AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ
ಅಮೆರಿಕ-ಭಾರತ ಬಾವುಟ
TV9 Web
| Edited By: |

Updated on:Apr 06, 2022 | 11:01 PM

Share

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಸೋಮವಾರ ಭವ್ಯವಾಗಿ ಹಾರಿಸಲಾಯಿತು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎರಡು ವರ್ಷಗಳ ಅವಧಿಯ ಸದಸ್ಯ ರಾಷ್ಟ್ರವಾಗಿ ಭಾರತವು ಆಯಕಟ್ಟಿನ ಸ್ಥಾನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆಯ ಅಂಗವಾದ ಭದ್ರತಾ ಮಂಡಳಿಯಲ್ಲಿ ಭಾರತ ಸ್ಥಾನ ಪಡೆದಿದೆ.

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ. ಪ್ರತೀ ಸದಸ್ಯ ರಾಷ್ಟ್ರವು ಒಂದು ತಿಂಗಳ ಅವಧಿಗೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ. ಇಂಗ್ಲಿಷ್ ವರ್ಣಮಾಲೆಯ ಅನುಸಾರ ಅಧ್ಯಕ್ಷ ಸ್ಥಾನ ಸಿಗಲಿದೆ. ಅದರಂತೆ, ಭಾರತಕ್ಕೆ ಈ ವರ್ಷದ ಆಗಸ್ಟ್​ನಲ್ಲಿ ಅಧ್ಯಕ್ಷ ಸ್ಥಾನ ಲಭಿಸಲಿದೆ.

ವಿಶ್ವ ಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ರಾಯಭಾರಿ ಟಿ.ಎಸ್. ತಿರುಮೂರ್ತಿ ಭಾರತದ ಧ್ವಜವನ್ನು ಭದ್ರತಾ ಮಂಡಳಿಯಲ್ಲಿ ಅಳವಡಿಸಿ, ಪ್ರಾತಿನಿಧಿಕ ಮಾತುಗಳನ್ನಾಡಿದರು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವವು ಭಾರತಕ್ಕೆ ಎಂಟನೇ ಬಾರಿಗೆ ಲಭ್ಯವಾಗುತ್ತಿದೆ. ಇಂಥಾ ಸಂತಸದ ಸಂದರ್ಭದಲ್ಲಿ ಭಾರತೀಯ ರಾಯಭಾರಿಯಾಗಿ ನಾನು ಈ ಸ್ಥಾನದಲ್ಲಿ ಇರುವುದು ಗೌರವಪೂರ್ಣ ವಿಷಯವಾಗಿದೆ ಎಂದು ಟಿ.ಎಸ್. ತಿರುಮೂರ್ತಿ ಹೆಮ್ಮೆಯಿಂದ ತಿಳಿಸಿದರು.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

Published On - 11:24 am, Tue, 5 January 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ