AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣಕ್ಕೊಳಗಾಗಿದ್ದ ಹಡಗಿನಿಂದ ಪಾರಾದ ಭಾರತೀಯರಿಂದ ಭಾರತ್ ಮಾತಾ ಕೀ ಜೈ ಘೋಷಣೆ

ನೌಕಾಪಡೆಯಿಂದ ರಕ್ಷಿಸಲ್ಪಟ್ಟವರಲ್ಲಿ ಒಬ್ಬರು ನಾವು 24 ಗಂಟೆಗಳ ಕಾಲ ಸಿಲುಕಿಕೊಂಡಿದ್ದೆವು. ನೌಕಾಪಡೆ ನಮ್ಮನ್ನು ರಕ್ಷಿಸಿದ ನಂತರ ನಿರಾಳರಾದೆವು ಎಂದು ಹೇಳಿದ್ದಾರೆ. ಭಾರತೀಯ ನೌಕಾಪಡೆಯ ಬಗ್ಗೆ ಹೆಮ್ಮೆಯಿದೆ ಎಂದು ಅಪಹರಿಸಿದ ಹಡಗಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ.

ಅಪಹರಣಕ್ಕೊಳಗಾಗಿದ್ದ ಹಡಗಿನಿಂದ ಪಾರಾದ ಭಾರತೀಯರಿಂದ ಭಾರತ್ ಮಾತಾ ಕೀ ಜೈ ಘೋಷಣೆ
ಹಡಗಿನಿಂದ ಪಾರಾದ ನಂತರ ಘೋಷಣೆ ಕೂಗುತ್ತಿರುವ ಭಾರತೀಯರು
ರಶ್ಮಿ ಕಲ್ಲಕಟ್ಟ
|

Updated on: Jan 06, 2024 | 4:19 PM

Share

ದೆಹಲಿ ಜನವರಿ 06: ಸೊಮಾಲಿಯಾ (Somalia) ಕರಾವಳಿಯ ಬಳಿ ಅಪಹರಣಕ್ಕೊಳಗಾದ (hijacked vessel) ಸರಕು ಹಡಗಿನಲ್ಲಿದ್ದ 15 ಭಾರತೀಯರು ಸೇರಿದಂತೆ ಎಲ್ಲಾ 21 ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ  (Indian Navy) ಶುಕ್ರವಾರ ರಕ್ಷಿಸಿದೆ. ಭಾರತೀಯ ನೌಕಾಪಡೆಯು ಹಂಚಿಕೊಂಡ ವಿಡಿಯೊದಲ್ಲಿ, ರಕ್ಷಿಸಲ್ಪಟ್ಟ ಭಾರತೀಯರು “ಭಾರತ್ ಮಾತಾ ಕೀ ಜೈ” ಎಂದು ಘೋಷಣೆ ಮಾಡಿದ್ದು, ಸುರಕ್ಷಿತವಾಗಿ ರಕ್ಷಿಸಿದ್ದಕ್ಕಾಗಿ ನೌಕಾಪಡೆಗೆ ಧನ್ಯವಾದ ಅರ್ಪಿಸಿದ್ದಾರೆ.

ನೌಕಾಪಡೆಯಿಂದ ರಕ್ಷಿಸಲ್ಪಟ್ಟವರಲ್ಲಿ ಒಬ್ಬರು ನಾವು 24 ಗಂಟೆಗಳ ಕಾಲ ಸಿಲುಕಿಕೊಂಡಿದ್ದೆವು. ನೌಕಾಪಡೆ ನಮ್ಮನ್ನು ರಕ್ಷಿಸಿದ ನಂತರ ನಿರಾಳರಾದೆವು ಎಂದು ಹೇಳಿದ್ದಾರೆ. ಭಾರತೀಯ ನೌಕಾಪಡೆಯ ಬಗ್ಗೆ ಹೆಮ್ಮೆಯಿದೆ ಎಂದು ಅಪಹರಿಸಿದ ಹಡಗಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ.

ನೌಕಾಪಡೆಗೆ ಗುರುವಾರ ಸಂಜೆ 15 ಭಾರತೀಯರು ಸೇರಿದಂತೆ 21 ಸಿಬ್ಬಂದಿಗಳೊಂದಿಗೆ ಸರಕು ಹಡಗನ್ನು ಹೈಜಾಕ್ ಮಾಡುವ ಕರೆ ಬಂದಿದ್ದು, ತಕ್ಷಣವೇ ಹಡಗನ್ನು ರಕ್ಷಿಸುವುದಕ್ಕಾಗಿ ನೌಕಾಪಡೆ ಯುದ್ಧನೌಕೆ, ಕಡಲ ಗಸ್ತು ವಿಮಾನ, ಹೆಲಿಕಾಪ್ಟರ್‌ಗಳು ಮತ್ತು ಪ್ರಿಡೇಟರ್ MQ9B ಡ್ರೋನ್‌ಗಳನ್ನು ನಿಯೋಜಿಸಿದೆ.

ಇದನ್ನೂ ಓದಿ: ಅಪಹರಣಕ್ಕೊಳಗಾದ ಎಂವಿ ಲೀಲಾ ನಾರ್ಫೋಕ್‌ ಹಡಗನ್ನು ಭಾರತೀಯ ನೌಕಾಪಡೆ ರಕ್ಷಿಸಿದ್ದು ಹೀಗೆ

ಹಡಗಿನಲ್ಲಿನ ಕಾರ್ಯಾಚರಣೆ ನಂತರ ಮರೀನ್ ಕಮಾಂಡೋಗಳು ಹಡಗಿನಲ್ಲಿ ಅಪಹರಣಕಾರರು ಇಲ್ಲ ಎಂದು ಖಚಿಕಪಡಿಸಿದೆ. ಎಂವಿ ಲೀಲಾ ನಾರ್ಫೋಕ್‌ನ ಎಲ್ಲಾ 21 ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಭಾರತೀಯ ನೌಕಾ ಪಡೆಗಳು ಈ ಪ್ರದೇಶದಲ್ಲಿ ಶಂಕಿತ ಹಡಗುಗಳ ಬಗ್ಗೆ ತನಿಖೆ ನಡೆಸುತ್ತಿವೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಸ್ತುತ ಎಂವಿಯ ಸಿಬ್ಬಂದಿ ಪ್ರೊಪಲ್ಷನ್, ವಿದ್ಯುತ್ ಸರಬರಾಜು ಮತ್ತು ಸ್ಟೀರಿಂಗ್ ಗೇರ್ ಅನ್ನು ಮರುಸ್ಥಾಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ನಂತರ, ಭಾರತೀಯ ನೌಕಾ ಯುದ್ಧನೌಕೆಯ ಬೆಂಗಾವಲು ಅಡಿಯಲ್ಲಿ ಹಡಗು ತನ್ನ ಗಮ್ಯಸ್ಥಾನಕ್ಕೆ ಹೊರಡಲಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ