AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ.

Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ
Somnath
TV9 Web
| Edited By: |

Updated on:Oct 24, 2022 | 10:17 AM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಚಂದ್ರಯಾನ-3 ಸಿದ್ಧವಾಗಿದೆ, ಇದು ಚಂದ್ರಯಾನ-2 ಪ್ರತಿರೂಪವಂತೂ ಅಲ್ಲವೇ ಅಲ್ಲ, ಇದರಲ್ಲಿ ಸಾಕಷ್ಟು ಬದಲಾವಣೆಗಳಿವೆ, ಇದರ ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಯಾವುದೇ ಸಮಸ್ಯೆಯಾಗದಂತೆ ನಾವು ಅದನ್ನು ಹೆಚ್ಚು ಸದೃಢಗೊಳಿಸಿದ್ದೇವೆ ಎಂದು ಎಸ್. ಸೋಮನಾಥ್ ಹೇಳಿದ್ದಾರೆ.

2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ.

ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.

ಮುಂದಿನ ವರ್ಷ ಜೂನ್ ನಲ್ಲಿ ಮಾರ್ಕ್ -3 (ಎಲ್ ವಿಎಂ3) ಉಡಾವಣಾ ವಾಹಕದ ಮೂಲಕ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದು ಚಂದ್ರಯಾನ-2 ಪ್ರತಿರೂಪವಲ್ಲ, ರೋವರ್ ಇದೆ. ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಸಮಸ್ಯೆಯಾಗದಂತೆ ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎಂದು ಸೋಮನಾಥ್ ಹೇಳಿದರು. ಚಂದ್ರಯಾನ-2 ರ ಲ್ಯಾಂಡರ್ ಮತ್ತು ರೋವರ್ ಅಪಘಾತಕ್ಕೀಡಾಗಿದ್ದರೂ, ಆರ್ಬಿಟರ್ ಇನ್ನೂ ಚಂದ್ರನ ಮೇಲ್ಮೈ ಮೇಲೆಯೇ ಇದೆ ಮತ್ತು ಇಸ್ರೋ ಇದನ್ನು ಚಂದ್ರಯಾನ -3 ರೊಂದಿಗೆ ಬಳಸಲು ಯೋಜಿಸಿದೆ.

ಪ್ರಯಾಣಿಸಬೇಕಾದ ಎತ್ತರವನ್ನು ಲೆಕ್ಕಾಚಾರ ಮಾಡಲು, ಅಪಾಯ-ಮುಕ್ತ ಸ್ಥಳಗಳನ್ನು ಗುರುತಿಸಲು ಮತ್ತು ಉತ್ತಮ ಸಾಫ್ಟ್‌ವೇರ್ ಹೊಂದಲು ರೋವರ್ ಕೂ ವಿಭಿನ್ನ ವಿಧಾನಗಳನ್ನು ಹೊಂದಿರುತ್ತದೆ ಎಂದು ಇಸ್ರೋ ಮುಖ್ಯಸ್ಥರು ತಿಳಿಸಿದರು.

ಅನೇಕ ಬದಲಾವಣೆ ನಡೆದಿದೆ, ಇಂಪೆಕ್ಟ್ ಲೆಗ್​ಗಳು ಬಲವಾಗಿರುತ್ತವೆ. ಇದು ಉತ್ತಮವಾದ ಉಪಕರಣವನ್ನು ಹೊಂದಿರುತ್ತದೆ. ಏನಾದರೂ ವಿಫಲವಾದಲ್ಲಿ, ಬೇರೆ ಯಾವುದನ್ನಾದರೂ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 am, Mon, 24 October 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್