AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!

ಗುಜರಿ ಮಾರಾಟದಿಂದ ಭಾರತೀಯ ರೈಲ್ವೆ ಇಲಾಖೆಗೆ ಬಂದಿರುವ ಆದಾಯ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು

Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!
ಭಾರತೀಯ ರೈಲ್ವೆ
TV9 Web
| Edited By: |

Updated on: Oct 18, 2022 | 1:29 PM

Share

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ (Indian Railway Department) ಈ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ಗುಜರಿ (Scrap) ಮಾರಾಟದಿಂದ 2,582 ಕೋಟಿ ರೂ. ಆದಾಯ ಗಳಿಸಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

2022-23ಕ್ಕೆ ರೈಲ್ವೆ ಗುಜರಿಗಳ ಮಾರಾಟದ ಮೂಲಕ ಗಳಿಸುವ ಹಣದ ಗುರಿಯನ್ನು 4,400 ಕೋಟಿಗೆ ನಿಗದಿಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಕ್ರ್ಯಾಪ್ ವಸ್ತುಗಳ ಇ-ಹರಾಜಿನಲ್ಲಿ ಮಾರಾಟ ಮಾಡುವ ಮೂಲಕ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಲು ರೈಲ್ವೇ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಸಚಿವಾಲಯದ ಪ್ರಕಾರ, 2021-22ರಲ್ಲಿ 3,60,732 ಮೆಟ್ರಿಕ್ ಟನ್​ಗೆ ಹೋಲಿಸಿದರೆ 2022-23ರಲ್ಲಿ 3,93,421 ಮೆಟ್ರಿಕ್ ಟನ್ ಗುಜರಿಯನ್ನು ವಿಲೇವಾರಿ ಮಾಡಲಾಗಿದೆ. 2022-23ರಲ್ಲಿ 1751 ವ್ಯಾಗನ್‌ಗಳು, 1421 ಕೋಚ್‌ಗಳು ಮತ್ತು 97 ಲೊಕೋಗಳನ್ನು ವಿಲೇವಾರಿ ಮಾಡಲಾಗಿದ್ದು, 2021-2022ರವರೆಗೆ 1835 ವ್ಯಾಗನ್‌ಗಳು, 954 ಕೋಚ್‌ಗಳು ಮತ್ತು 77 ಲೊಕೋಸ್‌ಗಳನ್ನು ವಿಲೇವಾರಿ ಮಾಡಲಾಗಿತ್ತು.

ಇದನ್ನೂ ಓದಿ: Breaking News ರೈಲ್ವೆ ಉದ್ಯೋಗಿಗಳಿಗೆ 78 ದಿನದ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಹೊಸ ರೈಲ್ವೆ ಹಳಿಗಳನ್ನು ಹಾಕುವುದು, ಹಳೆಯ ಹಳಿಗಳನ್ನು ಹೊಸದಕ್ಕೆ ಪರಿವರ್ತಿಸುವುದು, ಹಳೆಯ ಇಂಜಿನ್‌ಗಳು, ಕೋಚ್‌ಗಳು ಮತ್ತು ವ್ಯಾಗನ್‌ಗಳನ್ನು ಮಾರಾಟ ಮಾಡುವುದು, ಮಾರ್ಗಗಳು ಮತ್ತು ತ್ಯಾಜ್ಯ ವಸ್ತುಗಳ ತ್ವರಿತ ವಿದ್ಯುದ್ದೀಕರಣ, ಡೀಸೆಲ್ ಇಂಜಿನ್‌ಗಳನ್ನು ಮಾರಾಟ ಮಾಡುವ ಮೂಲಕ ಈ ಗುಜರಿ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ. ರೈಲ್ವೆ ಇಲಾಖೆಗೆ ಇದು ಕೂಡ ಬಹುದೊಡ್ಡ ಆದಾಯದ ಮೂಲವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ