AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಪ್ರಯುಕ್ತ ವಾಘಾ ಗಡಿಯಲ್ಲಿ ಬಿಎಸ್ಎಫ್-ಪಾಕ್ ಯೋಧರ ನಡುವೆ ಸಿಹಿ ವಿನಿಮಯ

ಭಾರತದ ಗಡಿ ಭದ್ರತಾ ಪಡೆ ಮತ್ತು ಪಾಕಿಸ್ತಾನ ರೇಂಜರ್‌ಗಳು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ ಮಾಡಿಕೊಂಡಿದ್ದು,ಪಾಕ್ ಸೇನೆ ದೀಪಾವಳಿಯ ಶುಭಾಶಯ ತಿಳಿಸಿದೆ.

ದೀಪಾವಳಿ ಪ್ರಯುಕ್ತ ವಾಘಾ ಗಡಿಯಲ್ಲಿ ಬಿಎಸ್ಎಫ್-ಪಾಕ್ ಯೋಧರ ನಡುವೆ ಸಿಹಿ ವಿನಿಮಯ
ಸಿಹಿ ವಿನಿಮಯ ಮಾಡಿದ ಯೋಧರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 24, 2022 | 1:55 PM

Share

ದೆಹಲಿ: ಸೋಮವಾರ ದೀಪಾವಳಿ ಆಚರಣೆಯ ಅಂಗವಾಗಿ ಭಾರತದ ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನ ರೇಂಜರ್‌ಗಳು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ ಮಾಡಿಕೊಂಡರು. ದೀಪಾವಳಿ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಧರ ಜತೆ ಕಾರ್ಗಿಲ್‌ನಲ್ಲಿ ವಂದೇ ಮಾತರಂ ಹಾಡಿ, ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಮೋದಿ A spirited Diwali in Kargil ಎಂದು ಶೀರ್ಷಿಕೆ ನೀಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ಸೈನಿಕರಿಂದ ಸಿಹಿತಿಂಡಿ ವಿನಿಮಯ

ಗಡಿ ಭದ್ರತಾ ಪಡೆಯ (BSF) 176 ಬೆಟಾಲಿಯನ್ ದೀಪಾವಳಿ ಸಂದರ್ಭದಲ್ಲಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಪಶ್ಚಿಮ ಬಂಗಾಳದ ಫುಲ್ಬರಿಯಲ್ಲಿ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (BGB) ಜೊತೆಗೆ ಸಿಹಿ ವಿನಿಮಯ ಮಾಡಿಕೊಂಡಿತು.

ಯೋಧರೊಂದಿಗೆ ದೀಪಾವಳಿ ಆಚರಿಸಲು ರಜೌರಿಗೆ ಆಗಮಿಸಿದ ಜನರಲ್ ಅನಿಲ್ ಚೌಹಾಣ್

ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಿಯೋಜಿಸಲಾದ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಲು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ರಜೌರಿಗೆ ಆಗಮಿಸಿದರು.

ಸಶಸ್ತ್ರ ಪಡೆಗಳು ಗಡಿಗಳನ್ನು ರಕ್ಷಿಸುತ್ತಿರುವುದರಿಂದ ನೆಮ್ಮದಿಯಿಂದ ಮಲಗಬಹುದು

ಸಶಸ್ತ್ರ ಪಡೆಗಳು ನಮ್ಮ ಗಡಿಯನ್ನು ರಕ್ಷಿಸುತ್ತಿರುವುದರಿಂದ ಭಾರತದ ಪ್ರತಿಯೊಬ್ಬ ಪ್ರಜೆಯೂ ನೆಮ್ಮದಿಯಿಂದ ನಿದ್ರಿಸುತ್ತಿದ್ದಾರೆ ಎಂದು ಪ್ರಧಾನಿ ಕಾರ್ಗಿಲ್‌ನಲ್ಲಿ ಹೇಳಿದರು. “ಭಾರತದ ಸಶಸ್ತ್ರ ಪಡೆಗಳ ಉತ್ಸಾಹಕ್ಕೆ ನಾನು ತಲೆಬಾಗುತ್ತೇನೆ. ನಿಮ್ಮ ತ್ಯಾಗಗಳು ಯಾವಾಗಲೂ ನಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ” ಎಂದು ಅವರು ಹೇಳಿದರು.

“ಕಳೆದ ಎಂಟು ವರ್ಷಗಳಲ್ಲಿ ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದ್ದು 5 ಸ್ಥಾನ ಮೇಲಕ್ಕೇರಿದೆ ಎಂದು ನೀವೆಲ್ಲರೂ ಹೆಮ್ಮೆಪಡುತ್ತೀರಿ ಎಂದು ನನಗೆ ತಿಳಿದಿದೆ. ಪ್ರಪಂಚದಾದ್ಯಂತ ವಿವಿಧ ನಾಗರಿಕತೆಗಳು ಅಭಿವೃದ್ಧಿ ಹೊಂದಿದವು ಮತ್ತು ಅಂತ್ಯಗೊಂಡಿವೆ, ಆದರೆ ಭಾರತದ ನಾಗರಿಕತೆಯು ಯಾವಾಗಲೂ ಸಾಧ್ಯವಿರುವ ಎಲ್ಲ ಸವಾಲುಗಳಿಂದ ಪುನರುಜ್ಜೀವನಗೊಂಡಿದೆ ಎಂದು ಕಾರ್ಗಿಲ್‌ನಲ್ಲಿ ಪ್ರಧಾನಿ ಮೋದಿ ಹೇಳಿದರು.

Published On - 1:51 pm, Mon, 24 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?