AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೊಟ್ಟಮೊದಲ ಕೊವಿಡ್-19 ರೋಗಿಗೆ ಮತ್ತೇ ಸೋಂಕು, ತ್ರಿಶೂರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು

ಜನೆವರಿ 30, 2020ರಂದು ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣದ ಮೂರನೇ ವರ್ಷದ ವ್ಯಾಸಂಗದಲ್ಲಿ ತೊಡಗಿದ್ದ ವಿದ್ಯಾರ್ಥಿನಿಯು ಸೆಮಿಸ್ಟರ್ ರಜೆಗೋಸ್ಕರ ಭಾರತಕ್ಕೆ ಮರಳಿ ಕೆಲ ದಿನಗಳ ಬಳಿಕ ಕೊರೋನಾವೈರಸ್​ನಿಂದ ಸೋಂಕಿತಳಾಗಿದ್ದು ಪತ್ತೆಯಾಗಿತ್ತು

ಭಾರತದ ಮೊಟ್ಟಮೊದಲ ಕೊವಿಡ್-19 ರೋಗಿಗೆ ಮತ್ತೇ ಸೋಂಕು, ತ್ರಿಶೂರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು
ತ್ರಿಶೂರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ
TV9 Web
| Edited By: |

Updated on: Jul 13, 2021 | 4:11 PM

Share

ತ್ರಿಶೂರ್, ಕೇರಳ: ಭಾರತದ ಮೊಟ್ಟ ಮೊದಲ ಕೊವಿಡ್​ -19 ಸೋಂಕಿತೆ, ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ಈಗ ಮತ್ತೊಮ್ಮೆ ಸೋಂಕಿಗೊಳಗಾಗಿರುವ ಬಗ್ಗೆ ಕೇರಳದ ತ್ರಿಶೂರ್​ನಿಂದ ವರದಿಯಾಗಿದೆ. ತ್ರಿಶೂರ್ ಜಿಲ್ಲಾ ವೈದ್ಯಾಧಿಕಾರಿ ಡಾ ಕೆ ಜೆ ರೀನಾ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿನಿಯು ಕೊವಿಡ್-19 ಸೋಂಕಿನಿಂದ ಪೀಡಿತಳಾಗಿದ್ದು, ಆಕೆಯ ಆರ್​ಟಿ-ಪಿಸಿಆರ್ ಟೆಸ್ಟ್​​ ಪಾಸಿಟಿವ್ ಬಂದಿದೆ.

‘ಆಕೆ ಮತ್ತೊಮ್ಮೆ ಸೋಂಕಿಗೆ ಈಡಾಗಿದ್ದಾಳೆ, ಆಕೆಯ ಆಕೆಯ ಆರ್​ಟಿ-ಪಿಸಿಆರ್ ಟೆಸ್ಟ್​​ ಪಾಸಿಟಿವ್ ಬಂದಿದೆ ಮತ್ತು ಆಂಟಿಜೆನ್ ನೆಗೆಟಿವ್ ಇದೆ. ಆಕೆ ಎಸಿಂಪ್ಟೋಮ್ಯಾಟಿಕ್ ಆಗಿದ್ದಾಳೆ,’ ಎಂದು ಡಾ ರೀನಾ ಸುದ್ದಿಸಂಸ್ಥೆಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ವಿದ್ಯಾಭ್ಯಾಸಕ್ಕೋಸ್ಕರ ದೆಹಲಿಗೆ ಹೋಗುವ ತಯಾರಿ ನಡೆಸಿದ್ದರಿಂದ ಆಕೆಯ ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಲಾಗಿತ್ತು. ಆದರೆ ಆಕೆಯ ಆರ್​ಟಿ-ಪಿಸಿಆರ್ ಟೆಸ್ಟ್ ರಿಸಲ್ಟ್ ಪಾಸಿಟಿವ್ ಬಂದಿದೆ, ಸದ್ಯಕ್ಕೆ ಆಕೆ ಮನೆಯಲ್ಲೇ ಇದ್ದಾಳೆ, ಯಾವುದೇ ಸಮಸ್ಯೆಯಿಲ್ಲ,’ ಎಂದು ಡಾ ರೀನಾ ಹೇಳಿದ್ದಾರೆ.

ಜನೆವರಿ 30, 2020ರಂದು ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣದ ಮೂರನೇ ವರ್ಷದ ವ್ಯಾಸಂಗದಲ್ಲಿ ತೊಡಗಿದ್ದ ವಿದ್ಯಾರ್ಥಿನಿಯು ಸೆಮಿಸ್ಟರ್ ರಜೆಗೋಸ್ಕರ ಭಾರತಕ್ಕೆ ಮರಳಿ ಕೆಲ ದಿನಗಳ ಬಳಿಕ ಕೊರೋನಾವೈರಸ್​ನಿಂದ ಸೋಂಕಿತಳಾಗಿದ್ದು ಪತ್ತೆಯಾಗಿತ್ತು. ಆಕೆಯೇ ಭಾರತದ ಮೊಟ್ಟಮೊದಲ ಕೋವಿಡ್​-19 ರೋಗಿ ಎನ್ನಲಾಗಿದೆ.

ಅದಾದ ನಂತರ ಆಕೆಯನ್ನು ತ್ರಿಶೂರ್ ಮೆಡಿಕಲ್ ಕಾಲೇಜ್ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಪೂರ್ಣಗೊಂಡ ಬಳಿಕ ಎರಡು ಬಾರಿ ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಿ ನೆಗೆಟಿವ್ ಅನ್ನೋದು ಖಾತ್ರಿಯಾದ ನಂತರವೇ ಆಕೆಯನ್ನು ಫೆಬ್ರವರಿ 20, 2020 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಆದರೆ, ರೋಗದಿಂದ ಗುಣಮುಕ್ತಳಾದ ಒಂದೂವರೆ ವರ್ಷದ ನಂತರ ಆಕೆಗೆ ಪುನಃ ಸೋಂಕು ತಾಕಿದೆ.

ಇದನ್ನೂ ಓದಿ: ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ; ದಕ್ಷಿಣ ಕನ್ನಡ ಅನ್​ಲಾಕ್ ಕೆಟಗೆರಿ 1ರ ಪಟ್ಟಿಗೆ ಸೇರ್ಪಡೆ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್