AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ

ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen - LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಬಾಂಗ್ಲಾದೇಶಕ್ಕೆ ಆಮ್ಲಜನಕ ಸರಬರಾಜು ಪೂರೈಕೆಗೆ ಭಾರತೀಯ ರೈಲ್ವೆ ನಿರ್ಧಾರ
ಆಕ್ಸಿಜನ್ ಕಂಟೇನರ್‌ಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 25, 2021 | 4:16 PM

Share

ದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಗಳು ಬಾಂಗ್ಲಾದೇಶಕ್ಕೂ ವಿಸ್ತರಣೆಯಾಗಲಿವೆ. ಬಾಂಗ್ಲಾದೇಶಕ್ಕೆ 200 ಮೆಟ್ರಿಕ್​ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು (Liquid Medical Oxygen – LMO) ಮೊದಲ ಹಂತದಲ್ಲಿ ಸರಬರಾಜು ಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ.

ಕಳೆದ ಜುಲೈ 24ರಂದು ಟಾಟಾ ಕಂಪನಿಗೆ ದಕ್ಷಿಣ ಪೂರ್ವ ರೈಲ್ವೆ ವಿಭಾಗದ ಚಕ್ರಧರಪುರ ವಿಭಾಗವು ಈ ಸಂಬಂಧ ಇಂಡೆಂಟ್​ ನೀಡಿದೆ. 200 ಮೆಟ್ರಿಕ್ ಟನ್ ಆಮ್ಲಜನಕವನ್ನು ಬಾಂಗ್ಲಾದೇಶದ ಬೆನಾಪೊಲ್​ಗೆ ರವಾನಿಸಬೇಕೆಂಬ ಬೇಡಿಕೆ ಬಂದಿದೆ.

ಕಳೆದ ಏಪ್ರಿಲ್ 24ರಿಂದ ಭಾರತೀಯ ರೈಲ್ವೆಯು ಆಕ್ಸಿಜನ್ ಎಕ್ಸ್​ಪ್ರೆಸ್​ ಸೇವೆಯನ್ನು ನಿರ್ವಹಿಸುತ್ತಿದೆ. ಈ ಮೂಲಕ ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ಉದ್ದಗಲಕ್ಕೂ ವಿವಿಧ ನಗರಗಳಿಗೆ ರೈಲ್ವೆ ಸರಬರಾಜು ಮಾಡಿತ್ತು. ಕೊರೊನಾ ವೈರಸ್​ ಸೋಂಕಿನ 2ನೇ ಅಲೆ ವ್ಯಾಪಕವಾಗಿದ್ದಾಗ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡುಬಂದಿತ್ತು. 15 ರಾಜ್ಯಗಳಲ್ಲಿ 480 ಆಕ್ಸಿಜನ್ ಎಕ್ಸ್​ಪ್ರೆಸ್​ ರೈಲುಗಳ ಮೂಲಕ 35,000 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಮಾಡಲಾಗಿತ್ತು.

(Indian Railways Oxygen Express To ship Medical Oxygen To Bangladesh)

ಇದನ್ನೂ ಓದಿ: 1,500 ಕ್ಕೂ ಹೆಚ್ಚು ಪಿಎಸ್​ಎ ಆಮ್ಲಜನಕ ಸ್ಥಾವರಗಳ ಸ್ಥಾಪನೆ; ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ ಮೋದಿ

ಇದನ್ನೂ ಓದಿ: ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣ: ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?