AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?

ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಬೆಂಕಿ ಅನಾಹುತಗಳನ್ನು ತಡೆಯುವ ಕುರಿತು ಜಾಗೃತಿ ಸಪ್ತಾಹ ಆಚರಿಸಲೂ ರೈಲ್ವೆ ಇಲಾಖೆ ಮುಂದಾಗಿದೆ.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 30, 2021 | 10:00 PM

Share

ರಾತ್ರಿ ಪ್ರಯಾಣದ ವೇಳೆ ಮೊಬೈಲ್​ ಮತ್ತು ಲ್ಯಾಪ್​ಟಾಪ್ ಚಾರ್ಜ್​ ಮಾಡಲು ಅವಕಾಶ ನೀಡದಿರುವ ಬಗ್ಗೆ ಭಾರತೀಯ ರೈಲ್ವೆ ಗಂಭೀರವಾಗಿ ಆಲೋಚಿಸುತ್ತಿದೆ. ಕೆಲ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ಲೈವ್​ಮಿಂಟ್’ ಜಾಲತಾಣ ವರದಿ ಮಾಡಿದೆ.

ರೈಲುಗಳಲ್ಲಿ ಸುರಕ್ಷತೆ ಹೆಚ್ಚಿಸುವ ಕುರಿತು ಹಿರಿಯ ರೈಲ್ವೆ ಅಧಿಕಾರಿ ಸಲ್ಲಿಸಿರುವ ವರದಿಯಲ್ಲಿ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಎಲೆಕ್ಟ್ರಿಕ್ ಉಪಕರಣಗಳ ಚಾರ್ಜಿಂಗ್​ಗೆ ಬಳಸುವ ಪಾಯಿಂಟ್​ಗಳಲ್ಲಿ ವಿದ್ಯುತ್ ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಹೇಳಲಾಗಿದೆ. ಡೆಹ್ರಾಡೂನ್​ ಸಮೀಪ ಮಾರ್ಚ್ 13ರಂದು ಶತಾಬ್ದಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕೇವಲ 6 ದಿನಗಳ ನಂತರ ರಾಂಚಿ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ರೈಲಿನ ಎಂಜಿನ್​ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

‘ಭಾರತೀಯ ರೈಲ್ವೆಯ ಕಾರ್ಯಾಚರಣೆಗಳಲ್ಲಿ ಸುರಕ್ಷೆಗೆ ಹೆಚ್ಚು ಗಮನ ನೀಡಲಾಗುವುದು. ಈ ವಿಚಾರದಲ್ಲಿ ಯಾವುದೇ ತಪ್ಪುಗಳು ಆಗಲು ಯಾರೊಬ್ಬರೂ ಅವಕಾಶ ನೀಡಬಾರದು. ರೈಲುಗಳ ಸಂಚಾರದ ವೇಳೆ ಸುರಕ್ಷೆಯ ವಿಚಾರವನ್ನು ಸಮಗ್ರವಾಗಿ ಪರಾಮರ್ಶಿಸಬೇಕು ಮತ್ತು ಆಗಾಗ ಪರಿಶೀಲಿಸುತ್ತಿರಬೇಕು’ ಎಂದು ರೈಲ್ವೆ ಸಚಿವರು ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡುವಾಗ ಹೇಳಿದರು ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಧೂಮಪಾನ ಮತ್ತು ಹೊತ್ತಿ ಉರಿಯುವ ವಸ್ತುಗಳನ್ನು ರೈಲುಗಳಲ್ಲಿ ಸಾಗಿಸುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಂಚರಿಸುತ್ತಿದ್ದ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಇದೂ ಮುಖ್ಯ ಕಾರಣ ಎಂದು ತಿಳಿದುಬಂದಿತ್ತು. ರೈಲುಗಳಲ್ಲಿ ಬೆಂಕಿ ದುರಂತ ತಡೆಯಲು ಅಗತ್ಯಕ್ರಮ ತೆಗೆದುಕೊಳ್ಳುವಂತೆ ರೈಲ್ವೆ ಇಲಾಖೆಯು ಎಲ್ಲ ವಿಭಾಗೀಯ ಕಚೇರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಯಾಣಿಕರು ಮತ್ತು ಉದ್ಯೋಗಿಗಳಲ್ಲಿ ಅಗ್ನಿ ಅವಘಡ ತಡೆಯುವ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸುವಂತೆ ನಿರ್ದೇಶನ ರವಾನಿಸಿದೆ.

ಇದನ್ನೂ ಓದಿ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

Published On - 9:56 pm, Tue, 30 March 21

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು