Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ.

Chandrayaan-3: 2023ರ ಜೂನ್​ನಲ್ಲಿ ಚಂದ್ರಯಾನ-3 ಉಡಾವಣೆ: ಇಸ್ರೋ
Somnath
Follow us
| Updated By: ನಯನಾ ರಾಜೀವ್

Updated on:Oct 24, 2022 | 10:17 AM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಚಂದ್ರಯಾನ-3 ಸಿದ್ಧವಾಗಿದೆ, ಇದು ಚಂದ್ರಯಾನ-2 ಪ್ರತಿರೂಪವಂತೂ ಅಲ್ಲವೇ ಅಲ್ಲ, ಇದರಲ್ಲಿ ಸಾಕಷ್ಟು ಬದಲಾವಣೆಗಳಿವೆ, ಇದರ ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಯಾವುದೇ ಸಮಸ್ಯೆಯಾಗದಂತೆ ನಾವು ಅದನ್ನು ಹೆಚ್ಚು ಸದೃಢಗೊಳಿಸಿದ್ದೇವೆ ಎಂದು ಎಸ್. ಸೋಮನಾಥ್ ಹೇಳಿದ್ದಾರೆ.

2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ.

ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.

ಮುಂದಿನ ವರ್ಷ ಜೂನ್ ನಲ್ಲಿ ಮಾರ್ಕ್ -3 (ಎಲ್ ವಿಎಂ3) ಉಡಾವಣಾ ವಾಹಕದ ಮೂಲಕ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದು ಚಂದ್ರಯಾನ-2 ಪ್ರತಿರೂಪವಲ್ಲ, ರೋವರ್ ಇದೆ. ಎಂಜಿನಿಯರಿಂಗ್ ಗಮನಾರ್ಹವಾಗಿ ವಿಭಿನ್ನವಾಗಿದೆ. ಕಳೆದ ಬಾರಿಯಂತೆ ಸಮಸ್ಯೆಯಾಗದಂತೆ ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎಂದು ಸೋಮನಾಥ್ ಹೇಳಿದರು. ಚಂದ್ರಯಾನ-2 ರ ಲ್ಯಾಂಡರ್ ಮತ್ತು ರೋವರ್ ಅಪಘಾತಕ್ಕೀಡಾಗಿದ್ದರೂ, ಆರ್ಬಿಟರ್ ಇನ್ನೂ ಚಂದ್ರನ ಮೇಲ್ಮೈ ಮೇಲೆಯೇ ಇದೆ ಮತ್ತು ಇಸ್ರೋ ಇದನ್ನು ಚಂದ್ರಯಾನ -3 ರೊಂದಿಗೆ ಬಳಸಲು ಯೋಜಿಸಿದೆ.

ಪ್ರಯಾಣಿಸಬೇಕಾದ ಎತ್ತರವನ್ನು ಲೆಕ್ಕಾಚಾರ ಮಾಡಲು, ಅಪಾಯ-ಮುಕ್ತ ಸ್ಥಳಗಳನ್ನು ಗುರುತಿಸಲು ಮತ್ತು ಉತ್ತಮ ಸಾಫ್ಟ್‌ವೇರ್ ಹೊಂದಲು ರೋವರ್ ಕೂ ವಿಭಿನ್ನ ವಿಧಾನಗಳನ್ನು ಹೊಂದಿರುತ್ತದೆ ಎಂದು ಇಸ್ರೋ ಮುಖ್ಯಸ್ಥರು ತಿಳಿಸಿದರು.

ಅನೇಕ ಬದಲಾವಣೆ ನಡೆದಿದೆ, ಇಂಪೆಕ್ಟ್ ಲೆಗ್​ಗಳು ಬಲವಾಗಿರುತ್ತವೆ. ಇದು ಉತ್ತಮವಾದ ಉಪಕರಣವನ್ನು ಹೊಂದಿರುತ್ತದೆ. ಏನಾದರೂ ವಿಫಲವಾದಲ್ಲಿ, ಬೇರೆ ಯಾವುದನ್ನಾದರೂ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 am, Mon, 24 October 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?