ್ಲಿ 3,93,421 ಮೆಟ್ರಿಕ್ ಟನ್ ಗುಜರಿಯನ್ನು ವಿಲೇವಾರಿ ಮಾಡಲಾಗಿದೆ. 2022-23ರಲ್ಲಿ 1751 ವ್ಯಾಗನ್‌ಗಳು, 1421 ಕೋಚ್‌ಗಳು ಮತ್ತು 97 ಲೊಕೋಗಳನ್ನು ವಿಲೇವಾರಿ ಮಾಡಲಾಗಿದ್ದು, 2021-2022ರವರೆಗೆ 1835 ವ್ಯಾಗನ್‌ಗಳು, 954 ಕೋಚ್‌ಗಳು ಮತ್ತು 77 ಲೊಕೋಸ್‌ಗಳನ್ನು ವಿಲೇವಾರಿ ಮಾಡಲಾಗಿತ್ತು.

ಇದನ್ನೂ ಓದಿ: Breaking News ರೈಲ್ವೆ ಉದ್ಯೋಗಿಗಳಿಗೆ 78 ದಿನದ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಹೊಸ ರೈಲ್ವೆ ಹಳಿಗಳನ್ನು ಹಾಕುವುದು, ಹಳೆಯ ಹಳಿಗಳನ್ನು ಹೊಸದಕ್ಕೆ ಪರಿವರ್ತಿಸುವುದು, ಹಳೆಯ ಇಂಜಿನ್‌ಗಳು, ಕೋಚ್‌ಗಳು ಮತ್ತು ವ್ಯಾಗನ್‌ಗಳನ್ನು ಮಾರಾಟ ಮಾಡುವುದು, ಮಾರ್ಗಗಳು ಮತ್ತು ತ್ಯಾಜ್ಯ ವಸ್ತುಗಳ ತ್ವರಿತ ವಿದ್ಯುದ್ದೀಕರಣ, ಡೀಸೆಲ್ ಇಂಜಿನ್‌ಗಳನ್ನು ಮಾರಾಟ ಮಾಡುವ ಮೂಲಕ ಈ ಗುಜರಿ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ. ರೈಲ್ವೆ ಇಲಾಖೆಗೆ ಇದು ಕೂಡ ಬಹುದೊಡ್ಡ ಆದಾಯದ ಮೂಲವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ