AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ನಮ್ಮ ಎದೆ ಮೇಲೆ ರೈಫಲ್ ಇಟ್ಟು ಲೂಟಿ ಮಾಡಿದರು; ಸುಡಾನ್​​ ಸಂಘರ್ಷದ ಹೊತ್ತಲ್ಲಿ ಬದುಕಿನ ಕತೆ ಹೇಳಿದ ಭಾರತೀಯರು

Sudan Crisis: ರಾಜಧಾನಿ ಖಾರ್ಟೊಮ್​​ನಲ್ಲಿ ಸುಡಾನ್ ಸೇನೆ ಮತ್ತು ಅರೆಸೇನಾ ಗುಂಪುಗಳ ನಡುವಿನ ಕಾಳಗ ತೀವ್ರಗೊಂಡಿದ್ದು, ಕದನ ಪೀಡಿತ ಸುಡಾನ್‌ನಿಂದ  ಭಾರತ 'ಆಪರೇಷನ್ ಕಾವೇರಿ' ಅಡಿಯಲ್ಲಿ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯ ಮಾಡುತ್ತಿದೆ

ಅವರು ನಮ್ಮ ಎದೆ ಮೇಲೆ ರೈಫಲ್ ಇಟ್ಟು ಲೂಟಿ ಮಾಡಿದರು; ಸುಡಾನ್​​ ಸಂಘರ್ಷದ ಹೊತ್ತಲ್ಲಿ ಬದುಕಿನ ಕತೆ ಹೇಳಿದ ಭಾರತೀಯರು
ಆಪರೇಷನ್ ಕಾವೇರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 26, 2023 | 8:15 PM

Share

ಮುಖ್ಯಾಂಶಗಳು

  • ಅದು ಎಷ್ಟು ತೀವ್ರವಾಗಿದೆಯೆಂದರೆ ಅವರು ಆಹಾರಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ಬಂದಿತ್ತು
  • 2 ಗಂಟೆಗಳ ಕದನ ವಿರಾಮದ ನಡುವೆಯೂ ಹಿಂಸಾಚಾರ ನಡೆದಿರುವುದಾಗಿ ವರದಿಯಾಗಿದೆ
  • ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಕಾಳಗದಿಂದಾಗಿ ಸುಡಾನ್ ಹಿಂಸಾಚಾರ ಎದುರಿಸುತ್ತಿದೆ.

ದೆಹಲಿ: ಸುಡಾನ್‌ನಲ್ಲಿ 72 ಗಂಟೆಗಳ ಕದನ ವಿರಾಮದ (ceasefire) ನಡುವೆ, ದೇಶಗಳು ತಮ್ಮ ನಾಗರಿಕರನ್ನು ಸ್ಥಳಾಂತರಿಸುತ್ತಿದ್ದು ಭಾರತ, ಆಪರೇಷನ್ ಕಾವೇರಿ (Operation Kaveri) ಅಡಿಯಲ್ಲಿ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ರಕ್ಷಣಾ ಪ್ರಯತ್ನದ ಭಾಗವಾಗಿ ಸಂಘರ್ಷ ಪೀಡಿತ ಸುಡಾನ್‌ನಿಂದ (Sudan) ಸಿಕ್ಕಿಬಿದ್ದ ಸುಮಾರು 250 ಭಾರತೀಯರ ಮತ್ತೊಂದು ಬ್ಯಾಚ್ ಅನ್ನು ವಾಯುಪಡೆ ಕರೆತಂದಿದೆ. ಎರಡು IAF C-130 J ವಿಮಾನಗಳ ಮೂಲಕ 250 ಕ್ಕೂ ಹೆಚ್ಚು ಜನರನ್ನು ಪೋರ್ಟ್ ಸುಡಾನ್‌ನಿಂದ ಸ್ಥಳಾಂತರಿಸಲಾಯಿತು. ಇದಕ್ಕೂ ಮುನ್ನ ಬುಧವಾರ ಸುಡಾನ್‌ನಿಂದ 135 ಮಂದಿ ಭಾರತೀಯರನ್ನು ರಕ್ಷಿಸಲಾಗಿತ್ತು. ಹಿಂಸಾಚಾರ ಪೀಡಿತ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರು ತಮ್ಮ ಬದುಕಿನ ಹೋರಾಟದ ಬಗ್ಗೆ ಮಾತನಾಡಿದ್ದಾರೆ. ಅದು ಎಷ್ಟು ತೀವ್ರವಾಗಿದೆಯೆಂದರೆ ಅವರು ಆಹಾರಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ಬಂದಿತ್ತು. ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರಲ್ಲಿ ಒಬ್ಬರು ನಮ್ಮ ಹೋರಾಟವು ತೀವ್ರವಾಗಿತ್ತು. ನಾವು ಆಹಾರಕ್ಕಾಗಿ ಹೆಣಗಾಡಿದ್ದೇವೆ. ಇದೇ ರೀತಿ 2-3 ದಿನಗಳವರೆಗೆ ಮುಂದುವರೆಯಿತು ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಕಾಳಗದಿಂದಾಗಿ ಸುಡಾನ್ ಹಿಂಸಾಚಾರ ಎದುರಿಸುತ್ತಿದೆ. 72 ಗಂಟೆಗಳ ಕದನ ವಿರಾಮದ ನಡುವೆಯೂ ಹಿಂಸಾಚಾರ ನಡೆದಿರುವುದಾಗಿ ವರದಿಯಾಗಿದೆ

ಸುಡಾನ್‌ನ ಸೇನಾ ಮುಖ್ಯಸ್ಥ ಅಬ್ದೆಲ್ ಫತ್ತಾಹ್ ಅಲ್-ಬುರ್ಹಾನ್ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ಕಮಾಂಡ್ ಆಗಿರುವ ಆತನ ಉಪನಾಯಕ ಮೊಹಮದ್ ಹಮ್ದಾನ್ ಡಗಾಲೊ ಅವರಿಗೆ ನಿಷ್ಠರಾಗಿರುವ ಪಡೆಗಳ ನಡುವೆ ಹೋರಾಟ ನಡೆಯುತ್ತಿದೆ.

ನಮ್ಮ ಕಂಪನಿಯ ಬಳಿ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ಟೆಂಟ್ ಇತ್ತು. ಮುಂಜಾನೆ ಸುಮಾರು 9 ಗಂಟೆಗೆ, ಪಡೆಗಳು ನಮ್ಮ ಕಂಪನಿಗೆ ಪ್ರವೇಶಿಸಿದವು. ನಮ್ಮನ್ನು ಲೂಟಿ ಮಾಡಲಾಯಿತು. ಅವರು ನಮ್ಮನ್ನು ಎಂಟು ಗಂಟೆಗಳ ಕಾಲ ಒತ್ತೆಯಾಳಾಗಿ ಇರಿಸಿದರು. ಅವರು ನಮ್ಮ ಎದೆಯ ಮೇಲೆ ರೈಫಲ್‌ಗಳನ್ನು ಇಟ್ಟುಕೊಂಡು ನಮ್ಮನ್ನು ಲೂಟಿ ಮಾಡಿದರು. ನಮ್ಮ ಮೊಬೈಲ್‌ಗಳನ್ನು ಕದ್ದಿದ್ದಾರೆ ಎಂದು ಸ್ಥಳಾಂತರಗೊಂಡ ಮತ್ತೊಬ್ಬ ಭಾರತೀಯ ಹೇಳಿದ್ದಾರೆ.

ನಾವು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುತ್ತೇವೆ ನಮ್ಮಲ್ಲಿ ಡೀಸೆಲ್ ಇರುವುದರಿಂದ ಬಸ್‌ಗಳಿಗೆ ವ್ಯವಸ್ಥೆ ಮಾಡಲು ಹೇಳಿದ್ದೇವೆ. ಭಾರತೀಯ ನೌಕಾಪಡೆಯು ಬಂದು ನಮ್ಮನ್ನು ಚೆನ್ನಾಗಿ ನಡೆಸಿಕೊಂಡಿತು” ಎಂದು ಸುಡಾನ್‌ನಿಂದ ಸ್ಥಳಾಂತರಗೊಂಡ ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:Operation Kaveri: 72 ಗಂಟೆಗಳ ಕದನ ವಿರಾಮದ ನಡುವೆ ಸುಡಾನ್‌ನಿಂದ 534 ನಾಗರಿಕರನ್ನು ಸ್ಥಳಾಂತರಿಸಿದ ಭಾರತ

ರಾಜಧಾನಿ ಖಾರ್ಟೊಮ್​​ನಲ್ಲಿ ಸುಡಾನ್ ಸೇನೆ ಮತ್ತು ಅರೆಸೇನಾ ಗುಂಪುಗಳ ನಡುವಿನ ಕಾಳಗ ತೀವ್ರಗೊಂಡಿದ್ದು, ಕದನ ಪೀಡಿತ ಸುಡಾನ್‌ನಿಂದ  ಭಾರತ ‘ಆಪರೇಷನ್ ಕಾವೇರಿ’ ಅಡಿಯಲ್ಲಿ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯ ಮಾಡುತ್ತಿದೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ತಿಳಿಸಿದ್ದಾರೆ.

ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ ಕಾವೇರಿ ನಡೆಯುತ್ತಿದೆ. ಸುಮಾರು 500 ಭಾರತೀಯರು ಸುಡಾನ್ ಬಂದರು ತಲುಪಿದ್ದಾರೆ. ನಮ್ಮ ಹಡಗುಗಳು ಮತ್ತು ವಿಮಾನಗಳು ಅವರನ್ನು ಮನೆಗೆ ಕರೆತರಲು ಸಜ್ಜಾಗಿವೆ. ಸಹಾಯ ಮಾಡಲು ಬದ್ಧವಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:14 pm, Wed, 26 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ