AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಹೊಸ ವರ್ಷದಂದು ಹೊಸ ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು, ಕಪ್ಪು ಕುಳಿ ಅಧ್ಯಯನಕ್ಕೆ ಉಪಗ್ರಹ ಉಡಾವಣೆ
ಉಪಗ್ರಹ
ನಯನಾ ರಾಜೀವ್
|

Updated on: Jan 01, 2024 | 8:40 AM

Share

ಹೊಸ ವರ್ಷದಂದು ಹೊಸ ಉತ್ಸಾಹದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವರ್ಷದ ಮೊದಲ ಬಾಹ್ಯಾಕಾಶ ಯಾತ್ರೆಗೆ ಸಿದ್ಧತೆ ನಡೆಸಿದೆ. ಕಪ್ಪುಕುಳಿ ಅಧ್ಯಯನಕ್ಕಾಗಿ ಇಂದು 9.10ರ ಸುಮಾರಿಗೆ ಎಕ್ಸ್​ ರೇ ಪೋಲಾರಿಮೀಟರ್​ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ವರ್ಷದ ಮೊದಲ ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಆರಂಭವಾಗಲಿದೆ.

ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ವಿಶೇಷ ಖಗೋಳ ವೀಕ್ಷಣಾಲಯವನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ವಿಶ್ವದ ಎರಡನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

ಎಕ್ಸ್‌ಪೋಸ್ಯಾಟ್ ಒಂದು ರೀತಿಯ ವೀಕ್ಷಣಾಲಯವಾಗಿದೆ, ಇದು ಬಾಹ್ಯಾಕಾಶದಿಂದ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ 2021 ರಲ್ಲಿ ಇಮೇಜಿಂಗ್ ಎಕ್ಸ್-ರೇ ಪೋಲಾರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ಹೆಸರಿನ ಮಿಷನ್ ಅನ್ನು ಪ್ರಾರಂಭಿಸಿತು. ಇದರ ಮೂಲಕ ಕಪ್ಪು ಕುಳಿಗಳು ಮತ್ತು ಬಾಹ್ಯಾಕಾಶದಲ್ಲಿರುವ ಇತರ ವಿಷಯಗಳನ್ನು ಅಧ್ಯಯನ ಮಾಡಲಾಗುತ್ತಿದೆ.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ

ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಎಕ್ಸ್ ಪೋಸ್ಯಾಟ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಎಕ್ಸೋಪಾಸ್ಯಾಟ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ಈ ಉಪಗ್ರಹವನ್ನು ಭೂಮಿಯ ಕೆಳಗಿನ ಕಕ್ಷೆಯಲ್ಲಿ ಸ್ಥಾಪಿಸಲಾಗುವುದು, ಅಲ್ಲಿಂದ ಭೂಮಿಗೆ 650 ಕಿ.ಮೀ ಅಂತರವಿರಲಿದೆ. ಉಡಾವಣೆಯು ಇಸ್ರೋದ ಅಧಿಕೃತ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದಲ್ಲಿ ನೇರ ಪ್ರಸಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ