AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುಂದೆಬಿಟ್ಟು, ಗಡಿ ಕ್ಯಾತೆ: ಗಡಿಯಲ್ಲಿ ಚೀನಿ ಸೈನಿಕರ ಜಮಾವಣೆ!

ದೆಹಲಿ: ಕೊರೊನಾ ಮಹಾಮಾರಿ ಒಂದೆಡೆ ವಿಶ್ವವನ್ನು, ಭಾರತವನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಇದರ ನಡುವೆ ಕೊರೊನಾ ವೈರಸ್ ಅನ್ನ ವಿಶ್ವಕ್ಕೆ ಕೊಡುಗೆಯಾಗಿ ನೀಡಿದ ಕುಖ್ಯಾತಿಗೆ ಗುರಿಯಾಗಿರೋ ಚೀನಾ, ಭಾರತದ ಜೊತೆ ಗಡಿ ಕ್ಯಾತೆ ತೆಗೆದಿದೆ. ಅನವಶ್ಯಕವಾಗಿ ಭಾರತ-ಚೀನಾ ಗಡಿಯಲ್ಲಿ ಚೀನಿ ಸೈನಿಕರು ಘರ್ಷಣೆಗೆ ಇಳಿಯುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ಡೋಕ್ಲಾಂ.. ಈ ಹೆಸರು ಕೇಳಿದ್ರೆ ಸಾಕು ಭಾರತೀಯರಿಗೆ 2017ರಲ್ಲಿ ಭಾರತ-ಚೀನಾ ಗಡಿಯಲ್ಲಿ ನೆಲೆಸಿದ್ದ ಉದ್ವಿಗ್ನತೆ ನೆನಪಿಗೆ ಬರುತ್ತೆ. ಯಾಕಂದ್ರೆ, ಅಂದು ಡೋಕ್ಲಾಂನಲ್ಲಿ ಎರಡೂ ರಾಷ್ಟ್ರಗಳ ಸೇನೆಗಳು […]

ಕೊರೊನಾ ಮುಂದೆಬಿಟ್ಟು, ಗಡಿ ಕ್ಯಾತೆ: ಗಡಿಯಲ್ಲಿ ಚೀನಿ ಸೈನಿಕರ ಜಮಾವಣೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:May 26, 2020 | 11:21 AM

Share

ದೆಹಲಿ: ಕೊರೊನಾ ಮಹಾಮಾರಿ ಒಂದೆಡೆ ವಿಶ್ವವನ್ನು, ಭಾರತವನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಇದರ ನಡುವೆ ಕೊರೊನಾ ವೈರಸ್ ಅನ್ನ ವಿಶ್ವಕ್ಕೆ ಕೊಡುಗೆಯಾಗಿ ನೀಡಿದ ಕುಖ್ಯಾತಿಗೆ ಗುರಿಯಾಗಿರೋ ಚೀನಾ, ಭಾರತದ ಜೊತೆ ಗಡಿ ಕ್ಯಾತೆ ತೆಗೆದಿದೆ. ಅನವಶ್ಯಕವಾಗಿ ಭಾರತ-ಚೀನಾ ಗಡಿಯಲ್ಲಿ ಚೀನಿ ಸೈನಿಕರು ಘರ್ಷಣೆಗೆ ಇಳಿಯುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.

ಡೋಕ್ಲಾಂ.. ಈ ಹೆಸರು ಕೇಳಿದ್ರೆ ಸಾಕು ಭಾರತೀಯರಿಗೆ 2017ರಲ್ಲಿ ಭಾರತ-ಚೀನಾ ಗಡಿಯಲ್ಲಿ ನೆಲೆಸಿದ್ದ ಉದ್ವಿಗ್ನತೆ ನೆನಪಿಗೆ ಬರುತ್ತೆ. ಯಾಕಂದ್ರೆ, ಅಂದು ಡೋಕ್ಲಾಂನಲ್ಲಿ ಎರಡೂ ರಾಷ್ಟ್ರಗಳ ಸೇನೆಗಳು ಬಡಿದಾಡಿಕೊಂಡೇ ಬಿಟ್ವು ಅನ್ನೋ ಮಟ್ಟಿಗೆ ವಿವಾದ ಭುಗಿಲೆದ್ದಿತ್ತು. ಬರೋಬ್ಬರಿ 2 ತಿಂಗಳು.. 1 ವಾರ.. 5 ದಿನಗಳ ಕಾಲ ನೆಲೆಸಿದ್ದ ಉದ್ವಿಗ್ನತೆ ಶಮನಕ್ಕೆ ಎರಡು ರಾಷ್ಟ್ರಗಳು ಒಪ್ಪಿಗೆ ಸೂಚಿಸಿದ್ವು. ಇದಾದ ಬಳಿಕ ಸುಮ್ಮನಿದ್ದ ನೆರೆಯ ದೇಶ ಚೀನಾ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ನಡುವೆ ಮತ್ತೆ ತನ್ನ ಕ್ಯಾತೆ ಶುರು ಮಾಡಿದೆ. ಈ ಮೂಲಕ ಗಡಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಎರಡೂ ದೇಶಗಳ ಸೈನಿಕರು ಗಡಿಯಲ್ಲಿ ಜಮಾವಣೆ ಆಗ್ತಿದ್ದಾರೆ.

ಲಡಾಖ್​ನಿಂದ ಅರುಣಾಚಲದವರೆಗೆ ಸೈನಿಕರ ನಿಯೋಜನೆ! ಭಾರತ-ಚೀನಾ ಗಡಿಯುದ್ದಕ್ಕೂ ಎರಡೂ ದೇಶಗಳ ಸೈನಿಕರ ಜಮಾವಣೆ ಹೆಚ್ಚಾಗುತ್ತಿದೆ. ಅದ್ರಲ್ಲೂ ಗಾಲ್ವನ್ ಕಣಿವೆ, ಪಾಂಗಾಂಗ್ ಸರೋವರ, ದೌಲತ್ ಬೇಗ್ ಓಲ್ಡಿ ಸೇರಿ ಹಲವೆಡೆ ಚೀನಾ ಸೈನಿಕರು ಭಾರತದ ಸೇನೆಯ ಜೊತೆಗೆ ಘರ್ಷಣೆಗೆ ಇಳಿಯುತ್ತಿದ್ದಾರೆ.

ಮೇ 5ರಂದು ಇದ್ದಕ್ಕಿದ್ದಂತೆ ಭಾರತೀಯ ಸೈನಿಕರು ಕಾವಲು ಕಾಯುತ್ತಿದ್ದ ವೇಳೆ ಚೀನಿ ಸೈನಿಕರು ಇದ್ದಕ್ಕಿದ್ದಂತೆ ದಾಳಿ ಮಾಡಿದ್ದಾರೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರೋ ಭಾರತೀಯ ಸೈನಿಕರು ಚೀನಿಯರನ್ನ ಹಿಮ್ಮೆಟ್ಟಿಸಿದ್ದಾರೆ. ಇದು ಕೇವಲ ಮುಷ್ಟಿಯುದ್ಧ ಮತ್ತು ಕಲ್ಲು ತೂರಾಟಕ್ಕೆ ಮಾತ್ರ ಸೀಮಿತವಾಗಿದ್ದು, ಯಾವುದೇ ರೀತಿಯ ಗುಂಡಿನ ಚಕಮಕಿ ಆಗಿಲ್ಲ ಅಂತಾ ಸೇನೆ ಸ್ಪಷ್ಟಪಡಿಸಿದೆ. ಈ ದಾಳಿಯಲ್ಲಿ ಎರಡೂ ಕಡೆಯ ಸೈನಿಕರಲ್ಲಿ ಕೆಲವರಿಗೆ ಗಾಯಗಳಾಗಿವೆ ಅಂತಾ ಗೊತ್ತಾಗಿದೆ.

ಭಾರತದ ಜೊತೆ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರೋದ್ರ ನಡುವೆಯೇ ಚೀನಾ, ಭಾರತದಲ್ಲಿರುವ ತನ್ನ ನಾಗರಿಕರು ವಾಪಸ್ ಬರುವಂತೆ ಸೂಚನೆ ನೀಡಿದೆ. ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ವಾಣಿಜ್ಯೋದ್ಯಮಿಗಳು, ರಾಯಭಾರ ಕಚೇರಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಚೀನಾ ಸೂಚನೆ ನೀಡಿದೆ. ಇದರ ನಡುವೆ ಭಾರತ-ಚೀನಾ ಗಡಿಯಲ್ಲಿ ಚೀನಾ ಮಾನವ ರಹಿತ ಹೆಲಿಕಾಪ್ಟರ್​ ಕಾವಲು ಕಾಯುತ್ತಿದೆ. ಇದೆಲ್ಲವನ್ನ ಗಮನಿಸ್ತಿದ್ರೆ, ಡೋಕ್ಲಾಂ ಬಳಿಕ ತಣ್ಣಗಾಗಿದ್ದ ಗಡಿ ವಿವಾದ ಮತ್ತೆ ಭುಗಿಲೇಳುವ ಸಾಧ್ಯತೆ ದಟ್ಟವಾಗುತ್ತಿದೆ. ಇದು ಇಷ್ಟಕ್ಕೇ ನಿಲ್ಲುತ್ತಾ ಅಥವಾ ಇನ್ನೂ ಹೆಚ್ಚಾಗುತ್ತಾ ಅನ್ನೋದಕ್ಕೆ ಕಾಲವೇ ಉತ್ತರ ನೀಡಲಿದೆ.

Published On - 8:31 am, Tue, 26 May 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು