AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಕಾಶ್ಮೀರದಲ್ಲಿ ಜ. 1ರಿಂದ 7 ಪಾಕಿಸ್ತಾನಿ ಉಗ್ರರು ಸೇರಿ 14 ಭಯೋತ್ಪಾದಕರ ಎನ್​ಕೌಂಟರ್

2022ರ ಜನವರಿ 1ರಿಂದ 8 ಕಾರ್ಯಾಚರಣೆಗಳಲ್ಲಿ ಹತ್ಯೆಗೀಡಾದ 14 ಭಯೋತ್ಪಾದಕರ ಪೈಕಿ 7 ಮಂದಿ ಪಾಕಿಸ್ತಾನದವರು" ಎಂದು ಜಮ್ಮು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

Terrorists Encounter: ಕಾಶ್ಮೀರದಲ್ಲಿ ಜ. 1ರಿಂದ 7 ಪಾಕಿಸ್ತಾನಿ ಉಗ್ರರು ಸೇರಿ 14 ಭಯೋತ್ಪಾದಕರ ಎನ್​ಕೌಂಟರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 13, 2022 | 6:06 PM

Share

ಶ್ರೀನಗರ: ಈ ವರ್ಷದ ಜನವರಿ 1ರಿಂದ ಇದುವರೆಗೆ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು 14 ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಅದರಲ್ಲಿ 7 ಉಗ್ರರು ಪಾಕಿಸ್ತಾನದವರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರ ಬಾಬರ್ ಭಾಯಿಯನ್ನು ಎನ್​​ಕೌಂಟರ್​ ಮಾಡಿದ ನಂತರ ಕುಲ್ಗಾಮ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಶ್ಮೀರದ ಐಜಿ, ಭಯೋತ್ಪಾದಕ ಅಡಗಿರುವ ಸ್ಥಳದ ಮಾಲೀಕ ಮತ್ತು ಅವನ ಕುಟುಂಬವು ಉದ್ದೇಶಪೂರ್ವಕವಾಗಿ ಪೊಲೀಸ್ ತಂಡವನ್ನು ದಾರಿ ತಪ್ಪಿಸಿದೆ ಎಂದು ಹೇಳಿದ್ದಾರೆ.

ಉಗ್ರರ ಶೋಧ ಕಾರ್ಯಾಚರಣೆಯ ಹಾದಿ ತಪ್ಪಿಸಿರುವವರ ವಿರುದ್ಧ ಭಯೋತ್ಪಾದನಾ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. “2022ರ ಜನವರಿ 1ರಿಂದ 8 ಕಾರ್ಯಾಚರಣೆಗಳಲ್ಲಿ ಹತ್ಯೆಗೀಡಾದ 14 ಭಯೋತ್ಪಾದಕರ ಪೈಕಿ 7 ಮಂದಿ ಪಾಕಿಸ್ತಾನದವರು” ಎಂದು ಜಮ್ಮು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಸೇನಾ ಸಿಬ್ಬಂದಿ ಮತ್ತು ಪೊಲೀಸರು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ ಭಯೋತ್ಪಾದಕರು ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿದರು. ಇದರ ಪರಿಣಾಮವಾಗಿ ಪ್ರತೀಕಾರದ ಗುಂಡಿನ ದಾಳಿ ನಡೆಸಲಾಯಿತು. ಆದರೂ ಎನ್‌ಕೌಂಟರ್ ಸ್ಥಳದಿಂದ ನಾಗರಿಕರನ್ನು ಸ್ಥಳಾಂತರಿಸುವಾಗ ಒಬ್ಬ ಪೊಲೀಸ್ ಸಿಬ್ಬಂದಿ, ಮೂವರು ಸೇನಾ ಯೋಧರು ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೂ ಪೊಲೀಸ್ ಸಿಬ್ಬಂದಿಯಾದ ರೋಹಿತ್ ಚಿಬ್ ಅವರಿಗೆ ತೀವ್ರ ಗಾಯಗಳಾಗಿದ್ದವರಿಂದ ಸಾವನ್ನಪ್ಪಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಇಬ್ಬರು ನಾಗರಿಕರು ಸೇರಿದಂತೆ ಇತರ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನೊಂದಿಗೆ ನಂಟು ಹೊಂದಿರುವ ಪಾಕಿಸ್ತಾನದ ಪ್ರಮುಖ ಭಯೋತ್ಪಾದಕ ಬಾಬರ್ ಭಾಯ್ ಬುಧವಾರ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಒಂದು ಎಕೆ-47 ರೈಫಲ್, ಒಂದು ಪಿಸ್ತೂಲ್ ಮತ್ತು ಎರಡು ಗ್ರೆನೇಡ್‌ಗಳು ಸೇರಿದಂತೆ ಹಲವು ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: 2019ರ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್​ಕೌಂಟರ್

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

Published On - 6:04 pm, Thu, 13 January 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್