AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು?

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಹಂಚಿಕೆ ವಿವಾದದ ಕುರಿತು ಭಾರತೀಯ ರೈಲ್ವೆ ತನ್ನ ನಿಯಮಗಳನ್ನು ಸ್ಪಷ್ಟಪಡಿಸಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಖಾಲಿ ಇದ್ದರೆ ಕೆಳ ಬರ್ತ್ ಸ್ವಯಂ ಚಾಲಿತವಾಗಿ ಲಭಿಸುತ್ತದೆ. ಆದರೆ, ಒಂದೇ PNR ನಲ್ಲಿ ಎರಡು ಟಿಕೆಟ್‌ಗಳನ್ನು ಬುಕ್ ಮಾಡಿದಾಗ ಕೆಳ ಬರ್ತ್ ಸಿಗುವ ಸಾಧ್ಯತೆ ಹೆಚ್ಚು. ಗುಂಪು ಬುಕಿಂಗ್‌ನಲ್ಲಿ ಈ ಆದ್ಯತೆ ಸಿಗದಿರಬಹುದು ಎಂಬ ಬಗ್ಗೆಯೂ ಲೇಖನ ಮಾಹಿತಿ ನೀಡಿದೆ.

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು?
ರೈಲು
ನಯನಾ ರಾಜೀವ್
|

Updated on: Mar 02, 2026 | 8:05 AM

Share

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಪ್ರಯಾಣಿಕರಿಗೆ ಲೋವರ್ ಬರ್ತ್​ ಹಂಚಿಕೆಗೆ ಸಂಬಂಧಿಸಿದ ನಿಯಮಗಳನ್ನು ಸ್ಪಷ್ಟಪಡಿಸಿದೆ. ಭಾರತೀಯ ರೈಲ್ವೆಯ ಸೀಟು ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ, ಯಾವುದೇ ಆಯ್ಕೆ ನೀಡದಿದ್ದರೂ ಕೂಡ, ಹಿರಿಯ ನಾಗರಿಕರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಪ್ರಯಾಣಿಕರಿಗೆ ಸ್ವಯಂ ಚಾಲಿತವಾಗಿ ಕೆಳ ಬರ್ತ್​ ಹಂಚಿಕೆ ಮಾಡುವ ಅವಕಾಶವಿದೆ.

ಇಂಟರ್ನೆಟ್​ ಮೂಲಕ ಕಾಯ್ದಿರಿಸಿದ ಟಿಕೆಟ್‌ಗಳನ್ನು ಬುಕ್ ಮಾಡುವ ಸಮಯದಲ್ಲಿ, ಕೆಳ ಬರ್ತ್ ಲಭ್ಯವಿದ್ದರೆ ಮಾತ್ರ ಬುಕಿಂಗ್ ಅನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದು ತಿಳಿಸಲಾಗಿದೆ. ಅಂತಹ ಸಂದರ್ಭದಲ್ಲಿ ಕೆಳ ಬರ್ತ್ ಲಭ್ಯವಿದ್ದರೆ ಮಾತ್ರ ಟಿಕೆಟ್ ಬುಕ್ ಮಾಡಲಾಗುತ್ತದೆ. ಇದಲ್ಲದೆ, ಭಾರತೀಯ ರೈಲ್ವೆಯಲ್ಲಿ, ಕಾಯ್ದಿರಿಸಿದ ಟಿಕೆಟ್​ಗಳನ್ನು ಮೊದಲು ಬಂದವರಿಗೆ ಮೊದಲು ಸೇವೆ ಆಧಾರದ ಮೇಲೆ ಬುಕ್ ಮಾಡಬಹುದು ಮತ್ತು ಆಯ್ಕೆಯ ಬರ್ತ್ ಲಭ್ಯತೆಗೆ ಒಳಪಟ್ಟಿರುತ್ತದೆ.

ಸ್ವಲ್ಪ ದಿನಗಳ ಹಿಂದೆ ಟಿಟಿಇ ಒಬ್ಬರು ಈ ಕುರಿತು ಮಾತನಾಡಿರುವುದು ವೈರಲ್ ಆಗಿತ್ತು, ಲೋವರ್ ಬರ್ತ್​ ಪಡೆಯಬೇಕೆಂದರೆ ಏನು ಮಾಡಬೇಕು ಎಂದು ಮಾಹಿತಿ ನೀಡಿದ್ದರು. ನೀವು ಎಂದಾದರೂ ರೈಲು ಟಿಕೆಟ್ ಬುಕ್ ಮಾಡುವಾಗ ಲೋವರ್ ಬರ್ತ್ ಆದ್ಯತೆ ಆಯ್ಕೆ ಮಾಡಿಕೊಂಡಿದ್ದರೂ ಅಪ್ಪರ್ ಬರ್ತ್ ಪಡೆದಿದ್ದೀರಾ?, ನೀವೊಬ್ಬರೇ ಅಲ್ಲ ಸಾಕಷ್ಟು ಪ್ರಯಾಣಿಕರಿಗೆ ಇದರ ಅನುಭವವಾಗಿದೆ.ಹಿರಿಯ ನಾಗರಿಕ ಪ್ರಯಾಣಿಕರಲ್ಲಿ ಈ ರೀತಿಯ ಘಟನ ಹೆಚ್ಚಾಗಿದೆ.

ಮತ್ತಷ್ಟು ಓದಿ: ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ

ನೀವು ಲೋವರ್ ಬರ್ತ್ ಬಯಸಿದರೆ, ಒಂದು ಪಿಎನ್‌ಆರ್‌ನಲ್ಲಿ ಕೇವಲ ಎರಡು ಟಿಕೆಟ್‌ಗಳನ್ನು ಬುಕ್ ಮಾಡಿ. ನೀವು ಮೂರು ಅಥವಾ ನಾಲ್ಕು ಟಿಕೆಟ್‌ಗಳನ್ನು ಒಟ್ಟಿಗೆ ಬುಕ್ ಮಾಡಿದಾಗ, ವ್ಯವಸ್ಥೆಯು ಅದನ್ನು ಗುಂಪು ಬುಕಿಂಗ್ ಎಂದು ಪರಿಗಣಿಸುತ್ತದೆ ಮತ್ತು ಲೋವರ್ ಬರ್ತ್ ಆದ್ಯತೆಯನ್ನು ತೆಗೆದುಹಾಕಲಾಗುತ್ತದೆ. ಅಂದರೆ ಕಡಿಮೆ ಟಿಕೆಟ್‌ಗಳು, ಹೆಚ್ಚು ಲಾಭ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ