AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು

ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ. 

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು
ಏರ್ ಇಂಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on: Jun 08, 2023 | 1:19 PM

Share

ದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ನಂತರ ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI173 ಎಂಜಿನ್‌ನಲ್ಲಿ ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅಭಿವೃದ್ಧಿಪಡಿಸಲಾಗಿತ್ತು. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಹೇಳಿದರು. ವಿಮಾನದ ತಾಂತ್ರಿಕ ದೋಷದ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದರು, ನಂತರ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಇದೀಗ ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ.

ಇದನ್ನೂ ಓದಿ:Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಹಲವು ಪ್ರಯಾಣಿಕರು ಭಾಷೆಯ ಸಮಸ್ಯೆ ಎದುರಿಸುತ್ತಿದ್ದು ಪರಿಚಯವಿಲ್ಲದ ಊರಲ್ಲಿ ಆಹಾರ, ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರಷ್ಯಾದಿಂದ ಎನ್‌ಡಿಟಿವಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಮಾನದಲ್ಲಿದ್ದ ಪ್ರಯಾಣಿಕ ಗಗನ್, ಪರಿಸ್ಥಿತಿಯನ್ನು ಸವಾಲಿನದ್ದು ಎಂದು ಅಲ್ಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ