AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ

PM Modi on Congress Guarantees; ಭ್ರಷ್ಟಾಚಾರ, ನಿರುದ್ಯೋಗ, ತುಷ್ಟಿಕರಣ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್​ನವರು ನೀಡುತ್ತಿದ್ದಾರೆ. ಇವರು ಯಾವತ್ತಿಗೂ ಭಾರತವನ್ನು ಮೂರನೇ ಬಲಿಷ್ಠ ಆರ್ಥಿಕತೆ ಮಾಡುವ ಗ್ಯಾರಂಟಿ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟೀಕಾ ಪ್ರಹಾರ ನಡೆಸಿದರು. ಆ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದರು.

ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ
ಲೋಕಸಭೆಯಲ್ಲಿ ಪ್ರಧಾನಿ ಮೋದಿImage Credit source: ANI
Follow us
TV9 Web
| Updated By: Ganapathi Sharma

Updated on:Aug 10, 2023 | 8:06 PM

ನವದೆಹಲಿ: ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಸಭೆಯಲ್ಲಿ ವಾಗ್ದಾಳಿ ನಡೆಸಿದ್ದು, ಭಾರತದ ಆರ್ಥಿಕತೆ ಮುಳುಗಿಸುವ ಖಾತರಿಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ (No-Confidence motion) ಲೋಕಸಭೆಯಲ್ಲಿ ಗುರುವಾರ ಉತ್ತರಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ನಿರುದ್ಯೋಗ, ತುಷ್ಟಿಕರಣ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕಾಂಗ್ರೆಸ್​ನವರು ನೀಡುತ್ತಿದ್ದಾರೆ. ಇವರು ಯಾವತ್ತಿಗೂ ಭಾರತವನ್ನು ಮೂರನೇ ಬಲಿಷ್ಠ ಆರ್ಥಿಕತೆ ಮಾಡುವ ಗ್ಯಾರಂಟಿ ನೀಡುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. ಆ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮೋದಿ ಪರೋಕ್ಷವಾಗಿ ಪ್ರಸ್ತಾಪಿಸಿದರು.

ಮಣಿಪುರದ ಘಟನೆ ಬಗ್ಗೆ ಬುಧವಾರ ಗೃಹ ಸಚಿವ ಅಮಿತ್ ಶಾ ವಿಸ್ತಾರವಾಗಿ ಎಲ್ಲವನ್ನೂ ಹೇಳಿದ್ದಾರೆ. ಅಮಿತ್ ಶಾ ಮಾತಿನ ಬಳಿಕ ವಿಪಕ್ಷಗಳು ಎಷ್ಟು ಸುಳ್ಳು ಹೇಳಿವೆ ಎಂಬುದು ಬಯಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಶುರುವಾದಗಿನಿಂದ ಬಹಳಷ್ಟು ಜನರು ತಮ್ಮವರನ್ನು ಕಳೆದುಕೊಂಡಿದ್ದಾರೆ. ಮಹಿಳೆಯರ ಜೊತೆಗೆ ಕೆಟ್ಟದಾಗಿ ನಡೆದುಕೊಳ್ಳಲಾಗಿದೆ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ. ಮಾತುಕತೆ ನಡೆಯುತ್ತಿದೆ, ಶಾಂತಿ ಮರುಕಳಿಸಲಿದೆ ಎಂದು ಪ್ರಧಾನಿ ಹೇಳಿದರು.

ದೇಶ ನಿಮ್ಮ ಜೊತೆಗೆ ಇದೆ, ಸದನ ನಿಮ್ಮ ಜೊತೆಗಿದೆ. ಎಲ್ಲರೂ ಸೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೊಣ ಎಂದು ಮಣಿಪುರ ಜನರಲ್ಲಿ ಮೋದಿ ಮನವಿ ಮಾಡಿದರು.

ಮಣಿಪುರ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ. ಮಣಿಪುರದ ಬಗ್ಗೆ ಚರ್ಚಿಸಲು ವಿಪಕ್ಷ ನಾಯಕರಿಗೆ ಆಸಕ್ತಿ ಇಲ್ಲ. ಇಡೀ ದೇಶ ಮಣಿಪುರದ ಮಹಿಳೆಯರು, ಹೆಣ್ಮಕ್ಕಳ ಜೊತೆ ಇದೆ. ಭಾರತಕ್ಕೆ ಸೇರಿದ ದ್ವೀಪ ಪ್ರದೇಶವನ್ನು ಶ್ರೀಲಂಕಾಗೆ ನೀಡಲಾಗಿದೆ. ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ಶ್ರೀಲಂಕಾಗೆ ನೀಡಲಾಗಿತ್ತು. ಮಣಿಪುರದಲ್ಲಿ ಹಿಂಸಾಚಾರ ನಡೆಸಿದವರ ವಿರುದ್ಧ ಕ್ರಮ ಖಚಿತ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ದೇಶವೇ ನಿಮ್ಮ ಜತೆಗಿದೆ: ಮಣಿಪುರದ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಆಶ್ವಾಸನೆ ನೀಡಿದ ಮೋದಿ

ಪ್ರಜಾಪ್ರಭುತ್ವ, ಸಂವಿಧಾನ ಹತ್ಯೆ ಬಗ್ಗೆ ಮಾತನಾಡುವ ಜನರು ಇಂದು ಭಾರತ ಮಾತೆಯ ಹತ್ಯೆಯ ಬಗ್ಗೆ ಮಾತನಾಡುತ್ತಿದ್ದಾರೆ. ಅಗಸ್ಟ್ 14 ದೇಶ ವಿಭಜನೆಯ ದಿನ. ಭಾರತ‌ಮಾತೆಯನ್ನು ಮೂರು ಭಾಗಗಳಾಗಿ ಒಡೆದವರು ಇವರೇ. ಇವರು ಯಾವ ಬಾಯಿಯಿಂದ ಮಾತನಾಡುವ ಧೈರ್ಯ ಮಾಡುತ್ತಾರೆ ಎಂದು ಮೋದಿ ಕಿಡಿಕಾರಿದರು.

ಜೀವನದ ಕಣಕಣವನ್ನೂ ದೇಶಕ್ಕಾಗಿ ಮೀಸಲಿಟ್ಟಿದ್ದೇನೆ; ಮೋದಿ

ನನ್ನ ಜೀವನದ ಪ್ರತಿ ಕಣಕಣವನ್ನೂ ದೇಶಕ್ಕಾಗಿ ಮೀಸಲಿಟ್ಟಿದ್ದೇನೆ. ದೇಶದ ಜನರ ಅಭಿವೃದ್ಧಿಗಾಗಿಯೇ ನಾವು ಇರೋದು. ಇದು ನಮ್ಮ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕಾಂಗ್ರೆಸ್‌ನಿಂದ ದೇಶಕ್ಕೆ ಸಿಕ್ಕಿರುವುದು ಬರೀ ನಿರಾಶೆ ಮಾತ್ರ. ಅವಿಶ್ವಾಸ ನಿರ್ಣಯ ಮಂಡನೆಗೂ ಮುನ್ನವೇ ಸಿದ್ಧರಾಗಿ ಬನ್ನಿ ಎಂದು ಪ್ರಧಾನಿ ಅವರು ಕಾಂಗ್ರೆಸ್‌ ಹಾಗೂ ಇತರ ವಿಪಕ್ಷ ನಾಯಕರ ಕಾಲೆಳೆದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Thu, 10 August 23

ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್