Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು

ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ. 

Air India: ಏರ್ ಇಂಡಿಯಾ ವಿಮಾನದ ಮೂಲಕ ರಷ್ಯಾದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿದ ಭಾರತೀಯರು
ಏರ್ ಇಂಡಿಯಾ

Updated on: Jun 08, 2023 | 1:19 PM

ದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ನಂತರ ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಾಗುವುದು ಎಂದು ಏರ್ ಇಂಡಿಯಾ ಜೂ. 7ರಂದು ತಿಳಿಸಿತ್ತು. ಇದೀಗ ಪೂರ್ವ ರಷ್ಯಾದಲ್ಲಿರುವ ಮಗದನ್‌ನಿಂದ  ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ  ಎಂದು ಪಿಟಿಐ ತಿಳಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI173 ಎಂಜಿನ್‌ನಲ್ಲಿ ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅಭಿವೃದ್ಧಿಪಡಿಸಲಾಗಿತ್ತು. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಹೇಳಿದರು. ವಿಮಾನದ ತಾಂತ್ರಿಕ ದೋಷದ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದರು, ನಂತರ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದು, ಇದೀಗ ಸ್ಯಾನ್ ಫ್ರಾನ್ಸಿಸ್ಕೋಗೆ ಬಂದಿಳಿದಿದೆ.

ಇದನ್ನೂ ಓದಿ:Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ ಹಲವು ಪ್ರಯಾಣಿಕರು ಭಾಷೆಯ ಸಮಸ್ಯೆ ಎದುರಿಸುತ್ತಿದ್ದು ಪರಿಚಯವಿಲ್ಲದ ಊರಲ್ಲಿ ಆಹಾರ, ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ರಷ್ಯಾದಿಂದ ಎನ್‌ಡಿಟಿವಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ವಿಮಾನದಲ್ಲಿದ್ದ ಪ್ರಯಾಣಿಕ ಗಗನ್, ಪರಿಸ್ಥಿತಿಯನ್ನು ಸವಾಲಿನದ್ದು ಎಂದು ಅಲ್ಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿದ್ದಾರೆ.

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us