Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ

Covid-19 vaccination ಕಳೆದ ವರ್ಷ ಸೆಪ್ಟೆಂಬರ್ 17ರಂದು ಒಂದೇ ದಿನ 2.5 ಕೋಟಿ ಲಸಿಕೆ ನೀಡಲಾಗಿದ್ದು, ಇದು ಇಲ್ಲಿಯವರೆಗೆ ಅತೀ ಹೆಚ್ಚು ಲಸಿಕೆ ನೀಡಿದ ದಿನವಾಗಿದೆ

ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 17, 2022 | 12:45 PM

ದೆಹಲಿ: 2021 ಜನವರಿ 16ರಂದು ದೇಶದಲ್ಲಿ ಕೋವಿಡ್-19 ಲಸಿಕೆ (Covid-19 vaccination) ನೀಡಿಕೆ ಆರಂಭವಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅಂದರೆ 18 ತಿಂಗಳ ಅವಧಿಯಲ್ಲಿ ಭಾರತದಲ್ಲಿ 200 ಕೋಟಿ ಡೋಸ್ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ. ಶನಿವಾರದ ರಾತ್ರಿವರೆಗೆ 199.97 ಕೋಟಿ ಕೋವಿಡ್ (Covid-19) ಲಸಿಕೆ ನೀಡಲಾಗಿದ್ದು ಇದರಲ್ಲಿ 5.48 ಕೋಟಿ ಮುಂಜಾಗ್ರತಾ ಲಸಿಕೆ ಸೇರಿದೆ. 100 ಕೋಟಿ ಡೋಸ್ ಲಸಿಕೆ ನೀಡಲು 277 ದಿನಗಳು ಬೇಕಾಯಿತು. ಕಳೆದ ವರ್ಷ ಸೆಪ್ಟೆಂಬರ್ 17ರಂದು ಒಂದೇ ದಿನ 2.5 ಕೋಟಿ ಲಸಿಕೆ ನೀಡಲಾಗಿದ್ದು, ಇದು ಇಲ್ಲಿಯವರೆಗೆ ಅತೀ ಹೆಚ್ಚು ಲಸಿಕೆ ನೀಡಿದ ದಿನವಾಗಿದೆ. CoWIN ಪ್ರಕಾರ ದೇಶದಾದ್ಯಂತ 14,000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ. ದೇಶದಲ್ಲಿ ಶೇ 96ರಷ್ಟು ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಶೇ 87ರಷ್ಟು ಮಂದಿ ಎರಡೂ ಡೋಸ್ ಪಡೆದಿದ್ದಾರೆ. ಅವರ್ ವರ್ಲ್ಡ್ ಇನ್ ಡೇಟಾದ (Our World in Data) ಪ್ರಕಾರ ಜಗತ್ತಿನ ಶೇ 62.1 ಜನರು ಎರಡೂ ಲಸಿಕೆಗಳನ್ನು ಪಡೆದಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಈ ವಾರ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರಿಗೆ ದೇಶದಾದ್ಯಂತ ಉಚಿತ ಮುಂಜಾಗ್ರತಾ ಡೋಸ್ ನೀಡಲು 75 ದಿನಗಳ ಲಸಿಕೆ ಅಭಿಯಾನ ಆರಂಭಿಸಿದೆ. ಇಲ್ಲಿಯವರೆಗೆ 18-58ರ ನಡುವಿನ ವಯಸ್ಸಿನ 77.10 ಕೋಟಿ ಜನಸಂಖ್ಯೆಯಲ್ಲಿ ಶೇ 1ಕ್ಕಿಂತ ಕಡಿಮೆ ಜನರು ಬೂಸ್ಟರ್ ಡೋಸ್ ಪಡೆದಿದ್ದಾರೆ .

ಆರೋಗ್ಯ ಸಚಿವಾಲಯವು ಕಳೆದ ವಾರ ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ನ ಅಂತರವನ್ನು 9 ತಿಂಗಳಿನಿಂದ 6 ತಿಂಗಳಿಗೆ ಇಳಿಸಿತ್ತು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,449 ಆಗಿದೆ.

Published On - 12:43 pm, Sun, 17 July 22

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ