AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ; 9 ನಕ್ಸಲರ ಬಂಧನ

ಛತ್ತೀಸ್​ಗಢದ ಬಿಜಾಪುರದಲ್ಲಿ ಬಂಧಿತರಾಗಿರುವ ಐವರು ನಕ್ಸಲೀಯರು ಕಳೆದ ತಿಂಗಳು ಐಇಡಿ ಬಳಸಿ, ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿದ್ದರು. ಆದರೆ, ಆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಸ್ಫೋಟದಿಂದ ಸ್ವಲ್ಪದರಲ್ಲೇ ಪಾರಾಗಿದ್ದರು.

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ; 9 ನಕ್ಸಲರ ಬಂಧನ
ನಕ್ಸಲೀಯರು
ಸುಷ್ಮಾ ಚಕ್ರೆ
|

Updated on: Jun 05, 2024 | 4:06 PM

Share

ನವದೆಹಲಿ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti Naxal Operation) ಭಾರೀ ಯಶಸ್ಸನ್ನು ಸಾಧಿಸಿರುವ ಭದ್ರತಾ ಪಡೆ ಸಿಬ್ಬಂದಿ (Security Forces) ಇಂದು (ಬುಧವಾರ) ಛತ್ತೀಸಗಡದ ಬಿಜಾಪುರ ಜಿಲ್ಲೆಯ 2 ಸ್ಥಳಗಳಿಂದ 9 ನಕ್ಸಲೀಯರನ್ನು ಬಂಧಿಸಿವೆ. ಅವರಲ್ಲಿ ಐವರು ಕಳೆದ ತಿಂಗಳು ಪೊಲೀಸ್ ಕಾರನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟವನ್ನು ಮಾಡಿದ್ದರು. ಅವರೀಗ ಪೊಲೀಸರ ವಶದಲ್ಲಿದ್ದಾರೆ.

ಬಂಧಿಸಲಾಗಿರುವ ಈ ಐವರು ಉಗ್ರರನ್ನು ಗುಡ್ಡು ಕುಮ್ಮಾ (25), ಬುಧು ಕುಮ್ಮಾ (30), ಸುರೇಶ್ ಓಯಮ್ (29), ವಿನೋದ್ ಕೊರ್ಸಾ (25) ಮತ್ತು ಮುನ್ನಾ ಕುಮ್ಮಾ (25) ಎಂದು ಗುರುತಿಸಲಾಗಿದೆ. ಫರ್ಸೆಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡೆಮ್-ಕುಪ್ರೆಲ್ ಗ್ರಾಮಗಳಲ್ಲಿ ಬಂಧಿಸಲಾಗಿದೆ. ಐವರು ಉಗ್ರರ ತಲೆಯ ಮೇಲೆ ತಲಾ 10,000 ರೂ. ಬಹುಮಾನ ಇತ್ತು.

ಇದನ್ನೂ ಓದಿ: ನಕ್ಸಲರಿಂದ ಬೆದರಿಕೆ; ಪದ್ಮಶ್ರೀ ಪ್ರಶಸ್ತಿ ವಾಪಾಸ್ ನೀಡಲು ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ

ಮೇ 15ರಂದು ಫರ್ಸೆಗಢ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಕಾಶ್ ಮಸಿಹ್ ಮತ್ತು ಕಾನ್‌ಸ್ಟೆಬಲ್ ಸಂಜಯ್ ಪೊಲೀಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿತ್ತು. ಇದನ್ನು ಐಇಡಿ ಬಳಸಿ ಮಾಡಲಾಗಿತ್ತು. ಈ ಸ್ಫೋಟದಿಂದ ವಾಹನದ ಬಾನೆಟ್‌ಗೆ ಹಾನಿಯನ್ನುಂಟಾಗಿತ್ತು. ಈ ಸಂದರ್ಭದಲ್ಲಿ ಅವರು ಗಾಯಗಳಿಲ್ಲದೆ ಪಾರಾಗಿದ್ದರು.

ಇದಲ್ಲದೆ, ಇತರ ನಾಲ್ವರು ನಕ್ಸಲೀಯರನ್ನು ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಎಲ್ಲಾ 9 ನಕ್ಸಲೀಯರು ಕೊಲೆ, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಲು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸುವುದು, ಅಕ್ರಮ ಸುಲಿಗೆ, ಮಾವೋವಾದಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕುವ ಘಟನೆಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಮೂವರು ಮಾವೋವಾದಿಗಳ ಎನ್​ಕೌಂಟರ್, 33 ನಕ್ಸಲೀಯರು ಶರಣಾಗತಿ

ಮದ್ದೇಡ್‌ನಿಂದ ಬಂಧಿಸಲ್ಪಟ್ಟ ಇತರ ನಾಲ್ವರಲ್ಲಿ ಒಬ್ಬ ಲಚ್ಚು ಪುಣೆಂ ನಕ್ಸಲೀಯರ ಮದ್ದೇಡ್ ಪ್ರದೇಶ ಸಮಿತಿಯ ಸದಸ್ಯನಾಗಿ ಸಕ್ರಿಯನಾಗಿದ್ದನು. ಅವನ ತಲೆಯ ಮೇಲೆ 5 ಲಕ್ಷ ರೂ. ಬಹುಮಾನವಿತ್ತು. ಪೊಲೀಸರು ಅವನಿಂದ ಸ್ಫೋಟಕ, ಸುರಕ್ಷತಾ ಫ್ಯೂಸ್‌ಗಳು, ಜಿಲೆಟಿನ್ ಕಡ್ಡಿಗಳು, ಮಾವೋವಾದಿಗಳ ಕರಪತ್ರಗಳು ಮತ್ತು ಬ್ಯಾನರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಜೂನ್ 2ರಂದು ಸುಕ್ಮಾದಲ್ಲಿ 8 ನಕ್ಸಲೀಯರು ಸ್ಕ್ಯೂರಿಟಿ ಪಡೆಗಳಿಗೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!