AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಪ್ರಯುಕ್ತ ವಾಘಾ ಗಡಿಯಲ್ಲಿ ಬಿಎಸ್ಎಫ್-ಪಾಕ್ ಯೋಧರ ನಡುವೆ ಸಿಹಿ ವಿನಿಮಯ

ಭಾರತದ ಗಡಿ ಭದ್ರತಾ ಪಡೆ ಮತ್ತು ಪಾಕಿಸ್ತಾನ ರೇಂಜರ್‌ಗಳು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ ಮಾಡಿಕೊಂಡಿದ್ದು,ಪಾಕ್ ಸೇನೆ ದೀಪಾವಳಿಯ ಶುಭಾಶಯ ತಿಳಿಸಿದೆ.

ದೀಪಾವಳಿ ಪ್ರಯುಕ್ತ ವಾಘಾ ಗಡಿಯಲ್ಲಿ ಬಿಎಸ್ಎಫ್-ಪಾಕ್ ಯೋಧರ ನಡುವೆ ಸಿಹಿ ವಿನಿಮಯ
ಸಿಹಿ ವಿನಿಮಯ ಮಾಡಿದ ಯೋಧರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 24, 2022 | 1:55 PM

Share

ದೆಹಲಿ: ಸೋಮವಾರ ದೀಪಾವಳಿ ಆಚರಣೆಯ ಅಂಗವಾಗಿ ಭಾರತದ ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನ ರೇಂಜರ್‌ಗಳು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ ಮಾಡಿಕೊಂಡರು. ದೀಪಾವಳಿ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಧರ ಜತೆ ಕಾರ್ಗಿಲ್‌ನಲ್ಲಿ ವಂದೇ ಮಾತರಂ ಹಾಡಿ, ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಮೋದಿ A spirited Diwali in Kargil ಎಂದು ಶೀರ್ಷಿಕೆ ನೀಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ಸೈನಿಕರಿಂದ ಸಿಹಿತಿಂಡಿ ವಿನಿಮಯ

ಗಡಿ ಭದ್ರತಾ ಪಡೆಯ (BSF) 176 ಬೆಟಾಲಿಯನ್ ದೀಪಾವಳಿ ಸಂದರ್ಭದಲ್ಲಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಪಶ್ಚಿಮ ಬಂಗಾಳದ ಫುಲ್ಬರಿಯಲ್ಲಿ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (BGB) ಜೊತೆಗೆ ಸಿಹಿ ವಿನಿಮಯ ಮಾಡಿಕೊಂಡಿತು.

ಯೋಧರೊಂದಿಗೆ ದೀಪಾವಳಿ ಆಚರಿಸಲು ರಜೌರಿಗೆ ಆಗಮಿಸಿದ ಜನರಲ್ ಅನಿಲ್ ಚೌಹಾಣ್

ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಿಯೋಜಿಸಲಾದ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಲು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ರಜೌರಿಗೆ ಆಗಮಿಸಿದರು.

ಸಶಸ್ತ್ರ ಪಡೆಗಳು ಗಡಿಗಳನ್ನು ರಕ್ಷಿಸುತ್ತಿರುವುದರಿಂದ ನೆಮ್ಮದಿಯಿಂದ ಮಲಗಬಹುದು

ಸಶಸ್ತ್ರ ಪಡೆಗಳು ನಮ್ಮ ಗಡಿಯನ್ನು ರಕ್ಷಿಸುತ್ತಿರುವುದರಿಂದ ಭಾರತದ ಪ್ರತಿಯೊಬ್ಬ ಪ್ರಜೆಯೂ ನೆಮ್ಮದಿಯಿಂದ ನಿದ್ರಿಸುತ್ತಿದ್ದಾರೆ ಎಂದು ಪ್ರಧಾನಿ ಕಾರ್ಗಿಲ್‌ನಲ್ಲಿ ಹೇಳಿದರು. “ಭಾರತದ ಸಶಸ್ತ್ರ ಪಡೆಗಳ ಉತ್ಸಾಹಕ್ಕೆ ನಾನು ತಲೆಬಾಗುತ್ತೇನೆ. ನಿಮ್ಮ ತ್ಯಾಗಗಳು ಯಾವಾಗಲೂ ನಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ” ಎಂದು ಅವರು ಹೇಳಿದರು.

“ಕಳೆದ ಎಂಟು ವರ್ಷಗಳಲ್ಲಿ ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದ್ದು 5 ಸ್ಥಾನ ಮೇಲಕ್ಕೇರಿದೆ ಎಂದು ನೀವೆಲ್ಲರೂ ಹೆಮ್ಮೆಪಡುತ್ತೀರಿ ಎಂದು ನನಗೆ ತಿಳಿದಿದೆ. ಪ್ರಪಂಚದಾದ್ಯಂತ ವಿವಿಧ ನಾಗರಿಕತೆಗಳು ಅಭಿವೃದ್ಧಿ ಹೊಂದಿದವು ಮತ್ತು ಅಂತ್ಯಗೊಂಡಿವೆ, ಆದರೆ ಭಾರತದ ನಾಗರಿಕತೆಯು ಯಾವಾಗಲೂ ಸಾಧ್ಯವಿರುವ ಎಲ್ಲ ಸವಾಲುಗಳಿಂದ ಪುನರುಜ್ಜೀವನಗೊಂಡಿದೆ ಎಂದು ಕಾರ್ಗಿಲ್‌ನಲ್ಲಿ ಪ್ರಧಾನಿ ಮೋದಿ ಹೇಳಿದರು.

Published On - 1:51 pm, Mon, 24 October 22

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್