AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಾರಾಜಿಸಿತು ಭಾರತೀಯ ತ್ರಿವರ್ಣ ಧ್ವಜ
ಅಮೆರಿಕ-ಭಾರತ ಬಾವುಟ
TV9 Web
| Updated By: ganapathi bhat|

Updated on:Apr 06, 2022 | 11:01 PM

Share

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಸೋಮವಾರ ಭವ್ಯವಾಗಿ ಹಾರಿಸಲಾಯಿತು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎರಡು ವರ್ಷಗಳ ಅವಧಿಯ ಸದಸ್ಯ ರಾಷ್ಟ್ರವಾಗಿ ಭಾರತವು ಆಯಕಟ್ಟಿನ ಸ್ಥಾನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಸಂಸ್ಥೆಯ ಅಂಗವಾದ ಭದ್ರತಾ ಮಂಡಳಿಯಲ್ಲಿ ಭಾರತ ಸ್ಥಾನ ಪಡೆದಿದೆ.

ಭಾರತವು, 2021 ಆಗಸ್ಟ್​ನಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಲಿದೆ. ಹಾಗೂ 2022ರ ಸಭೆಯಲ್ಲೂ ಭಾಗವಹಿಸಲಿದೆ. ಪ್ರತೀ ಸದಸ್ಯ ರಾಷ್ಟ್ರವು ಒಂದು ತಿಂಗಳ ಅವಧಿಗೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ. ಇಂಗ್ಲಿಷ್ ವರ್ಣಮಾಲೆಯ ಅನುಸಾರ ಅಧ್ಯಕ್ಷ ಸ್ಥಾನ ಸಿಗಲಿದೆ. ಅದರಂತೆ, ಭಾರತಕ್ಕೆ ಈ ವರ್ಷದ ಆಗಸ್ಟ್​ನಲ್ಲಿ ಅಧ್ಯಕ್ಷ ಸ್ಥಾನ ಲಭಿಸಲಿದೆ.

ವಿಶ್ವ ಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ರಾಯಭಾರಿ ಟಿ.ಎಸ್. ತಿರುಮೂರ್ತಿ ಭಾರತದ ಧ್ವಜವನ್ನು ಭದ್ರತಾ ಮಂಡಳಿಯಲ್ಲಿ ಅಳವಡಿಸಿ, ಪ್ರಾತಿನಿಧಿಕ ಮಾತುಗಳನ್ನಾಡಿದರು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವವು ಭಾರತಕ್ಕೆ ಎಂಟನೇ ಬಾರಿಗೆ ಲಭ್ಯವಾಗುತ್ತಿದೆ. ಇಂಥಾ ಸಂತಸದ ಸಂದರ್ಭದಲ್ಲಿ ಭಾರತೀಯ ರಾಯಭಾರಿಯಾಗಿ ನಾನು ಈ ಸ್ಥಾನದಲ್ಲಿ ಇರುವುದು ಗೌರವಪೂರ್ಣ ವಿಷಯವಾಗಿದೆ ಎಂದು ಟಿ.ಎಸ್. ತಿರುಮೂರ್ತಿ ಹೆಮ್ಮೆಯಿಂದ ತಿಳಿಸಿದರು.

ಭಾರತ ಮೂಲದ ಶ್ರವಣ್​ ಅಯ್ಯರ್​ ಕ್ಲಿಕ್ಕಿಸಿದ ಫೋಟೊಗೆ ವಿಶ್ವಸಂಸ್ಥೆಯ WMO 2021 ಪ್ರಶಸ್ತಿ

Published On - 11:24 am, Tue, 5 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ