AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?

ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಬೆಂಕಿ ಅನಾಹುತಗಳನ್ನು ತಡೆಯುವ ಕುರಿತು ಜಾಗೃತಿ ಸಪ್ತಾಹ ಆಚರಿಸಲೂ ರೈಲ್ವೆ ಇಲಾಖೆ ಮುಂದಾಗಿದೆ.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 30, 2021 | 10:00 PM

Share

ರಾತ್ರಿ ಪ್ರಯಾಣದ ವೇಳೆ ಮೊಬೈಲ್​ ಮತ್ತು ಲ್ಯಾಪ್​ಟಾಪ್ ಚಾರ್ಜ್​ ಮಾಡಲು ಅವಕಾಶ ನೀಡದಿರುವ ಬಗ್ಗೆ ಭಾರತೀಯ ರೈಲ್ವೆ ಗಂಭೀರವಾಗಿ ಆಲೋಚಿಸುತ್ತಿದೆ. ಕೆಲ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ಲೈವ್​ಮಿಂಟ್’ ಜಾಲತಾಣ ವರದಿ ಮಾಡಿದೆ.

ರೈಲುಗಳಲ್ಲಿ ಸುರಕ್ಷತೆ ಹೆಚ್ಚಿಸುವ ಕುರಿತು ಹಿರಿಯ ರೈಲ್ವೆ ಅಧಿಕಾರಿ ಸಲ್ಲಿಸಿರುವ ವರದಿಯಲ್ಲಿ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಎಲೆಕ್ಟ್ರಿಕ್ ಉಪಕರಣಗಳ ಚಾರ್ಜಿಂಗ್​ಗೆ ಬಳಸುವ ಪಾಯಿಂಟ್​ಗಳಲ್ಲಿ ವಿದ್ಯುತ್ ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಹೇಳಲಾಗಿದೆ. ಡೆಹ್ರಾಡೂನ್​ ಸಮೀಪ ಮಾರ್ಚ್ 13ರಂದು ಶತಾಬ್ದಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕೇವಲ 6 ದಿನಗಳ ನಂತರ ರಾಂಚಿ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ರೈಲಿನ ಎಂಜಿನ್​ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

‘ಭಾರತೀಯ ರೈಲ್ವೆಯ ಕಾರ್ಯಾಚರಣೆಗಳಲ್ಲಿ ಸುರಕ್ಷೆಗೆ ಹೆಚ್ಚು ಗಮನ ನೀಡಲಾಗುವುದು. ಈ ವಿಚಾರದಲ್ಲಿ ಯಾವುದೇ ತಪ್ಪುಗಳು ಆಗಲು ಯಾರೊಬ್ಬರೂ ಅವಕಾಶ ನೀಡಬಾರದು. ರೈಲುಗಳ ಸಂಚಾರದ ವೇಳೆ ಸುರಕ್ಷೆಯ ವಿಚಾರವನ್ನು ಸಮಗ್ರವಾಗಿ ಪರಾಮರ್ಶಿಸಬೇಕು ಮತ್ತು ಆಗಾಗ ಪರಿಶೀಲಿಸುತ್ತಿರಬೇಕು’ ಎಂದು ರೈಲ್ವೆ ಸಚಿವರು ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡುವಾಗ ಹೇಳಿದರು ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಧೂಮಪಾನ ಮತ್ತು ಹೊತ್ತಿ ಉರಿಯುವ ವಸ್ತುಗಳನ್ನು ರೈಲುಗಳಲ್ಲಿ ಸಾಗಿಸುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಂಚರಿಸುತ್ತಿದ್ದ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಇದೂ ಮುಖ್ಯ ಕಾರಣ ಎಂದು ತಿಳಿದುಬಂದಿತ್ತು. ರೈಲುಗಳಲ್ಲಿ ಬೆಂಕಿ ದುರಂತ ತಡೆಯಲು ಅಗತ್ಯಕ್ರಮ ತೆಗೆದುಕೊಳ್ಳುವಂತೆ ರೈಲ್ವೆ ಇಲಾಖೆಯು ಎಲ್ಲ ವಿಭಾಗೀಯ ಕಚೇರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಯಾಣಿಕರು ಮತ್ತು ಉದ್ಯೋಗಿಗಳಲ್ಲಿ ಅಗ್ನಿ ಅವಘಡ ತಡೆಯುವ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸುವಂತೆ ನಿರ್ದೇಶನ ರವಾನಿಸಿದೆ.

ಇದನ್ನೂ ಓದಿ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

Published On - 9:56 pm, Tue, 30 March 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ