Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!

ಗುಜರಿ ಮಾರಾಟದಿಂದ ಭಾರತೀಯ ರೈಲ್ವೆ ಇಲಾಖೆಗೆ ಬಂದಿರುವ ಆದಾಯ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು

Indian Railways: ಗುಜರಿ ಮಾರಾಟದಿಂದ ರೈಲ್ವೆ ಇಲಾಖೆಗೆ 6 ತಿಂಗಳಲ್ಲಿ 2,582 ಕೋಟಿ ರೂ. ಆದಾಯ!
ಭಾರತೀಯ ರೈಲ್ವೆ
Follow us
| Updated By: ಸುಷ್ಮಾ ಚಕ್ರೆ

Updated on: Oct 18, 2022 | 1:29 PM

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ (Indian Railway Department) ಈ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ಗುಜರಿ (Scrap) ಮಾರಾಟದಿಂದ 2,582 ಕೋಟಿ ರೂ. ಆದಾಯ ಗಳಿಸಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 2003 ಕೋಟಿ ರೂ. ಸಂಗ್ರಹವಾಗಿತ್ತು ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

2022-23ಕ್ಕೆ ರೈಲ್ವೆ ಗುಜರಿಗಳ ಮಾರಾಟದ ಮೂಲಕ ಗಳಿಸುವ ಹಣದ ಗುರಿಯನ್ನು 4,400 ಕೋಟಿಗೆ ನಿಗದಿಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಕ್ರ್ಯಾಪ್ ವಸ್ತುಗಳ ಇ-ಹರಾಜಿನಲ್ಲಿ ಮಾರಾಟ ಮಾಡುವ ಮೂಲಕ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಲು ರೈಲ್ವೇ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಸಚಿವಾಲಯದ ಪ್ರಕಾರ, 2021-22ರಲ್ಲಿ 3,60,732 ಮೆಟ್ರಿಕ್ ಟನ್​ಗೆ ಹೋಲಿಸಿದರೆ 2022-23ರಲ್ಲಿ 3,93,421 ಮೆಟ್ರಿಕ್ ಟನ್ ಗುಜರಿಯನ್ನು ವಿಲೇವಾರಿ ಮಾಡಲಾಗಿದೆ. 2022-23ರಲ್ಲಿ 1751 ವ್ಯಾಗನ್‌ಗಳು, 1421 ಕೋಚ್‌ಗಳು ಮತ್ತು 97 ಲೊಕೋಗಳನ್ನು ವಿಲೇವಾರಿ ಮಾಡಲಾಗಿದ್ದು, 2021-2022ರವರೆಗೆ 1835 ವ್ಯಾಗನ್‌ಗಳು, 954 ಕೋಚ್‌ಗಳು ಮತ್ತು 77 ಲೊಕೋಸ್‌ಗಳನ್ನು ವಿಲೇವಾರಿ ಮಾಡಲಾಗಿತ್ತು.

ಇದನ್ನೂ ಓದಿ: Breaking News ರೈಲ್ವೆ ಉದ್ಯೋಗಿಗಳಿಗೆ 78 ದಿನದ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಹೊಸ ರೈಲ್ವೆ ಹಳಿಗಳನ್ನು ಹಾಕುವುದು, ಹಳೆಯ ಹಳಿಗಳನ್ನು ಹೊಸದಕ್ಕೆ ಪರಿವರ್ತಿಸುವುದು, ಹಳೆಯ ಇಂಜಿನ್‌ಗಳು, ಕೋಚ್‌ಗಳು ಮತ್ತು ವ್ಯಾಗನ್‌ಗಳನ್ನು ಮಾರಾಟ ಮಾಡುವುದು, ಮಾರ್ಗಗಳು ಮತ್ತು ತ್ಯಾಜ್ಯ ವಸ್ತುಗಳ ತ್ವರಿತ ವಿದ್ಯುದ್ದೀಕರಣ, ಡೀಸೆಲ್ ಇಂಜಿನ್‌ಗಳನ್ನು ಮಾರಾಟ ಮಾಡುವ ಮೂಲಕ ಈ ಗುಜರಿ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ. ರೈಲ್ವೆ ಇಲಾಖೆಗೆ ಇದು ಕೂಡ ಬಹುದೊಡ್ಡ ಆದಾಯದ ಮೂಲವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ