AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?

ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಬೆಂಕಿ ಅನಾಹುತಗಳನ್ನು ತಡೆಯುವ ಕುರಿತು ಜಾಗೃತಿ ಸಪ್ತಾಹ ಆಚರಿಸಲೂ ರೈಲ್ವೆ ಇಲಾಖೆ ಮುಂದಾಗಿದೆ.

ಇನ್ನು ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡಲು ಅವಕಾಶ ಸಿಗದು?
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 30, 2021 | 10:00 PM

Share

ರಾತ್ರಿ ಪ್ರಯಾಣದ ವೇಳೆ ಮೊಬೈಲ್​ ಮತ್ತು ಲ್ಯಾಪ್​ಟಾಪ್ ಚಾರ್ಜ್​ ಮಾಡಲು ಅವಕಾಶ ನೀಡದಿರುವ ಬಗ್ಗೆ ಭಾರತೀಯ ರೈಲ್ವೆ ಗಂಭೀರವಾಗಿ ಆಲೋಚಿಸುತ್ತಿದೆ. ಕೆಲ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ರೈಲುಗಳಲ್ಲಿ ರಾತ್ರಿವೇಳೆ ಚಾರ್ಜಿಂಗ್ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ಲೈವ್​ಮಿಂಟ್’ ಜಾಲತಾಣ ವರದಿ ಮಾಡಿದೆ.

ರೈಲುಗಳಲ್ಲಿ ಸುರಕ್ಷತೆ ಹೆಚ್ಚಿಸುವ ಕುರಿತು ಹಿರಿಯ ರೈಲ್ವೆ ಅಧಿಕಾರಿ ಸಲ್ಲಿಸಿರುವ ವರದಿಯಲ್ಲಿ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಎಲೆಕ್ಟ್ರಿಕ್ ಉಪಕರಣಗಳ ಚಾರ್ಜಿಂಗ್​ಗೆ ಬಳಸುವ ಪಾಯಿಂಟ್​ಗಳಲ್ಲಿ ವಿದ್ಯುತ್ ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಹೇಳಲಾಗಿದೆ. ಡೆಹ್ರಾಡೂನ್​ ಸಮೀಪ ಮಾರ್ಚ್ 13ರಂದು ಶತಾಬ್ದಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕೇವಲ 6 ದಿನಗಳ ನಂತರ ರಾಂಚಿ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್​ ರೈಲಿನ ಎಂಜಿನ್​ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

‘ಭಾರತೀಯ ರೈಲ್ವೆಯ ಕಾರ್ಯಾಚರಣೆಗಳಲ್ಲಿ ಸುರಕ್ಷೆಗೆ ಹೆಚ್ಚು ಗಮನ ನೀಡಲಾಗುವುದು. ಈ ವಿಚಾರದಲ್ಲಿ ಯಾವುದೇ ತಪ್ಪುಗಳು ಆಗಲು ಯಾರೊಬ್ಬರೂ ಅವಕಾಶ ನೀಡಬಾರದು. ರೈಲುಗಳ ಸಂಚಾರದ ವೇಳೆ ಸುರಕ್ಷೆಯ ವಿಚಾರವನ್ನು ಸಮಗ್ರವಾಗಿ ಪರಾಮರ್ಶಿಸಬೇಕು ಮತ್ತು ಆಗಾಗ ಪರಿಶೀಲಿಸುತ್ತಿರಬೇಕು’ ಎಂದು ರೈಲ್ವೆ ಸಚಿವರು ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡುವಾಗ ಹೇಳಿದರು ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಧೂಮಪಾನ ಮತ್ತು ಹೊತ್ತಿ ಉರಿಯುವ ವಸ್ತುಗಳನ್ನು ರೈಲುಗಳಲ್ಲಿ ಸಾಗಿಸುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು. ಸಂಚರಿಸುತ್ತಿದ್ದ ರೈಲುಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಇದೂ ಮುಖ್ಯ ಕಾರಣ ಎಂದು ತಿಳಿದುಬಂದಿತ್ತು. ರೈಲುಗಳಲ್ಲಿ ಬೆಂಕಿ ದುರಂತ ತಡೆಯಲು ಅಗತ್ಯಕ್ರಮ ತೆಗೆದುಕೊಳ್ಳುವಂತೆ ರೈಲ್ವೆ ಇಲಾಖೆಯು ಎಲ್ಲ ವಿಭಾಗೀಯ ಕಚೇರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಯಾಣಿಕರು ಮತ್ತು ಉದ್ಯೋಗಿಗಳಲ್ಲಿ ಅಗ್ನಿ ಅವಘಡ ತಡೆಯುವ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸುವಂತೆ ನಿರ್ದೇಶನ ರವಾನಿಸಿದೆ.

ಇದನ್ನೂ ಓದಿ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಅಗ್ನಿ, ಒಂದು ಬೋಗಿ ಭಸ್ಮ

Published On - 9:56 pm, Tue, 30 March 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ