AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ

Covid-19 vaccination ಕಳೆದ ವರ್ಷ ಸೆಪ್ಟೆಂಬರ್ 17ರಂದು ಒಂದೇ ದಿನ 2.5 ಕೋಟಿ ಲಸಿಕೆ ನೀಡಲಾಗಿದ್ದು, ಇದು ಇಲ್ಲಿಯವರೆಗೆ ಅತೀ ಹೆಚ್ಚು ಲಸಿಕೆ ನೀಡಿದ ದಿನವಾಗಿದೆ

ಕೊವಿಡ್ ಲಸಿಕೆ ನೀಡಿಕೆಯಲ್ಲಿ 200 ಕೋಟಿ ಮೈಲುಗಲ್ಲು ದಾಟಿದ ಭಾರತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 17, 2022 | 12:45 PM

Share

ದೆಹಲಿ: 2021 ಜನವರಿ 16ರಂದು ದೇಶದಲ್ಲಿ ಕೋವಿಡ್-19 ಲಸಿಕೆ (Covid-19 vaccination) ನೀಡಿಕೆ ಆರಂಭವಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅಂದರೆ 18 ತಿಂಗಳ ಅವಧಿಯಲ್ಲಿ ಭಾರತದಲ್ಲಿ 200 ಕೋಟಿ ಡೋಸ್ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ. ಶನಿವಾರದ ರಾತ್ರಿವರೆಗೆ 199.97 ಕೋಟಿ ಕೋವಿಡ್ (Covid-19) ಲಸಿಕೆ ನೀಡಲಾಗಿದ್ದು ಇದರಲ್ಲಿ 5.48 ಕೋಟಿ ಮುಂಜಾಗ್ರತಾ ಲಸಿಕೆ ಸೇರಿದೆ. 100 ಕೋಟಿ ಡೋಸ್ ಲಸಿಕೆ ನೀಡಲು 277 ದಿನಗಳು ಬೇಕಾಯಿತು. ಕಳೆದ ವರ್ಷ ಸೆಪ್ಟೆಂಬರ್ 17ರಂದು ಒಂದೇ ದಿನ 2.5 ಕೋಟಿ ಲಸಿಕೆ ನೀಡಲಾಗಿದ್ದು, ಇದು ಇಲ್ಲಿಯವರೆಗೆ ಅತೀ ಹೆಚ್ಚು ಲಸಿಕೆ ನೀಡಿದ ದಿನವಾಗಿದೆ. CoWIN ಪ್ರಕಾರ ದೇಶದಾದ್ಯಂತ 14,000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ. ದೇಶದಲ್ಲಿ ಶೇ 96ರಷ್ಟು ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಶೇ 87ರಷ್ಟು ಮಂದಿ ಎರಡೂ ಡೋಸ್ ಪಡೆದಿದ್ದಾರೆ. ಅವರ್ ವರ್ಲ್ಡ್ ಇನ್ ಡೇಟಾದ (Our World in Data) ಪ್ರಕಾರ ಜಗತ್ತಿನ ಶೇ 62.1 ಜನರು ಎರಡೂ ಲಸಿಕೆಗಳನ್ನು ಪಡೆದಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಈ ವಾರ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರಿಗೆ ದೇಶದಾದ್ಯಂತ ಉಚಿತ ಮುಂಜಾಗ್ರತಾ ಡೋಸ್ ನೀಡಲು 75 ದಿನಗಳ ಲಸಿಕೆ ಅಭಿಯಾನ ಆರಂಭಿಸಿದೆ. ಇಲ್ಲಿಯವರೆಗೆ 18-58ರ ನಡುವಿನ ವಯಸ್ಸಿನ 77.10 ಕೋಟಿ ಜನಸಂಖ್ಯೆಯಲ್ಲಿ ಶೇ 1ಕ್ಕಿಂತ ಕಡಿಮೆ ಜನರು ಬೂಸ್ಟರ್ ಡೋಸ್ ಪಡೆದಿದ್ದಾರೆ .

ಆರೋಗ್ಯ ಸಚಿವಾಲಯವು ಕಳೆದ ವಾರ ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ನ ಅಂತರವನ್ನು 9 ತಿಂಗಳಿನಿಂದ 6 ತಿಂಗಳಿಗೆ ಇಳಿಸಿತ್ತು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,449 ಆಗಿದೆ.

Published On - 12:43 pm, Sun, 17 July 22

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು