Nitin Gadkari: 2024ರ ವೇಳೆಗೆ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಿಂತ ಉತ್ತಮವಾಗಿರುತ್ತವೆ; ನಿತಿನ್ ಗಡ್ಕರಿ ಭರವಸೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2024ರ ಅಂತ್ಯಕ್ಕೂ ಮೊದಲು ಭಾರತದ ರಸ್ತೆ ಮೂಲಸೌಕರ್ಯವು ಅಮೆರಿಕದ ರಸ್ತೆಗಿಂತ ಉತ್ತಮವಾಗಿರುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari: 2024ರ ವೇಳೆಗೆ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಿಂತ ಉತ್ತಮವಾಗಿರುತ್ತವೆ; ನಿತಿನ್ ಗಡ್ಕರಿ ಭರವಸೆ
ನಿತಿನ್ ಗಡ್ಕರಿ
Follow us
| Updated By: ಸುಷ್ಮಾ ಚಕ್ರೆ

Updated on: Dec 30, 2022 | 9:56 AM

ಪಣಜಿ: ನರೇಂದ್ರ ಮೋದಿ (PM Narendra Modi) ಸರ್ಕಾರದ ಅಡಿಯಲ್ಲಿ 2024ರ ಅಂತ್ಯದ ವೇಳೆಗೆ ಅಮೆರಿಕಾದಲ್ಲಿರುವ ರಸ್ತೆಗಳಿಗಿಂತ ಭಾರತದ ರಸ್ತೆಗಳು ಉತ್ತಮವಾಗಿರುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಭರವಸೆ ನೀಡಿದ್ದಾರೆ. ಗುರುವಾರ ಗೋವಾದ (Goa) ಜುವಾರಿ ನದಿಯ ಮೊದಲ ಹಂತದ ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ಗೋವಾದ ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

ದೇಶದಲ್ಲಿ ಈಗ ರಸ್ತೆ ಮೂಲಸೌಕರ್ಯವನ್ನು ತ್ವರಿತ ಗತಿಯಲ್ಲಿ ರಚಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2024ರ ಅಂತ್ಯಕ್ಕೂ ಮೊದಲು ಭಾರತದ ರಸ್ತೆ ಮೂಲಸೌಕರ್ಯವು ಅಮೆರಿಕದ ರಸ್ತೆಗಿಂತ ಉತ್ತಮವಾಗಿರುತ್ತದೆ. ಈ ತಿಂಗಳ ಆರಂಭದಲ್ಲಿ ಮೋಪಾದಲ್ಲಿ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯಾರಂಭ ಮಾಡುವುದರಿಂದ ಗೋವಾ ದೇಶದ ಮೊದಲ ರಾಜ್ಯವಾಗಲು ದಾರಿ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Big News: ವೇದಿಕೆಯಲ್ಲೇ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಅರ್ಧಕ್ಕೇ ನಿಂತ ಕಾರ್ಯಕ್ರಮ

ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ತಮ್ಮ ಯೋಜನೆಗಳನ್ನು ವಿವರಿಸಿದ ಸಚಿವ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರು ವಾಹನದ ಹಾರ್ನ್‌ಗಳ “ಅಬ್ಬರದ” ಶಬ್ದವನ್ನು ಹಿತವಾದ ಸಂಗೀತದೊಂದಿಗೆ ಬದಲಾಯಿಸುವ ಸಾಧ್ಯತೆಯನ್ನು ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಹೊಸ ಜುವಾರಿ ಸೇತುವೆಯ ಕುರಿತು ಮಾತನಾಡಿದ ಗಡ್ಕರಿ, ಇದು ಗೋಪುರದ ಮೇಲೆ ತಿರುಗುವ ರೆಸ್ಟೋರೆಂಟ್ ಮತ್ತು ವೀಕ್ಷಕರ ಗ್ಯಾಲರಿಯನ್ನು ಹೊಂದಿರುತ್ತದೆ. ರಾಜ್ಯ ಸರ್ಕಾರವು ಈ ಯೋಜನೆಗೆ ಎರಡು ಬಾರಿ ಟೆಂಡರ್‌ಗಳನ್ನು ನೀಡಿತ್ತು. ಆದರೆ ಬಿಡ್ಡರ್‌ಗಳಿಂದ ಯಾವುದೇ ಪ್ರತಿಕ್ರಿಯೆಯನ್ನು ಪಡೆಯಲು ಸಾಧ್ಯವಾಗಲಿಲ್ಲ. ಈ ಯೋಜನೆಯನ್ನು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ನಾನು ಗೋವಾ ಸರ್ಕಾರಕ್ಕೆ ಸಹಾಯ ಮಾಡುತ್ತೇನೆ ಎಂದು ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ: Bengaluru-Mysuru Expressway: ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಜ. 5ರಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ

ಗಡ್ಕರಿ ಅವರು ಬಾಂಬೋಲಿಮ್‌ನಿಂದ ವೆರ್ನಾ ಗ್ರಾಮಗಳಿಗೆ ಸೇತುವೆಯ ಮಾರ್ಗವನ್ನು ಉದ್ಘಾಟಿಸಿದರು. ಗೋವಾ ಸರ್ಕಾರದ ಪ್ರಕಾರ, ಇದು ಭಾರತದ ಅತ್ಯಂತ ಅಗಲವಾದ ಕೇಬಲ್ ಸ್ಟೇಡ್ ಸೇತುವೆಯಾಗಿದೆ. ಈ ಸೇತುವೆಯು ಬಾಂಬೋಲಿಮ್ ಮತ್ತು ವೆರ್ನಾ ಗ್ರಾಮಗಳ ನಡುವಿನ 13.2 ಕಿಲೋಮೀಟರ್ ದೂರವನ್ನು ಒಳಗೊಂಡಿರುವ ರೂ 2,530 ಕೋಟಿ ಯೋಜನೆಯ ಭಾಗವಾಗಿದೆ.

ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ 2022ರ ಮಾರ್ಚ್‌ನಲ್ಲಿ ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಕೂಡ 2024ರ ವೇಳೆಗೆ ಭಾರತದ ರಸ್ತೆ ಮೂಲಸೌಕರ್ಯ ಅಮೆರಿಕದಂತೆಯೇ ಆಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?