AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಿಜ್ಞಾನಿಗಳಿಂದ ಕೊರೊನಾ ತಡೆಗೆ ತಾಮ್ರ ಆಧಾರಿತ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿ

ಭಾರತೀಯ ವಿಜ್ಞಾನಿಗಳ ತಂಡ ತಾಮ್ರ ಆಧಾರಿತ ನ್ಯಾನೋಪಾರ್ಟಿಕಲ್​ ಕೋಟೆಡ್​ ಆ್ಯಂಟಿವೈರಲ್​ ಫೇಸ್​ ಮಾಸ್ಕ್​ಅನ್ನು ಅಭಿವೃದ್ಧಿಪಡಿಸಿದೆ. ಇದು ಕೊರೊನಾ ವೈರಸ್​ ಮಾತ್ರವಲ್ಲದೆ ಇದರ ವೈರಲ್​ಗಳು ಕೂಡ ದೇಹವನ್ನು ಬಾಯಿ ಮತ್ತು ಮೂಗಿನಿಂದ ಪ್ರವೇಶಿಸದಂತೆ ತಡೆಯುತ್ತದೆ.

ಭಾರತೀಯ ವಿಜ್ಞಾನಿಗಳಿಂದ ಕೊರೊನಾ ತಡೆಗೆ ತಾಮ್ರ ಆಧಾರಿತ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Feb 04, 2022 | 4:41 PM

ಕೊರೊನಾ (Corona) ಸೋಂಕು ಹರಡುವುದನ್ನು ತಡೆಯಲು ಫೇಸ್​ ಮಾಸ್ಕ್ (Face Mask)​ ಅತೀ ಮುಖ್ಯವಾಗಿದೆ. ಆದರೆ ಯಾವ ರೀತಿ ಮಾಸ್ಕ್​ ಧರಿಸಿದರೆ ಹೆಚ್ಚು ಸುರಕ್ಷಿತ ಎನ್ನುವುದನ್ನು ತಿಳಿದುಕೊಳ್ಳಬೇಕು. ತಜ್ಞರ ಪ್ರಕಾರ ಬಟ್ಟೆಯ ಮಾಸ್ಕ್​ಗಳು ಹೆಚ್ಚು ಸುರಕ್ಷಿತವಲ್ಲ. ಹೀಗಾಗಿ ಇದೀಗ ಭಾರತೀಯ ವಿಜ್ಞಾನಿಗಳ ತಂಡ ತಾಮ್ರ ಆಧಾರಿತ ನ್ಯಾನೋಪಾರ್ಟಿಕಲ್​ ಕೋಟೆಡ್​ ಆ್ಯಂಟಿವೈರಲ್​ ಫೇಸ್​ ಮಾಸ್ಕ್ (Copper-based Nanoparticle-coated Antiviral Face Mask) ​ಅನ್ನು ಅಭಿವೃದ್ಧಿಪಡಿಸಿದೆ. ಇದು ಕೊರೊನಾ ವೈರಸ್​ ಮಾತ್ರವಲ್ಲದೆ ಇದರ ವೈರಲ್​ಗಳು ಕೂಡ ದೇಹವನ್ನು ಬಾಯಿ ಮತ್ತು ಮೂಗಿನಿಂದ ಪ್ರವೇಶಿಸದಂತೆ ತಡೆಯುತ್ತದೆ. ಜತೆಗೆ ಸರಾಗವಾಗಿ ಉಸಿರಾಡಲು ನೆರವಾಗುತ್ತದೆ.  ಇದನ್ನು ತೊಳೆದು ಮರುಬಳಕೆ ಮಾಡಬಹುದಾಗಿದೆ ಹಾಗೂ ಮಣ್ಣಿನಲ್ಲಿ ವಿಘಟನೆಯಾಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ವಿಜ್ಞಾನಿಗಳೂ ಕೂಡ ಸುರಕ್ಷಿತವಾದ ಕಡಿಮೆ ಬೆಲೆಯ ಮಾಸ್ಕ್​ಅನ್ನು ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. ಭಾರತೀಯ ಮಾರುಕಟ್ಟೆಯಲ್ಲಿ ಆಂಟಿವೈರಲ್​​ ಮತ್ತು ಆ್ಯಂಟಿ ಬ್ಯಾಕ್ಟೀರಿಯಲ್​ ಮಾಸ್ಕ್​ಗಳು ದುಬಾರಿ ಬೆಲೆ ಮಾರಟವಾಗುತ್ತಿದೆ. ಕೊರೊನಾ ವೈರಸ್​ ಜನನಿಬಿಡ ಪ್ರದೇಶಗಳಾದ ಆಸ್ಪತ್ರೆ, ವಿಮಾನ ನಿಲ್ದಾಣ, ಮಾಲ್​ಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಹೀಗಾಗಿ ಹೆಚ್ಚು ಸುರಕ್ಷತೆ ನೀಡುವ ಕಡಿಮೆ ಬೆಲೆಯ ಮಾಸ್ಕ್​ ತಯಾರಿಸುವ ಅವಶ್ಯಕತೆಯಿದೆ.  ಈ ನಿಟ್ಟಿನಲ್ಲಿ ಪೌಡರ್ ಮೆಟಲರ್ಜಿ ಮತ್ತು ನ್ಯೂ ಮೆಟೀರಿಯಲ್​ನ ಅಂತರಾಷ್ಟ್ರೀಯ ಸುಧಾರಿತ ಸಂಶೋಧನಾ ಕೇಂದ್ರ, ಭಾರತ ಸರ್ಕಾರ, R &Dಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ, ಬೆಂಗಳೂರಿನ ರೆಸಿಲ್​ ಕೆಮಿಕಲ್ಸ್​​ನ ಸಹಯೋಗದೊಂದಿಗೆ ತಾಮ್ರ ಲೇಪಿತ ನ್ಯಾನೋಪಾರ್ಟಿಕಲ್​ ಕೋಟೆಡ್​ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿಪಡಿಸಲಾಗಿದೆ.

ಈ ನ್ಯಾನೋಪಾರ್ಟಿಕಲ್ ಫೇಸ್​ ಮಾಸ್ಕ್​ಗಳನ್ನು ಸುಮಾರು​  20 ನ್ಯಾನೋ ಮೀಟರ್​ಗಳ ಫ್ಲೇಮ್ ಸ್ಪ್ರೇ ಪೈರೋಲಿಸಿಸ್ (Flame Spray Pyrolysis) ಮುಲಕ ತಯಾರಿಸಲಾಗಿದ್ದು, ಒಳಗಡೆಯಿಂದ ಹತ್ತಿಯ ಪದರವನ್ನು ಹಾಕಲಾಗಿದೆ. ಇದು ಶೇ. 99.9ಕ್ಕಿಂತ ಹೆಚ್ಚು ಪಟ್ಟು ವೈರಸ್​ ದೇಹವನ್ನು ಸೇರದಂತೆ ತಡೆಯುತ್ತದೆ. ಇದರಲ್ಲೇ ಸಿಂಗಲ್​ ಕೋಟೆಡ್​ ಮತ್ತು ಮೂರು ಕೋಟಿಂಗ್​ ಇರುವ ಮಾಸ್ಕ್​ಗಳನ್ನು ಉತ್ಪಾದಿಸಲಾಗುತ್ತಿದೆ. ಈ ಮಾಸ್ಕ್​ಅನ್ನು DSTಯ ನ್ಯಾನೋ ಮಷಿನ್ ಪ್ರಾಜೆಕ್ಟ್​ ಅಡಿಯಲ್ಲಿ ತಯಾರಿಸಲಾಗುತ್ತಿದೆ.  ಈ ಮಾಸ್ಕ್​ಗಳಲ್ಲಿ  ತಾಮ್ರ ಆಧಾರಿತ ನ್ಯಾನೋಪಾರ್ಟಿಕಲ್​  ಸಿಂಗಲ್​ ಕೋಟೆಡ್​  ಮಾಸ್ಕ್​ಗಳು ಹೆಚ್ಚು ಸುರಕ್ಷಿತ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಈಗಾಗಲೇ ಬೆಂಗಳೂರಿನ ರೆಸಿಲ್​ ಕೆಮಿಕಲ್ಸ್​​ ಸಂಸ್ಥೆ ಡಬಲ್​ ಲೇಯರ್​ ಮಾಸ್ಕ್​ಗಳನ್ನು ಉತ್ಪಾದಿಸುತ್ತಿವೆ. ಈ ಮಾಸ್ಕ್​ಗಳನ್ನು ಸರಿಯಾಗಿ ಧರಿಸದಿದ್ದರೆ ಮತ್ತು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ವೈರಸ್​ಅನ್ನು ಮತ್ತೆ ಹರಡುವ ಸಾಧ್ಯತೆ ಇರುತ್ತದೆ. ಜನನಿಬಿಡ ಸ್ಥಳಗಳಲ್ಲಿ ಡಬಲ್​ ಲೇಯರ್​ ಮಾಸ್ಕ್​ ಧರಿಸವುದು ಹೆಚ್ಚು ಸುರಕ್ಷಿತ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜಗತ್ತಿನಾದ್ಯಂತ ಈಗ ಎಸೆದ ಮಾಸ್ಕ್​ಗಳ ವಿಲೇವಾರಿಯ ಸಂಕಷ್ಟ ಎದುರಾಗಿದೆ ಆದರೆ ವಿಜ್ಞಾನಿಗಳ ತಂಡ ತಯಾರಿಸಿದ ಆ್ಯಂಟಿವೈರಲ್​ ಮಾಸ್ಕ್​​ಗಳು ಭೂಮಿಯಲ್ಲಿ ಕರಗುತ್ತವೆ. ಈ ಹೀಗಾಗಿ ವಿಘಟನೆಯ ಸಮಸ್ಯೆ ಎದುರಾಗುವುದಿಲ್ಲ ಎಂದು ವಿಜ್ಞಾನಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​

ಇದನ್ನೂ ಓದಿ:

ಮಾರುಕಟ್ಟೆಗೆ ಬಂತು ಮೂಗನ್ನು ಮಾತ್ರ ಮುಚ್ಚುವ ಮಾಸ್ಕ್​: ಜಗತ್ತಿನಾದ್ಯಂತ ವೈರಲ್​ ಆದ ‘ಕೋಸ್ಕ್’​ ಮಾಸ್ಕ್​

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ