AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಲು ವಿದೇಶಾಂಗ ಇಲಾಖೆ ಸೂಚನೆ

ವಿದ್ಯಾರ್ಥಿಗಳು ಇಲಾಖೆಗೆ ಮಾಹಿತಿ ನೀಡಲು ವಿಧಾನವನ್ನು ಕೂಡ ವಿದೇಶಾಂಗ ಇಲಾಖೆ ಹೇಳಿದೆ. us.oia2@mea.gov.in ಇ ಮೇಲ್​ಗೆ ಮೇಲ್ ಮಾಡಲು ವಿದೇಶಾಂಗ ಇಲಾಖೆ ತಿಳಿಸಿದೆ.

ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಲು ವಿದೇಶಾಂಗ ಇಲಾಖೆ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 05, 2021 | 5:12 PM

Share

ದೆಹಲಿ: ವಿದೇಶಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ ನೀಡಿ ಎಂದು ಭಾರತೀಯ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ. ಕೊರೊನಾದಿಂದ ವಿದೇಶಗಳಿಗೆ ಹೋಗಲಾಗದೇ ಇರುವ ಭಾರತೀಯ ವಿದ್ಯಾರ್ಥಿಗಳು ಮಾಹಿತಿ‌ ನೀಡಬೇಕು. ವಿದೇಶಾಂಗ ಇಲಾಖೆಗೆ ಇ‌ ಮೇಲ್ ಮೂಲಕ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಇಲಾಖೆಗೆ ಮಾಹಿತಿ ನೀಡಲು ವಿಧಾನವನ್ನು ಕೂಡ ವಿದೇಶಾಂಗ ಇಲಾಖೆ ಹೇಳಿದೆ. us.oia2@mea.gov.in ಇ ಮೇಲ್​ಗೆ ಮೇಲ್ ಮಾಡಲು ವಿದೇಶಾಂಗ ಇಲಾಖೆ ತಿಳಿಸಿದೆ.

ಆದ್ಯತಾ ಗುಂಪಿನ ಕೋಟಾದಲ್ಲಿ ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಮಂಗಳವಾರದಿಂಲೇ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೊವಿಡ್ ಕಾರ್ಯಪಡೆ ಅಧ್ಯಕ್ಷರಾದ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ್ ನಾರಾಯಣ ಈ ಮೊದಲು ತಿಳಿಸಿದ್ದರು.

ಬೆಂಗಳೂರಿನಲ್ಲಿ ಮೇ 31ರಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದ್ದರು.

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು ಎಂದು ತಿಳಿಸಿದ್ದರು.

ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೆ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದರು.

ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹೇಳಿದ್ದರು.

ಇದನ್ನೂ ಓದಿ: ಲಸಿಕೆ ಪ್ರವಾಸೋದ್ಯಮ: ವಿದೇಶಿಯರಿಗೆ ರಷ್ಯಾಕ್ಕೆ ಆಗಮಿಸಿ ಲಸಿಕೆ ಪಡೆಯಲು ಅವಕಾಶ ನೀಡಿದ ಅಧ್ಯಕ್ಷ ಪುಟಿನ್

ವಿದೇಶಿ ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್​ಗಳಿಂದ ರಕ್ಷಣೆಗೆ ಒಪ್ಪಿಗೆ; ಜುಲೈ ವೇಳೆಗೆ ಭಾರತಕ್ಕೆ ಫೈಜರ್ ಲಸಿಕೆ ಸಾಧ್ಯತೆ

Published On - 5:11 pm, Sat, 5 June 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ