AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಿಜ್ಞಾನಕ್ಕೆ ಹೆಮ್ಮೆಯ ಕ್ಷಣ; ಡಾ. ಸೌಮ್ಯ ಸ್ವಾಮಿನಾಥನ್​ಗೆ ಲಂಡನ್​​ನ ರಾಯಲ್ ಸೊಸೈಟಿಯ ಫೆಲೋಶಿಪ್

ಭಾರತೀಯ ವಿಜ್ಞಾನ ರಂಗಕ್ಕೆ ಅತ್ಯಂತ ಹೆಮ್ಮೆಯ ಸಂಗತಿಯೆಂದರೆ, ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಅವರು ಲಂಡನ್‌ನ ಪ್ರತಿಷ್ಠಿತ 'ರಾಯಲ್ ಸೊಸೈಟಿ'ಯ ಗೌರವಾನ್ವಿತ ಫೆಲೋ (Fellow of the Royal Society - FRS) ಆಗಿ ಆಯ್ಕೆಯಾಗಿದ್ದಾರೆ. ರಾಯಲ್ ಸೊಸೈಟಿಯ 365 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಈ ಗೌರವಕ್ಕೆ ಪಾತ್ರರಾದ ಕೇವಲ ಎರಡನೇ ಭಾರತೀಯ ಮಹಿಳಾ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಡಾ. ಸೌಮ್ಯಾ ಸ್ವಾಮಿನಾಥನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2019 ರಲ್ಲಿ ಗಗನ್‌ದೀಪ್ ಕಾಂಗ್ ಅವರು ಈ ಫೆಲೋಶಿಪ್ ಪಡೆದ ಮೊದಲ ಭಾರತೀಯ ಮಹಿಳೆಯಾಗಿ ಆಯ್ಕೆಯಾಗಿದ್ದರು.

ಭಾರತೀಯ ವಿಜ್ಞಾನಕ್ಕೆ ಹೆಮ್ಮೆಯ ಕ್ಷಣ; ಡಾ. ಸೌಮ್ಯ ಸ್ವಾಮಿನಾಥನ್​ಗೆ ಲಂಡನ್​​ನ ರಾಯಲ್ ಸೊಸೈಟಿಯ ಫೆಲೋಶಿಪ್
Soumya SwaminathanImage Credit source: x
ಸುಷ್ಮಾ ಚಕ್ರೆ
|

Updated on: May 19, 2026 | 10:50 PM

Share

ನವದೆಹಲಿ, ಮೇ 19: ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಜಗತ್ತಿನ ಅತ್ಯಂತ ಪ್ರತಿಷ್ಠಿತ ವೈಜ್ಞಾನಿಕ ಗೌರವಗಳಲ್ಲಿ ಒಂದಾದ ರಾಯಲ್ ಸೊಸೈಟಿಯ (FRS) ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಪ್ರಸಿದ್ಧ ಕೃಷಿ ವಿಜ್ಞಾನಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಎಂ.ಎಸ್. ಸ್ವಾಮಿನಾಥನ್ ಕೂಡ ಅದೇ ಸಮೂಹದಲ್ಲಿ FRS ಆಗಿ ಆಯ್ಕೆಯಾಗಿದ್ದರು. ಈ ಮೂಲಕ ಅವರಿಬ್ಬರೂ ಲಂಡನ್ ರಾಯಲ್ ಸೊಸೈಟಿಯ ಫೆಲೋಶಿಪ್ ಪಡೆದ ಭಾರತದ ಮೊದಲ ತಂದೆ-ಮಗಳು ಎನಿಸಿಕೊಂಡಿದ್ದಾರೆ.

ಮುಖ್ಯಾಂಶಗಳು:

  • ಭಾರತದ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್​ಗೆ ರಾಯಲ್ ಸೊಸೈಟಿ ಫೆಲೋಶಿಪ್
  • ಅವರ ತಂದೆ ಎಂ.ಎಸ್. ಸ್ವಾಮಿನಾಥನ್​ಗೂ ಲಭಿಸಿತ್ತು ಈ ಗೌರವ
  • ಲಂಡನ್‌ನ ರಾಯಲ್ ಸೊಸೈಟಿ ವಿಶ್ವದ ಅತ್ಯಂತ ಹಳೆಯ ವಿಜ್ಞಾನ ಅಕಾಡೆಮಿಗಳಲ್ಲೊಂದು

ರಾಯಲ್ ಸೊಸೈಟಿಯ 365 ವರ್ಷಗಳ ಇತಿಹಾಸದಲ್ಲಿ ಫೆಲೋಶಿಪ್ ಪಡೆದ ಎರಡನೇ ಭಾರತೀಯ ಮಹಿಳಾ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್. ಮೊದಲನೆಯವರು 2019ರಲ್ಲಿ ಆಯ್ಕೆಯಾದ ಪ್ರಸಿದ್ಧ ಲಸಿಕೆಶಾಸ್ತ್ರಜ್ಞರಾದ ಪ್ರೊ. ಗಗನ್‌ದೀಪ್ ಕಾಂಗ್.

ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುನ್ನ, ಅವರು 2015 ರಿಂದ 2017 ರವರೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಮಹಾನಿರ್ದೇಶಕರಾಗಿ ಮತ್ತು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಯೇಸು ಕ್ರಿಸ್ತನ ಅಂತ್ಯಕ್ರಿಯೆಗೆ ಬಳಸಿದ್ದ ಬಟ್ಟೆಗೆ ಭಾರತದ ನಂಟು; ವಿಜ್ಞಾನಿಗಳ ಸಂಶೋಧನೆ ಹೇಳೋದೇನು?

1660 ರಲ್ಲಿ ಸ್ಥಾಪನೆಯಾದ ರಾಯಲ್ ಸೊಸೈಟಿಯು ವಿಶ್ವದ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ವೈಜ್ಞಾನಿಕ ಅಕಾಡೆಮಿಗಳಲ್ಲಿ ಒಂದಾಗಿದೆ. ತಮ್ಮ ಕ್ಷೇತ್ರಗಳಿಗೆ ಅಸಾಧಾರಣ ಕೊಡುಗೆಗಳನ್ನು ನೀಡಿದ ವಿಜ್ಞಾನಿಗಳಿಗೆ ಫೆಲೋಶಿಪ್ ನೀಡಲಾಗುತ್ತದೆ.

ಸೌಮ್ಯ ಸ್ವಾಮಿನಾಥನ್ ಯಾರು?:

ಡಾ. ಸೌಮ್ಯ ಸ್ವಾಮಿನಾಥನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ಭಾರತದ ಮಕ್ಕಳ ತಜ್ಞೆ ಮತ್ತು ಕ್ಲಿನಿಕಲ್ ವಿಜ್ಞಾನಿಯಾಗಿದ್ದಾರೆ. ಅವರು ವಿಶ್ವ ಆರೋಗ್ಯ ಸಂಸ್ಥೆ (WHO) ಯಲ್ಲಿ ವಹಿಸಿದ್ದ ಪ್ರಮುಖ ನಾಯಕತ್ವದ ಜವಾಬ್ದಾರಿಗಾಗಿ ಜಾಗತಿಕವಾಗಿ ಚಿರಪರಿಚಿತರಾಗಿದ್ದಾರೆ. ಸೌಮ್ಯ ಸ್ವಾಮಿನಾಥನ್ ಅವರ ತಂದೆ, ಭಾರತದ ಹಸಿರು ಕ್ರಾಂತಿಯ ಪಿತಾಮಹ ಹಾಗೂ ಭಾರತ ರತ್ನ ಪುರಸ್ಕೃತರಾದ ಪ್ರೊ. ಎಂ. ಎಸ್. ಸ್ವಾಮಿನಾಥನ್ ಅವರೂ ಸಹ ಹಿಂದೆ ರಾಯಲ್ ಸೊಸೈಟಿಯ ಫೆಲೋ (FRS) ಆಗಿ ಆಯ್ಕೆಯಾಗಿದ್ದರು. ಈಗ ಅವರ ಪುತ್ರಿಯೂ ಅದೇ ಪ್ರತಿಷ್ಠಿತ ಗೌರವವನ್ನು ಪಡೆದುಕೊಳ್ಳುವ ಮೂಲಕ ಈ ವಿಜ್ಞಾನಿ ಕುಟುಂಬವು ದೇಶಕ್ಕೆ ಕೀರ್ತಿ ತಂದಿದೆ.

ಇದನ್ನೂ ಓದಿ: ವಿಜ್ಞಾನಿಗಳು ರೈತರ ಹೊಲಗಳನ್ನೇ ಪ್ರಯೋಗಾಲಯವಾಗಿ ಪರಿವರ್ತಿಸಬೇಕು; ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ಕರೆ

ಏನಿದು ರಾಯಲ್ ಸೊಸೈಟಿ?:

ಲಂಡನ್‌ನಲ್ಲಿರುವ ರಾಯಲ್ ಸೊಸೈಟಿಯು ವಿಶ್ವದ ಅತ್ಯಂತ ಹಳೆಯ ಮತ್ತು ಅತ್ಯುನ್ನತ ವಿಜ್ಞಾನ ಅಕಾಡೆಮಿಗಳಲ್ಲಿ ಒಂದಾಗಿದೆ. ವಿಜ್ಞಾನ, ವೈದ್ಯಕೀಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕವಾಗಿ ಅಸಾಧಾರಣ ಕೊಡುಗೆ ನೀಡಿದ ವಿಜ್ಞಾನಿಗಳಿಗೆ ಮಾತ್ರ ಇದರ ಸದಸ್ಯತ್ವವನ್ನು (Fellowship) ನೀಡಲಾಗುತ್ತದೆ. ಸರ್ ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್‌ಸ್ಟೈನ್ ಮತ್ತು ಚಾರ್ಲ್ಸ್ ಡಾರ್ವಿನ್ ಅವರಂತಹ ವಿಶ್ವವಿಖ್ಯಾತ ವಿಜ್ಞಾನಿಗಳು ಇದರ ಸದಸ್ಯರಾಗಿದ್ದರು ಎಂಬುದು ಇದರ ಮಹತ್ವವನ್ನು ಸಾರುತ್ತದೆ.

ಡಾ. ಸೌಮ್ಯ ಸ್ವಾಮಿನಾಥನ್ ಅವರು ಕಳೆದ ಮೂರು ದಶಕಗಳಲ್ಲಿ ಕ್ಷಯರೋಗ (TB) ಮತ್ತು ಎಚ್‌ಐವಿ (HIV) ಕುರಿತು ನಡೆಸಿರುವ ಅದ್ಭುತ ವೈದ್ಯಕೀಯ ಸಂಶೋಧನೆಗಳು ಹಾಗೂ ಕೋವಿಡ್-19 ಜಾಗತಿಕ ಸಾಂಕ್ರಾಮಿಕದ ಸಮಯದಲ್ಲಿ ಜಾಗತಿಕ ಆರೋಗ್ಯ ನೀತಿಗಳನ್ನು ರೂಪಿಸುವಲ್ಲಿ ಅವರು ವಹಿಸಿದ ಅತ್ಯುನ್ನತ ನಾಯಕತ್ವವನ್ನು ಗುರುತಿಸಿ ಈ ಫೆಲೋಶಿಪ್ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!