AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿ ನಾಪತ್ತೆ; 1,200 ಡಾಲರ್ ಹಣ ನೀಡುವಂತೆ ಅಪಹರಣಕಾರರಿಂದ ಪೋಷಕರಿಗೆ ಫೋನ್ ಕರೆ

ಅಬ್ದುಲ್‌ನ ತಂದೆ ಮೊಹಮ್ಮದ್ ಸಲೀಮ್‌ಗೆ ಕಳೆದ ವಾರ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ತನ್ನ ಮಗನನ್ನು ಕ್ಲೀವ್‌ಲ್ಯಾಂಡ್‌ನಲ್ಲಿ ಡ್ರಗ್ ಮಾರಾಟಗಾರರು ಅಪಹರಿಸಿದ್ದಾರೆ ಎಂದು ತಿಳಿಸಿದ್ದರು.  ಅಪರಿಚಿತ ಕರೆ ಮಾಡಿದವರು ಅವನನ್ನು ಬಿಡುಗಡೆ ಮಾಡಲು $1200 ಬೇಡಿಕೆಯಿಟ್ಟರು. ಆದರೆ ಪಾವತಿಯ ವಿಧಾನವನ್ನು ನಿರ್ದಿಷ್ಟಪಡಿಸಲಿಲ್ಲ ಎಂದು ಹೇಳಿದ್ದಾರೆ.

ಅಮೆರಿಕದಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿ ನಾಪತ್ತೆ; 1,200 ಡಾಲರ್ ಹಣ ನೀಡುವಂತೆ ಅಪಹರಣಕಾರರಿಂದ ಪೋಷಕರಿಗೆ ಫೋನ್ ಕರೆ
ಅಬ್ದುಲ್ ಮೊಹಮ್ಮದ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 20, 2024 | 3:54 PM

Share

ಹೈದರಾಬಾದ್ ಮಾರ್ಚ್ 20 : ಹೈದರಾಬಾದ್ (Hyderabad) ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ (US) ನಾಪತ್ತೆಯಾಗಿದ್ದು, 1200 ಡಾಲರ್ ಹಣ ನೀಡುವಂತೆ ವಿದ್ಯಾರ್ಥಿಯ ಪೋಷಕರಿಗೆ ಫೋನ್ ಕರೆ (ransom call)ಬಂದಿದೆ. ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಮಗನನ್ನು ಅಪಹರಿಸಿ ಕಿಡ್ನಿ ಮಾರಾಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. ಹೈದರಾಬಾದ್‌ನ 25 ವರ್ಷದ ಅಬ್ದುಲ್ ಮೊಹಮ್ಮದ್ ಅರ್ಫಾತ್‌, ಒಹಾಯೋದ ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಕಳೆದ ಮೇ ತಿಂಗಳಲ್ಲಿ ಅಮೆರಿಕಕ್ಕೆ ಹೋಗಿದ್ದರು. ಮಾರ್ಚ್ 7 ರಿಂದ ಅವರು ತಮ್ಮೊಂದಿಗೆ ಮಾತನಾಡಿಲ್ಲ ಎಂದು ಅವರ ಕುಟುಂಬ ಹೇಳಿದೆ.

ಅಬ್ದುಲ್‌ನ ತಂದೆ ಮೊಹಮ್ಮದ್ ಸಲೀಮ್‌ಗೆ ಕಳೆದ ವಾರ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ತನ್ನ ಮಗನನ್ನು ಕ್ಲೀವ್‌ಲ್ಯಾಂಡ್‌ನಲ್ಲಿ ಡ್ರಗ್ ಮಾರಾಟಗಾರರು ಅಪಹರಿಸಿದ್ದಾರೆ ಎಂದು ತಿಳಿಸಿದ್ದರು.  ಅಪರಿಚಿತ ಕರೆ ಮಾಡಿದವರು ಅವನನ್ನು ಬಿಡುಗಡೆ ಮಾಡಲು $1200 ಬೇಡಿಕೆಯಿಟ್ಟರು. ಆದರೆ ಪಾವತಿಯ ವಿಧಾನವನ್ನು ನಿರ್ದಿಷ್ಟಪಡಿಸಲಿಲ್ಲ. ಹಣ ಕೊಡಲು ನಿರಾಕರಿಸಿದರೆ ವಿದ್ಯಾರ್ಥಿಯ ಕಿಡ್ನಿಯನ್ನು ಮಾಫಿಯಾಗೆ ಮಾರಾಟ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿಯ ಕುಟುಂಬದವರು ತಿಳಿಸಿದ್ದಾರೆ.

ತೆಲಂಗಾಣ ಮೂಲದ ಮಜ್ಲಿಸ್ ಬಚಾವೋ ತಹ್ರೀಕ್ ವಕ್ತಾರರು ಅರ್ಫಾತ್‌ನ ವಿಷಯವನ್ನು ಬೆಳಕಿಗೆ ತಂದಿದ್ದು, ಅವರು ಕಾಣೆಯಾದ ವಿದ್ಯಾರ್ಥಿಯ ಪಾಸ್‌ಪೋರ್ಟ್‌ನ ಪ್ರತಿಗಳನ್ನು ಮತ್ತು ಅವರ ಕುಟುಂಬವು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಅವರ ಕೊನೆಯ ಸ್ಥಳವೆಂದರೆ ನಗರದಲ್ಲಿ ವಾಲ್‌ಮಾರ್ಟ್ ಅಂಗಡಿಯಾಗಿದ್ದು, ಅಲ್ಲಿ ಅವರು ಕಾಣೆಯಾದರು ಎಂದು ಹೇಳಲಾಗಿದೆ.

ಇದಾದ ನಂತರ ಅಬ್ದುಲ್ ಮೊಹಮ್ಮದ್ ಪೋಷಕರು ಯುಎಸ್‌ನಲ್ಲಿರುವ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು ಅವರು ಕ್ಲೀವ್‌ಲ್ಯಾಂಡ್ ಪೊಲೀಸರಿಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಮೊಹಮ್ಮದ್ ಬಿಳಿ ಟಿ-ಶರ್ಟ್, ಕೆಂಪು ಜಾಕೆಟ್ ಮತ್ತು ನೀಲಿ ಜೀನ್ಸ್ ಧರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.  ಆತನ ಪತ್ತೆಗೆ ಕುಟುಂಬಸ್ಥರು ಚಿಕಾಗೋದಲ್ಲಿರುವ ಇಂಡಿಯನ್ ಕೌನ್ಸಿಲ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೈತಪ್ಪಿದರೆ ವರುಣ್​ ಗಾಂಧಿ ಸ್ವತಂತ್ರ ಸ್ಪರ್ಧೆ ಸಾಧ್ಯತೆ

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯು ಶವವಾಗಿ ಪತ್ತೆಯಾದ ಒಂದು ವಾರದ ನಂತರ ಅಪಹರಣ ವರದಿಯಾಗಿದೆ. ಇದು ಮೂರು ತಿಂಗಳೊಳಗೆ ಒಂಬತ್ತನೇ ಘಟನೆಯಾಗಿದೆ. ಬೋಸ್ಟನ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಅಭಿಜಿತ್ ಪರುಚೂರು (20) ಮೃತದೇಹ ಕಾಡಿನಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಆದರೆ ಪ್ರಾಥಮಿಕ ತನಿಖೆಯು ಅನುಮಾನಾಸ್ಪದವಾದುದನ್ನು ತಳ್ಳಿಹಾಕಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!