AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

Omicron Cases In India: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್​ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್​​ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್​ ಪತ್ತೆಯಾಗಿತ್ತು

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 05, 2021 | 12:10 PM

Share

ಭಾರತದಲ್ಲಿ ಒಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೆ ಏರಿಕೆಯಾಗುತ್ತಿವೆ. ಇದೀಗ ದೆಹಲಿಯಲ್ಲಿ 5ನೇ ಕೇಸ್​ ಪತ್ತೆಯಾಗಿದೆ. ದೆಹಲಿಯಲ್ಲಿ ಮೊದಲನೇ  ಒಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದೆ. ಸೋಂಕಿತನನ್ನು ಎಲ್​​ಎನ್​​ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಟಾಂಜಾನಿಯದಿಂದ ಬಂದವರಾಗಿದ್ದರು. ಹಾಗೇ, ಇನ್ನೂ 17 ಮಂದಿಯಲ್ಲಿ ಕೊವಿಡ್​ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. 

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್​ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿ ಇಬ್ಬರಲ್ಲಿ ವೈರಸ್ ದೃಢಪಟ್ಟ ಮರುದಿನ ಗುಜರಾತ್​​ 75ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್​ ಪತ್ತೆಯಾಗಿತ್ತು. ಅವರು ಜಿಂಬಾಬ್ವೆಯಿಂದ ಗುಜರಾತ್​ನ ಜಾಮ್​ನಗರಕ್ಕೆ ಬಂದವರಾಗಿದ್ದರು. ಹಾಗೇ, ನಿನ್ನೆ ಮಹಾರಾಷ್ಟ್ರದ ದೊಂಬಿವ್ಲಿಯ 33ವರ್ಷದ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರ ಜತೆಗೆ ಬಂದವರನ್ನೆಲ್ಲ ಟ್ರೇಸ್​ ಮಾಡಿ ತಪಾಸಣೆಗೆ ಒಳಪಡಿಸಲಾಗಿದೆ. ಅವರು ದಕ್ಷಿಣ ಆಫ್ರಿಕಾದ ಕೇಪ್​ಟೌನ್​​ನಿಂದ ದುಬೈ ಮಾರ್ಗವಾಗಿ ಮುಂಬೈಗೆ ಬಂದಿಳಿದಿದ್ದರು. ಇಂದು 5ನೇ ಕೇಸ್​ ದೆಹಲಿಯಲ್ಲಿ ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.

ಒಮಿಕ್ರಾನ್​ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಮಧ್ಯೆ ಭಾರತದಲ್ಲೂ ಕೂಡ ಒಮಿಕ್ರಾನ್​ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 11:49 am, Sun, 5 December 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು