AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Top News: ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾಗುತ್ತಾ ಕೋವ್ಯಾಕ್ಸಿನ್?

ಕೊರೊನಾ ಮಹಾಮಾರಿಗೆ ಕೊನೆಗೂ ಸಿಕ್ತಾ ಔಷಧಿ ಅನ್ನೋ ಆಶಾಭಾವನೆ ಮೂಡಿದೆ. ಯಾಕಂದ್ರೆ, ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದೆ. ಕೊರೊನಾ ಸೋಂಕಿತರಿಗೆ ಕೋವ್ಯಾಕ್ಸಿನ್ ಸಂಜೀವಿನಿಯಾಗುತ್ತಾ ಆಗುವ ಆಸೆ ಮೂಡಿದೆ. ಮನುಷ್ಯರ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯದಿಂದ ಒಪ್ಪಿಗೆ ನೀಡಿದ್ದು, ಜುಲೈ ತಿಂಗಳಲ್ಲಿ ದೇಶಾದ್ಯಂತ ಕೋವ್ಯಾಕ್ಸಿನ್ ಪ್ರಯೋಗ ನಡೆಯಲಿದೆ. ಕೊರೊನಾ ಕಂಟಕ ಭಾರತದಲ್ಲಿ ಕೊರೊನಾ ವೈರಸ್​ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 5 ಲಕ್ಷ 67 ಸಾವಿರದ 536ಕ್ಕೆ ಏರಿಕೆಯಾಗಿದೆ. ದೇಶದಲ್ಲಿ […]

Top News: ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾಗುತ್ತಾ ಕೋವ್ಯಾಕ್ಸಿನ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 5:10 PM

Share

ಕೊರೊನಾ ಮಹಾಮಾರಿಗೆ ಕೊನೆಗೂ ಸಿಕ್ತಾ ಔಷಧಿ ಅನ್ನೋ ಆಶಾಭಾವನೆ ಮೂಡಿದೆ. ಯಾಕಂದ್ರೆ, ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದೆ. ಕೊರೊನಾ ಸೋಂಕಿತರಿಗೆ ಕೋವ್ಯಾಕ್ಸಿನ್ ಸಂಜೀವಿನಿಯಾಗುತ್ತಾ ಆಗುವ ಆಸೆ ಮೂಡಿದೆ. ಮನುಷ್ಯರ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯದಿಂದ ಒಪ್ಪಿಗೆ ನೀಡಿದ್ದು, ಜುಲೈ ತಿಂಗಳಲ್ಲಿ ದೇಶಾದ್ಯಂತ ಕೋವ್ಯಾಕ್ಸಿನ್ ಪ್ರಯೋಗ ನಡೆಯಲಿದೆ.

ಕೊರೊನಾ ಕಂಟಕ ಭಾರತದಲ್ಲಿ ಕೊರೊನಾ ವೈರಸ್​ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 5 ಲಕ್ಷ 67 ಸಾವಿರದ 536ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾಗೆ 16 ಸಾವಿರದ 904 ಜನರು ಬಲಿಯಾಗಿದ್ದು, 3 ಲಕ್ಷ 35 ಸಾವಿರದ 723 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ 2 ಲಕ್ಷ 15 ಸಾವಿರದ 361 ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮಹಿಳಾ ದೌರ್ಜನ್ಯ ಇಳಿಕೆ ಕೊರೊನಾ ವೈರಸ್ ಬಂದಾಗಿನಿಂದ ಮಹಿಳೆಯರ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ಪ್ರಮಾಣ ಇಳಿಕೆಯಾಗಿದೆಯಂತೆ. ದೆಹಲಿ ಮಹಿಳಾ ಆಯೋಗದ ಪ್ರಕಾರ, ಲಾಕ್​ಡೌನ್ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸಾಚಾರ, ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಹಿಳಾ ಆಯೋಗಕ್ಕೆ ಬರುವ ದೂರುಗಳ ಸಂಖ್ಯೆಯೂ ಕಡಿಮೆಯಾಗಿದೆ. ಕೇವಲ ಆಹಾರ ಮತ್ತು ಅಂತಾರಾಜ್ಯ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ ಬಗ್ಗೆಯಷ್ಟೇ ದೂರುಗಳು ಬಂದಿವೆ ಅಂತಾ ಹೇಳಿದೆ.

ಸೋಂಕಿತರು ರಕ್ತದಾನ ಮಾಡಬಹುದು..! ಕೊರೊನಾ ವೈರಸ್ ಬಂದ್ರೆ ಸಾಕು ಆ ವ್ಯಕ್ತಿಯಿಂದ ಮಾರು ದೂರು ಓಡಿ ಹೋಗುವವರೇ ಹೆಚ್ಚು. ಅದ್ರಲ್ಲೂ, ಸೋಂಕಿತ ಆಸ್ಪತ್ರೆಯಲ್ಲಿದ್ರೆ ಆತನನ್ನ ಸ್ಪರ್ಶಿಸಲು ಜನ ಹಿಂದೇಟ ಹಾಕ್ತಾರೆ. ಇನ್ನು ಸೋಂಕಿತನಿಂದ ರಕ್ತದಾನ ಮಾಡಬಹುದಾ ಅಂತಾ ಅಚ್ಚರಿ ಪಡಬೇಡಿ. ರಾಷ್ಟ್ರೀಯ ರಕ್ತದಾನ ವರ್ಗಾವಣೆ ಸಮಿತಿ NBTC ಪ್ರಕಾರ, ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾದ 28 ದಿನಗಳ ಬಳಿಕ ರಕ್ತದಾನ ಮಾಡಬಹುದಾಗಿದೆ ಅಂತಾ ಹೇಳಿದೆ.

ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಕೊರೊನಾ ಸೋಂಕಿನಿಂದಾಗಿ ದೆಹಲಿ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 83 ಸಾವಿರಕ್ಕೆ ಏರಿಕೆಯಾದ್ರೆ, ಮೃತಪಟ್ಟವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ. ಹೀಗಾಗಿ, ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪೊಲೀಸರು ತಪಾಸಣೆ ಹೆಚ್ಚಿಸಿದ್ದಾರೆ. ಇದ್ರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ದೆಹಲಿಯ ಪಶ್ಚಿಮ ಎಕ್ಸ್​ಪ್ರೆಸ್​ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

53 BSF ಸಿಬ್ಬಂದಿಗೆ ಸೋಂಕು ಕ್ರೂರಿ ಕೊರೊನಾ ವೈರಸ್ ತಡೆಗೆ ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಅಖಾಡದಲ್ಲಿದ್ದಾರೆ. ಆದ್ರೆ, ಇವರಿಗೂ ವೈರಸ್ ಅಟ್ಯಾಕ್ ಮಾಡ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲೇ 53 ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಪ್ರಸ್ತುತ 305 ಗಡಿ ಭದ್ರತಾ ಸಿಬ್ಬಂದಿ ಸೋಂಕಿನಿಂದ ನರಳಾಡುತ್ತಿದ್ದಾರೆ. ಕೇವಲ ನಾಲ್ವರು ಸಿಬ್ಬಂದಿ ಮಾತ್ರ ಸೋಂಕಿನಿಂದ ಗುಣಮುಖರಾಗಿದ್ದಾರೆ.

Published On - 5:04 pm, Tue, 30 June 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ