AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರೈಲು ಸ್ವಲ್ಪವೂ ಕ್ಲೀನ್ ಇಲ್ಲ ಎಂದು ಇನ್ಮುಂದೆ ಹೇಳೋಹಾಗಿಲ್ಲ, ಏನೇನೆಲ್ಲಾ ಸೌಕರ್ಯಗಳನ್ನು ಕಲ್ಪಿಸಲಿದೆ ಗೊತ್ತೇ?

ರೈಲುಗಳು ಸ್ವಚ್ಛವಾಗಿರುವುದಿಲ್ಲ, ಶೌಚಾಲಯಕ್ಕಂತೂ ಮೂಗು ಮುಚ್ಚಿಕೊಂಡು ಹೋಗಬೇಕು, ರೈಲು ಪೂರ್ತಿ ಮೂತ್ರದ ವಾಸನೆ ಬರುತ್ತಿರುತ್ತದೆ ಹೀಗೆ ಹಲವು ದೂರುಗಳಿವೆ.

Indian Railways: ರೈಲು ಸ್ವಲ್ಪವೂ ಕ್ಲೀನ್ ಇಲ್ಲ ಎಂದು ಇನ್ಮುಂದೆ ಹೇಳೋಹಾಗಿಲ್ಲ, ಏನೇನೆಲ್ಲಾ ಸೌಕರ್ಯಗಳನ್ನು ಕಲ್ಪಿಸಲಿದೆ ಗೊತ್ತೇ?
ರೈಲು ಶೌಚಾಲಯ
ನಯನಾ ರಾಜೀವ್
|

Updated on: Mar 12, 2023 | 7:46 AM

Share

ರೈಲುಗಳು ಸ್ವಚ್ಛವಾಗಿರುವುದಿಲ್ಲ, ಶೌಚಾಲಯಕ್ಕಂತೂ ಮೂಗು ಮುಚ್ಚಿಕೊಂಡು ಹೋಗಬೇಕು, ರೈಲು ಪೂರ್ತಿ ಮೂತ್ರದ ವಾಸನೆ ಬರುತ್ತಿರುತ್ತದೆ ಹೀಗೆ ಹಲವು ದೂರುಗಳಿವೆ. ಆದರೆ ನಿಮ್ಮೆಲ್ಲಾ ದೂರುಗಳನ್ನು ದೂರ ಮಾಡಲು ಭಾರತೀಯ ರೈಲ್ವೆ ಸಿದ್ಧವಾಗಿದೆ. ವಾಸನೆ ನಿಯಂತ್ರಣ, ಸ್ವಯಂಚಾಲಿತ ನೈರ್ಮಲ್ಯ ವ್ಯವಸ್ಥೆಗಳೊಂದಿಗೆ ಉತ್ತಮ ಸೌಕರ್ಯಗಳನ್ನು ಪರಿಚಯಿಸಲಿದೆ. ಇತರೆ ಸಾರಿಗೆಗಳಿಗೆ ಹೋಲಿಸಿದರೆ ರೈಲಿನಲ್ಲಿ ದರ ಕಡಿಮೆ ಇರುವುದರಿಂದ ಎಲ್ಲರೂ ರೈಲ್ವೆ ಪ್ರಯಾಣವನ್ನು ಹೆಚ್ಚು ಆಶ್ರಯಿಸುತ್ತಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸುವುದರಿಂದ ಇವುಗಳ ನಿರ್ವಹಣೆ ಸರಿಯಾಗಿ ಆಗುತ್ತಿರಲಿಲ್ಲ, ಇಂತಹ ಸಮಸ್ಯೆ ನಿವಾರಣೆಗಾಗಿ ಭಾರತೀಯ ರೈಲ್ವೆ ಇಲಾಖೆ ಹೊಸ ಸೌಲಭ್ಯಗಳನ್ನು ಪರಿಚಯಿಸಲಿದೆ. ಈಗಿರುವ ಶೌಚಾಲಯಗಳನ್ನು ಉತ್ತಮ ಸೌಲಭ್ಯಗಳೊಂದಿಗೆ ವಿನ್ಯಾಸಗೊಳಿಸಿದ ಜೈವಿಕ ಶೌಚಾಲಯಕ್ಕೆ ಬದಲಾಯಿಸಲಾಗುತ್ತದೆ.

ಮತ್ತಷ್ಟು ಓದಿ: Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್

ರೈಲ್ವೆ ಇಲಾಖೆ ಅಭಿವೃದ್ಧಿಪಡಿಸಿರುವ ಈ ಜೈವಿಕ ಶೌಚಾಲಯಗಳು ಸ್ವಯಂಚಾಲಿತ ನೈರ್ಮಲ್ಯ ಮತ್ತು ವಾಸನೆ ನಿಯಂತ್ರಣ ವ್ಯವಸ್ಥೆಯನ್ನು ಹೊಂದಿವೆ. ರೈಲ್ವೆ ಪ್ರಯಾಣಿಕರು ಶೀಘ್ರವೇ ಉತ್ತಮ ಸೌಕರ್ಯಗಳನ್ನು ಆನಂದಿಸಲಿದ್ದಾರೆ. ರೈಲುಗಳಲ್ಲಿ ಅಸ್ತಿತ್ವದಲ್ಲಿರುವ ಶೌಚಾಲಯಗಳನ್ನು ಹೊಸದಾಗಿ ವಿನ್ಯಾಸಗೊಳಿಸಲಾಗುತ್ತಿದೆ ಮತ್ತು ಉತ್ತಮ ಸೌಕರ್ಯಗಳೊಂದಿಗೆ ನವೀಕರಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ರೈಲ್ವೆಯು ಪ್ರಾಯೋಗಿಕ ಯೋಜನೆಯಾಗಿ ರಾಂಚಿ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ನಾಲ್ಕು ಜೈವಿಕ ಶೌಚಾಲಯಗಳೊಂದಿಗೆ ಎಸಿ ಕೋಚ್ ಅನ್ನು ಪರಿಚಯಿಸಿದೆ. ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದರ ಮೇಲೆ ನಿರ್ಧಾರ ನಿಂತಿದೆ, ನಂತರದ ದಿನಗಳಲ್ಲಿ ದೇಶದಲ್ಲಿರುವ ಎಲ್ಲಾ ರೈಲುಗಳಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ರೈಲ್ವೆ ಇಲಾಖೆ ಹೇಳಿದೆ.

ಈ ನವೀಕರಿಸಿದ ಶೌಚಾಲಯಗಳಲ್ಲಿ ಸ್ವಯಂಚಾಲಿತ ನೈರ್ಮಲ್ಯ ಮತ್ತು ವಾಸನೆ ನಿಯಂತ್ರಣ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ನೀರಿನ ಟ್ಯಾಪ್‌ಗಳು ಮತ್ತು ಸೋಪ್ ಡಿಸ್ಪೆನ್ಸರ್‌ಗಳು ಸಹ ಸ್ಪರ್ಶ-ಮುಕ್ತ ಮತ್ತು ಸಂವೇದಕ ಆಧಾರಿತವಾಗಿರುತ್ತವೆ.

ಎಕನಾಮಿಕ್ ಟೈಮ್ಸ್‌ಗೆ ವಿವರಗಳನ್ನು ನೀಡಿದ ರೈಲ್ವೆ ಅಧಿಕಾರಿಗಳು, ವಾಶ್‌ರೂಮ್‌ಗಳ ಹೊರತಾಗಿ, ರೈಲು ಪ್ರಯಾಣದ ಸಮಯದಲ್ಲಿ ಸುಧಾರಿತ ಸೌಲಭ್ಯಗಳನ್ನು ಒದಗಿಸಲು ದ್ವಾರಗಳು ಮತ್ತು ಗ್ಯಾಂಗ್‌ವೇಗಳನ್ನು ಸಹ ಮರುರೂಪಿಸಲಾಗಿದೆ.

ಇದಕ್ಕೂ ಮುನ್ನ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಜನವರಿಯಲ್ಲಿ ದೆಹಲಿ ನಿಲ್ದಾಣಕ್ಕೆ ಭೇಟಿ ನೀಡಿ ಹೊಸ ಮೇಲ್ದರ್ಜೆಗೇರಿದ ಶೌಚಾಲಯಗಳ ಪರಿಶೀಲನೆ ನಡೆಸಿದ್ದರು ಮತ್ತು ಎಲ್ಲಾ ಕೋಚ್‌ಗಳಲ್ಲಿ ಈಗಿರುವ ಶೌಚಾಲಯಗಳನ್ನು ಆಧುನಿಕ ಶೌಚಾಲಯಗಳೊಂದಿಗೆ ಬದಲಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!